Homeಮುಖಪುಟಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

ಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

- Advertisement -
- Advertisement -

ಮೊಘಲ್ ಸಾಮ್ರಾಟ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳ ವಿವಾದದ ನಡುವೆ, ಆರ್‌ಎಸ್‌ಎಸ್ ನಾಯಕ ಸುರೇಶ್ ಭಯ್ಯಾಜಿ ಜೋಶಿ ಈ ವಿವಾದವನ್ನು ಅನಗತ್ಯವಾಗಿ ಎತ್ತಲಾಗಿದೆ ಎಂದು ಹೇಳಿದ್ದಾರೆ. “ಔರಂಗಜೇಬ್ ಇಲ್ಲಿ (ಮಹಾರಾಷ್ಟ್ರದಲ್ಲಿ) ನಿಧನರಾಗಿದ್ದು, ಆದ್ದರಿಂದ ಅವರ ಸಮಾಧಿಯನ್ನು ಇಲ್ಲಿ ನಿರ್ಮಿಸಲಾಗಿದೆ. ನಂಬಿಕೆ ಇರುವವರು (ಅಲ್ಲಿಗೆ) ಹೋಗುತ್ತಾರೆ.” ಎಂದು ಅವರು ಹೇಳಿದ್ದಾರೆ. ಔರಂಗಜೇಬ್ ಸಮಾಧಿ

“ನಮ್ಮ ಆದರ್ಶ ಛತ್ರಪತಿ ಶಿವಾಜಿ ಆಗಿದ್ದು, ಅವರು ಅಫ್ಜಲ್ ಖಾನ್ ಸಮಾಧಿಯನ್ನು ಸಹ ನಿರ್ಮಿಸಿದ್ದಾರೆ. ಇದು ಭಾರತದ ಉದಾರತೆ ಮತ್ತು ಒಳಗೊಳ್ಳುವಿಕೆಯನ್ನು ಸಂಕೇತಿಸುತ್ತದೆ. ಸಮಾಧಿ ಅಲ್ಲಿಯೆ ಉಳಿಯಲಿ; ಹೋಗಲು ಬಯಸುವವರು ಅಲ್ಲಿಗೆ ಹೋಗುತ್ತಾರೆ” ಎಂದು ಜೋಶಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಅಂಗಸಂಸ್ಥೆಗಳಾದ ವಿಎಚ್‌ಪಿ ಮತ್ತು ಬಜರಂಗ ದಳವು ಸಂಭಾಜಿ ನಗರದ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆಯ ಸಮಯದಲ್ಲಿ ಪವಿತ್ರ ಚಾದರ್ ಅನ್ನು ಸುಟ್ಟು ಪ್ರವಾದಿಯನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಹಾಗಾಗಿ ಪ್ರತಿಭಟನೆಯು ವಿವಾದಕ್ಕೆ ಕಾರಣವಾಗಿತ್ತು, ಜೊತೆಗೆ ನಾಗ್ಪುರದಲ್ಲಿ ಹಿಂಸಾಚಾರ ಉದ್ಭವವಾಗಿತ್ತು.

ಜೋಶಿ ಅವರ ಹೇಳಿಕೆಗೂ ಮೊದಲು, ಮತ್ತೊಬ್ಬ ಆರ್‌ಎಸ್‌ಎಸ್ ನಾಯಕ ಸುನಿಲ್ ಅಂಬೇಕರ್ ಕೂಡಾ 17 ನೇ ಶತಮಾನದ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಇಂದು ಪ್ರಸ್ತುತವಲ್ಲ ಎಂದು ಹೇಳಿದ್ದರು. ನಾಗ್ಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವು ಯಾವುದೇ ರೀತಿಯ ಕ್ರಮವನ್ನು ಪ್ರೋತ್ಸಾಹಿಸಬಾರದು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಜೋಶಿ ಅವರು ಹೇಳಿಕೆ ನೀಡಿದ್ದಾರೆ. ಶಿವಾಜಿ ಪಾರ್ಕ್‌ನಲ್ಲಿ ನಡೆದ ಗುಡಿ ಪಾಡ್ವಾ ರ್ಯಾಲಿಯಲ್ಲಿ ಮಾತನಾಡಿದ್ದ ಠಾಕ್ರೆ, ಜನರು ಜಾತಿ ಮತ್ತು ಧರ್ಮ ಆಧಾರಿತ ದ್ವೇಷದ ರಾಜಕೀಯಕ್ಕೆ ಬಲಿಯಾಗಬಾರದು ಮತ್ತು ಇತಿಹಾಸವನ್ನು ಕೋಮು ದೃಷ್ಟಿಕೋನದಿಂದ ನೋಡಬಾರದು ಎಂದು ಮನವಿ ಮಾಡಿದ್ದರು.

ಛತ್ರಪತಿ ಶಿವಾಜಿಯ “ಸ್ವರಾಜ್ಯ”ದ ಮೇಲೆ ದಾಳಿ ಮಾಡಿದ ಔರಂಗಜೇಬ್ ಮತ್ತು ಅಫ್ಜಲ್ ಖಾನ್‌ರಂತಹ ಜನರ ಸಮಾಧಿಗಳನ್ನು ಮರಾಠಾ ಶೌರ್ಯದ ಸಂಕೇತವಾಗಿ ಪ್ರದರ್ಶಿಸಲು ಅವುಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದ್ದರು. ಐತಿಹಾಸಿಕ ಮಾಹಿತಿಗಾಗಿ ಜನರು ವಾಟ್ಸಾಪ್ ಫಾರ್ವರ್ಡ್‌ಗಳನ್ನು ಅವಲಂಬಿಸಬಾರದು ಎಂದು ಅವರು ಕೇಳಿಕೊಂಡಿದ್ದರು.

“ಶಿವಾಜಿ ಮಹಾರಾಜರು ಊಳಿಗಮಾನ್ಯ ಪದ್ಧತಿಯ ವಿರುದ್ಧ ಹೋರಾಡುತ್ತಿದ್ದರು. ಎಲ್ಲಾ ಸಮುದಾಯಗಳ ಜನರು ವಿಭಿನ್ನ ಸಾಮ್ರಾಜ್ಯಗಳಿಗಾಗಿ ಕೆಲಸ ಮಾಡಿದ್ದರಿಂದ, ಸೇನಾಧಿಪತಿ ಅಥವಾ ಐತಿಹಾಸಿಕ ವ್ಯಕ್ತಿಗಳ ಜಾತಿ ಮತ್ತು ಧರ್ಮವನ್ನು ನೋಡಬೇಡಿ. ಯುವಕರು ವಾಟ್ಸಾಪ್‌ನಲ್ಲಿ ಇತಿಹಾಸ ಓದುವುದನ್ನು ನಿಲ್ಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಇದು ಸಮಾಜದ ನಿಜವಾದ ಸಮಸ್ಯೆಗಳಿಂದ ನಿಮ್ಮನ್ನು ಬೇರೆಡೆಗೆ ತಿರುಗಿಸುವ ಯೋಜನೆಯಾಗಿದೆ” ಎಂದು ಜೋಶಿ ಹೇಳಿದ್ದಾರೆ.

ಸಮಾಧಿ ವಿವಾದದಿಂದ ದೂರ ಉಳಿದ ಆರ್‌ಎಸ್‌ಎಸ್

ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಲು ವಿಎಚ್‌ಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪವಿತ್ರ ಶ್ಲೋಕಗಳು ಇದ್ದ ‘ಚಾದರ್’ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳು ಹರಡಲಾಗಿತ್ತು. ಹಾಗಾಗಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಆರ್‌ಎಸ್‌ಎಸ್ ವಕ್ತಾರ ಸುನಿಲ್ ಅಂಬೇಕರ್ 17 ನೇ ಶತಮಾನದ ಚಕ್ರವರ್ತಿಯು ಈಗ “ಅಪ್ರಸ್ತುತ” ಎಂದು ಬಣ್ಣಿಸಿದ್ದರು. ಸಮಾಧಿಯನ್ನು ಸ್ಥಳಾಂತರಿಸಬೇಕೇ ಎಂಬ ಪ್ರಶ್ನೆಗೆ ಅವರು “ಇದು ಪ್ರಸ್ತುತವಲ್ಲ” ಎಂದು ಉತ್ತರಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...