Homeಮುಖಪುಟಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

ಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

- Advertisement -
- Advertisement -

ಮೊಘಲ್ ಸಾಮ್ರಾಟ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳ ವಿವಾದದ ನಡುವೆ, ಆರ್‌ಎಸ್‌ಎಸ್ ನಾಯಕ ಸುರೇಶ್ ಭಯ್ಯಾಜಿ ಜೋಶಿ ಈ ವಿವಾದವನ್ನು ಅನಗತ್ಯವಾಗಿ ಎತ್ತಲಾಗಿದೆ ಎಂದು ಹೇಳಿದ್ದಾರೆ. “ಔರಂಗಜೇಬ್ ಇಲ್ಲಿ (ಮಹಾರಾಷ್ಟ್ರದಲ್ಲಿ) ನಿಧನರಾಗಿದ್ದು, ಆದ್ದರಿಂದ ಅವರ ಸಮಾಧಿಯನ್ನು ಇಲ್ಲಿ ನಿರ್ಮಿಸಲಾಗಿದೆ. ನಂಬಿಕೆ ಇರುವವರು (ಅಲ್ಲಿಗೆ) ಹೋಗುತ್ತಾರೆ.” ಎಂದು ಅವರು ಹೇಳಿದ್ದಾರೆ. ಔರಂಗಜೇಬ್ ಸಮಾಧಿ

“ನಮ್ಮ ಆದರ್ಶ ಛತ್ರಪತಿ ಶಿವಾಜಿ ಆಗಿದ್ದು, ಅವರು ಅಫ್ಜಲ್ ಖಾನ್ ಸಮಾಧಿಯನ್ನು ಸಹ ನಿರ್ಮಿಸಿದ್ದಾರೆ. ಇದು ಭಾರತದ ಉದಾರತೆ ಮತ್ತು ಒಳಗೊಳ್ಳುವಿಕೆಯನ್ನು ಸಂಕೇತಿಸುತ್ತದೆ. ಸಮಾಧಿ ಅಲ್ಲಿಯೆ ಉಳಿಯಲಿ; ಹೋಗಲು ಬಯಸುವವರು ಅಲ್ಲಿಗೆ ಹೋಗುತ್ತಾರೆ” ಎಂದು ಜೋಶಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಅಂಗಸಂಸ್ಥೆಗಳಾದ ವಿಎಚ್‌ಪಿ ಮತ್ತು ಬಜರಂಗ ದಳವು ಸಂಭಾಜಿ ನಗರದ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆಯ ಸಮಯದಲ್ಲಿ ಪವಿತ್ರ ಚಾದರ್ ಅನ್ನು ಸುಟ್ಟು ಪ್ರವಾದಿಯನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಹಾಗಾಗಿ ಪ್ರತಿಭಟನೆಯು ವಿವಾದಕ್ಕೆ ಕಾರಣವಾಗಿತ್ತು, ಜೊತೆಗೆ ನಾಗ್ಪುರದಲ್ಲಿ ಹಿಂಸಾಚಾರ ಉದ್ಭವವಾಗಿತ್ತು.

ಜೋಶಿ ಅವರ ಹೇಳಿಕೆಗೂ ಮೊದಲು, ಮತ್ತೊಬ್ಬ ಆರ್‌ಎಸ್‌ಎಸ್ ನಾಯಕ ಸುನಿಲ್ ಅಂಬೇಕರ್ ಕೂಡಾ 17 ನೇ ಶತಮಾನದ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಇಂದು ಪ್ರಸ್ತುತವಲ್ಲ ಎಂದು ಹೇಳಿದ್ದರು. ನಾಗ್ಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವು ಯಾವುದೇ ರೀತಿಯ ಕ್ರಮವನ್ನು ಪ್ರೋತ್ಸಾಹಿಸಬಾರದು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಜೋಶಿ ಅವರು ಹೇಳಿಕೆ ನೀಡಿದ್ದಾರೆ. ಶಿವಾಜಿ ಪಾರ್ಕ್‌ನಲ್ಲಿ ನಡೆದ ಗುಡಿ ಪಾಡ್ವಾ ರ್ಯಾಲಿಯಲ್ಲಿ ಮಾತನಾಡಿದ್ದ ಠಾಕ್ರೆ, ಜನರು ಜಾತಿ ಮತ್ತು ಧರ್ಮ ಆಧಾರಿತ ದ್ವೇಷದ ರಾಜಕೀಯಕ್ಕೆ ಬಲಿಯಾಗಬಾರದು ಮತ್ತು ಇತಿಹಾಸವನ್ನು ಕೋಮು ದೃಷ್ಟಿಕೋನದಿಂದ ನೋಡಬಾರದು ಎಂದು ಮನವಿ ಮಾಡಿದ್ದರು.

ಛತ್ರಪತಿ ಶಿವಾಜಿಯ “ಸ್ವರಾಜ್ಯ”ದ ಮೇಲೆ ದಾಳಿ ಮಾಡಿದ ಔರಂಗಜೇಬ್ ಮತ್ತು ಅಫ್ಜಲ್ ಖಾನ್‌ರಂತಹ ಜನರ ಸಮಾಧಿಗಳನ್ನು ಮರಾಠಾ ಶೌರ್ಯದ ಸಂಕೇತವಾಗಿ ಪ್ರದರ್ಶಿಸಲು ಅವುಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದ್ದರು. ಐತಿಹಾಸಿಕ ಮಾಹಿತಿಗಾಗಿ ಜನರು ವಾಟ್ಸಾಪ್ ಫಾರ್ವರ್ಡ್‌ಗಳನ್ನು ಅವಲಂಬಿಸಬಾರದು ಎಂದು ಅವರು ಕೇಳಿಕೊಂಡಿದ್ದರು.

“ಶಿವಾಜಿ ಮಹಾರಾಜರು ಊಳಿಗಮಾನ್ಯ ಪದ್ಧತಿಯ ವಿರುದ್ಧ ಹೋರಾಡುತ್ತಿದ್ದರು. ಎಲ್ಲಾ ಸಮುದಾಯಗಳ ಜನರು ವಿಭಿನ್ನ ಸಾಮ್ರಾಜ್ಯಗಳಿಗಾಗಿ ಕೆಲಸ ಮಾಡಿದ್ದರಿಂದ, ಸೇನಾಧಿಪತಿ ಅಥವಾ ಐತಿಹಾಸಿಕ ವ್ಯಕ್ತಿಗಳ ಜಾತಿ ಮತ್ತು ಧರ್ಮವನ್ನು ನೋಡಬೇಡಿ. ಯುವಕರು ವಾಟ್ಸಾಪ್‌ನಲ್ಲಿ ಇತಿಹಾಸ ಓದುವುದನ್ನು ನಿಲ್ಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಇದು ಸಮಾಜದ ನಿಜವಾದ ಸಮಸ್ಯೆಗಳಿಂದ ನಿಮ್ಮನ್ನು ಬೇರೆಡೆಗೆ ತಿರುಗಿಸುವ ಯೋಜನೆಯಾಗಿದೆ” ಎಂದು ಜೋಶಿ ಹೇಳಿದ್ದಾರೆ.

ಸಮಾಧಿ ವಿವಾದದಿಂದ ದೂರ ಉಳಿದ ಆರ್‌ಎಸ್‌ಎಸ್

ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಲು ವಿಎಚ್‌ಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪವಿತ್ರ ಶ್ಲೋಕಗಳು ಇದ್ದ ‘ಚಾದರ್’ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳು ಹರಡಲಾಗಿತ್ತು. ಹಾಗಾಗಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಆರ್‌ಎಸ್‌ಎಸ್ ವಕ್ತಾರ ಸುನಿಲ್ ಅಂಬೇಕರ್ 17 ನೇ ಶತಮಾನದ ಚಕ್ರವರ್ತಿಯು ಈಗ “ಅಪ್ರಸ್ತುತ” ಎಂದು ಬಣ್ಣಿಸಿದ್ದರು. ಸಮಾಧಿಯನ್ನು ಸ್ಥಳಾಂತರಿಸಬೇಕೇ ಎಂಬ ಪ್ರಶ್ನೆಗೆ ಅವರು “ಇದು ಪ್ರಸ್ತುತವಲ್ಲ” ಎಂದು ಉತ್ತರಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...