Homeಮುಖಪುಟಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

ಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

- Advertisement -
- Advertisement -

ಮೊಘಲ್ ಸಾಮ್ರಾಟ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳ ವಿವಾದದ ನಡುವೆ, ಆರ್‌ಎಸ್‌ಎಸ್ ನಾಯಕ ಸುರೇಶ್ ಭಯ್ಯಾಜಿ ಜೋಶಿ ಈ ವಿವಾದವನ್ನು ಅನಗತ್ಯವಾಗಿ ಎತ್ತಲಾಗಿದೆ ಎಂದು ಹೇಳಿದ್ದಾರೆ. “ಔರಂಗಜೇಬ್ ಇಲ್ಲಿ (ಮಹಾರಾಷ್ಟ್ರದಲ್ಲಿ) ನಿಧನರಾಗಿದ್ದು, ಆದ್ದರಿಂದ ಅವರ ಸಮಾಧಿಯನ್ನು ಇಲ್ಲಿ ನಿರ್ಮಿಸಲಾಗಿದೆ. ನಂಬಿಕೆ ಇರುವವರು (ಅಲ್ಲಿಗೆ) ಹೋಗುತ್ತಾರೆ.” ಎಂದು ಅವರು ಹೇಳಿದ್ದಾರೆ. ಔರಂಗಜೇಬ್ ಸಮಾಧಿ

“ನಮ್ಮ ಆದರ್ಶ ಛತ್ರಪತಿ ಶಿವಾಜಿ ಆಗಿದ್ದು, ಅವರು ಅಫ್ಜಲ್ ಖಾನ್ ಸಮಾಧಿಯನ್ನು ಸಹ ನಿರ್ಮಿಸಿದ್ದಾರೆ. ಇದು ಭಾರತದ ಉದಾರತೆ ಮತ್ತು ಒಳಗೊಳ್ಳುವಿಕೆಯನ್ನು ಸಂಕೇತಿಸುತ್ತದೆ. ಸಮಾಧಿ ಅಲ್ಲಿಯೆ ಉಳಿಯಲಿ; ಹೋಗಲು ಬಯಸುವವರು ಅಲ್ಲಿಗೆ ಹೋಗುತ್ತಾರೆ” ಎಂದು ಜೋಶಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಅಂಗಸಂಸ್ಥೆಗಳಾದ ವಿಎಚ್‌ಪಿ ಮತ್ತು ಬಜರಂಗ ದಳವು ಸಂಭಾಜಿ ನಗರದ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆಯ ಸಮಯದಲ್ಲಿ ಪವಿತ್ರ ಚಾದರ್ ಅನ್ನು ಸುಟ್ಟು ಪ್ರವಾದಿಯನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಹಾಗಾಗಿ ಪ್ರತಿಭಟನೆಯು ವಿವಾದಕ್ಕೆ ಕಾರಣವಾಗಿತ್ತು, ಜೊತೆಗೆ ನಾಗ್ಪುರದಲ್ಲಿ ಹಿಂಸಾಚಾರ ಉದ್ಭವವಾಗಿತ್ತು.

ಜೋಶಿ ಅವರ ಹೇಳಿಕೆಗೂ ಮೊದಲು, ಮತ್ತೊಬ್ಬ ಆರ್‌ಎಸ್‌ಎಸ್ ನಾಯಕ ಸುನಿಲ್ ಅಂಬೇಕರ್ ಕೂಡಾ 17 ನೇ ಶತಮಾನದ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಇಂದು ಪ್ರಸ್ತುತವಲ್ಲ ಎಂದು ಹೇಳಿದ್ದರು. ನಾಗ್ಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವು ಯಾವುದೇ ರೀತಿಯ ಕ್ರಮವನ್ನು ಪ್ರೋತ್ಸಾಹಿಸಬಾರದು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಜೋಶಿ ಅವರು ಹೇಳಿಕೆ ನೀಡಿದ್ದಾರೆ. ಶಿವಾಜಿ ಪಾರ್ಕ್‌ನಲ್ಲಿ ನಡೆದ ಗುಡಿ ಪಾಡ್ವಾ ರ್ಯಾಲಿಯಲ್ಲಿ ಮಾತನಾಡಿದ್ದ ಠಾಕ್ರೆ, ಜನರು ಜಾತಿ ಮತ್ತು ಧರ್ಮ ಆಧಾರಿತ ದ್ವೇಷದ ರಾಜಕೀಯಕ್ಕೆ ಬಲಿಯಾಗಬಾರದು ಮತ್ತು ಇತಿಹಾಸವನ್ನು ಕೋಮು ದೃಷ್ಟಿಕೋನದಿಂದ ನೋಡಬಾರದು ಎಂದು ಮನವಿ ಮಾಡಿದ್ದರು.

ಛತ್ರಪತಿ ಶಿವಾಜಿಯ “ಸ್ವರಾಜ್ಯ”ದ ಮೇಲೆ ದಾಳಿ ಮಾಡಿದ ಔರಂಗಜೇಬ್ ಮತ್ತು ಅಫ್ಜಲ್ ಖಾನ್‌ರಂತಹ ಜನರ ಸಮಾಧಿಗಳನ್ನು ಮರಾಠಾ ಶೌರ್ಯದ ಸಂಕೇತವಾಗಿ ಪ್ರದರ್ಶಿಸಲು ಅವುಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದ್ದರು. ಐತಿಹಾಸಿಕ ಮಾಹಿತಿಗಾಗಿ ಜನರು ವಾಟ್ಸಾಪ್ ಫಾರ್ವರ್ಡ್‌ಗಳನ್ನು ಅವಲಂಬಿಸಬಾರದು ಎಂದು ಅವರು ಕೇಳಿಕೊಂಡಿದ್ದರು.

“ಶಿವಾಜಿ ಮಹಾರಾಜರು ಊಳಿಗಮಾನ್ಯ ಪದ್ಧತಿಯ ವಿರುದ್ಧ ಹೋರಾಡುತ್ತಿದ್ದರು. ಎಲ್ಲಾ ಸಮುದಾಯಗಳ ಜನರು ವಿಭಿನ್ನ ಸಾಮ್ರಾಜ್ಯಗಳಿಗಾಗಿ ಕೆಲಸ ಮಾಡಿದ್ದರಿಂದ, ಸೇನಾಧಿಪತಿ ಅಥವಾ ಐತಿಹಾಸಿಕ ವ್ಯಕ್ತಿಗಳ ಜಾತಿ ಮತ್ತು ಧರ್ಮವನ್ನು ನೋಡಬೇಡಿ. ಯುವಕರು ವಾಟ್ಸಾಪ್‌ನಲ್ಲಿ ಇತಿಹಾಸ ಓದುವುದನ್ನು ನಿಲ್ಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಇದು ಸಮಾಜದ ನಿಜವಾದ ಸಮಸ್ಯೆಗಳಿಂದ ನಿಮ್ಮನ್ನು ಬೇರೆಡೆಗೆ ತಿರುಗಿಸುವ ಯೋಜನೆಯಾಗಿದೆ” ಎಂದು ಜೋಶಿ ಹೇಳಿದ್ದಾರೆ.

ಸಮಾಧಿ ವಿವಾದದಿಂದ ದೂರ ಉಳಿದ ಆರ್‌ಎಸ್‌ಎಸ್

ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಲು ವಿಎಚ್‌ಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪವಿತ್ರ ಶ್ಲೋಕಗಳು ಇದ್ದ ‘ಚಾದರ್’ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳು ಹರಡಲಾಗಿತ್ತು. ಹಾಗಾಗಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಆರ್‌ಎಸ್‌ಎಸ್ ವಕ್ತಾರ ಸುನಿಲ್ ಅಂಬೇಕರ್ 17 ನೇ ಶತಮಾನದ ಚಕ್ರವರ್ತಿಯು ಈಗ “ಅಪ್ರಸ್ತುತ” ಎಂದು ಬಣ್ಣಿಸಿದ್ದರು. ಸಮಾಧಿಯನ್ನು ಸ್ಥಳಾಂತರಿಸಬೇಕೇ ಎಂಬ ಪ್ರಶ್ನೆಗೆ ಅವರು “ಇದು ಪ್ರಸ್ತುತವಲ್ಲ” ಎಂದು ಉತ್ತರಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...