Homeಮುಖಪುಟಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

ಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

- Advertisement -
- Advertisement -

ಮೊಘಲ್ ಸಾಮ್ರಾಟ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳ ವಿವಾದದ ನಡುವೆ, ಆರ್‌ಎಸ್‌ಎಸ್ ನಾಯಕ ಸುರೇಶ್ ಭಯ್ಯಾಜಿ ಜೋಶಿ ಈ ವಿವಾದವನ್ನು ಅನಗತ್ಯವಾಗಿ ಎತ್ತಲಾಗಿದೆ ಎಂದು ಹೇಳಿದ್ದಾರೆ. “ಔರಂಗಜೇಬ್ ಇಲ್ಲಿ (ಮಹಾರಾಷ್ಟ್ರದಲ್ಲಿ) ನಿಧನರಾಗಿದ್ದು, ಆದ್ದರಿಂದ ಅವರ ಸಮಾಧಿಯನ್ನು ಇಲ್ಲಿ ನಿರ್ಮಿಸಲಾಗಿದೆ. ನಂಬಿಕೆ ಇರುವವರು (ಅಲ್ಲಿಗೆ) ಹೋಗುತ್ತಾರೆ.” ಎಂದು ಅವರು ಹೇಳಿದ್ದಾರೆ. ಔರಂಗಜೇಬ್ ಸಮಾಧಿ

“ನಮ್ಮ ಆದರ್ಶ ಛತ್ರಪತಿ ಶಿವಾಜಿ ಆಗಿದ್ದು, ಅವರು ಅಫ್ಜಲ್ ಖಾನ್ ಸಮಾಧಿಯನ್ನು ಸಹ ನಿರ್ಮಿಸಿದ್ದಾರೆ. ಇದು ಭಾರತದ ಉದಾರತೆ ಮತ್ತು ಒಳಗೊಳ್ಳುವಿಕೆಯನ್ನು ಸಂಕೇತಿಸುತ್ತದೆ. ಸಮಾಧಿ ಅಲ್ಲಿಯೆ ಉಳಿಯಲಿ; ಹೋಗಲು ಬಯಸುವವರು ಅಲ್ಲಿಗೆ ಹೋಗುತ್ತಾರೆ” ಎಂದು ಜೋಶಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಅಂಗಸಂಸ್ಥೆಗಳಾದ ವಿಎಚ್‌ಪಿ ಮತ್ತು ಬಜರಂಗ ದಳವು ಸಂಭಾಜಿ ನಗರದ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆಯ ಸಮಯದಲ್ಲಿ ಪವಿತ್ರ ಚಾದರ್ ಅನ್ನು ಸುಟ್ಟು ಪ್ರವಾದಿಯನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಹಾಗಾಗಿ ಪ್ರತಿಭಟನೆಯು ವಿವಾದಕ್ಕೆ ಕಾರಣವಾಗಿತ್ತು, ಜೊತೆಗೆ ನಾಗ್ಪುರದಲ್ಲಿ ಹಿಂಸಾಚಾರ ಉದ್ಭವವಾಗಿತ್ತು.

ಜೋಶಿ ಅವರ ಹೇಳಿಕೆಗೂ ಮೊದಲು, ಮತ್ತೊಬ್ಬ ಆರ್‌ಎಸ್‌ಎಸ್ ನಾಯಕ ಸುನಿಲ್ ಅಂಬೇಕರ್ ಕೂಡಾ 17 ನೇ ಶತಮಾನದ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಇಂದು ಪ್ರಸ್ತುತವಲ್ಲ ಎಂದು ಹೇಳಿದ್ದರು. ನಾಗ್ಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವು ಯಾವುದೇ ರೀತಿಯ ಕ್ರಮವನ್ನು ಪ್ರೋತ್ಸಾಹಿಸಬಾರದು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಜೋಶಿ ಅವರು ಹೇಳಿಕೆ ನೀಡಿದ್ದಾರೆ. ಶಿವಾಜಿ ಪಾರ್ಕ್‌ನಲ್ಲಿ ನಡೆದ ಗುಡಿ ಪಾಡ್ವಾ ರ್ಯಾಲಿಯಲ್ಲಿ ಮಾತನಾಡಿದ್ದ ಠಾಕ್ರೆ, ಜನರು ಜಾತಿ ಮತ್ತು ಧರ್ಮ ಆಧಾರಿತ ದ್ವೇಷದ ರಾಜಕೀಯಕ್ಕೆ ಬಲಿಯಾಗಬಾರದು ಮತ್ತು ಇತಿಹಾಸವನ್ನು ಕೋಮು ದೃಷ್ಟಿಕೋನದಿಂದ ನೋಡಬಾರದು ಎಂದು ಮನವಿ ಮಾಡಿದ್ದರು.

ಛತ್ರಪತಿ ಶಿವಾಜಿಯ “ಸ್ವರಾಜ್ಯ”ದ ಮೇಲೆ ದಾಳಿ ಮಾಡಿದ ಔರಂಗಜೇಬ್ ಮತ್ತು ಅಫ್ಜಲ್ ಖಾನ್‌ರಂತಹ ಜನರ ಸಮಾಧಿಗಳನ್ನು ಮರಾಠಾ ಶೌರ್ಯದ ಸಂಕೇತವಾಗಿ ಪ್ರದರ್ಶಿಸಲು ಅವುಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದ್ದರು. ಐತಿಹಾಸಿಕ ಮಾಹಿತಿಗಾಗಿ ಜನರು ವಾಟ್ಸಾಪ್ ಫಾರ್ವರ್ಡ್‌ಗಳನ್ನು ಅವಲಂಬಿಸಬಾರದು ಎಂದು ಅವರು ಕೇಳಿಕೊಂಡಿದ್ದರು.

“ಶಿವಾಜಿ ಮಹಾರಾಜರು ಊಳಿಗಮಾನ್ಯ ಪದ್ಧತಿಯ ವಿರುದ್ಧ ಹೋರಾಡುತ್ತಿದ್ದರು. ಎಲ್ಲಾ ಸಮುದಾಯಗಳ ಜನರು ವಿಭಿನ್ನ ಸಾಮ್ರಾಜ್ಯಗಳಿಗಾಗಿ ಕೆಲಸ ಮಾಡಿದ್ದರಿಂದ, ಸೇನಾಧಿಪತಿ ಅಥವಾ ಐತಿಹಾಸಿಕ ವ್ಯಕ್ತಿಗಳ ಜಾತಿ ಮತ್ತು ಧರ್ಮವನ್ನು ನೋಡಬೇಡಿ. ಯುವಕರು ವಾಟ್ಸಾಪ್‌ನಲ್ಲಿ ಇತಿಹಾಸ ಓದುವುದನ್ನು ನಿಲ್ಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಇದು ಸಮಾಜದ ನಿಜವಾದ ಸಮಸ್ಯೆಗಳಿಂದ ನಿಮ್ಮನ್ನು ಬೇರೆಡೆಗೆ ತಿರುಗಿಸುವ ಯೋಜನೆಯಾಗಿದೆ” ಎಂದು ಜೋಶಿ ಹೇಳಿದ್ದಾರೆ.

ಸಮಾಧಿ ವಿವಾದದಿಂದ ದೂರ ಉಳಿದ ಆರ್‌ಎಸ್‌ಎಸ್

ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಲು ವಿಎಚ್‌ಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪವಿತ್ರ ಶ್ಲೋಕಗಳು ಇದ್ದ ‘ಚಾದರ್’ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳು ಹರಡಲಾಗಿತ್ತು. ಹಾಗಾಗಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಆರ್‌ಎಸ್‌ಎಸ್ ವಕ್ತಾರ ಸುನಿಲ್ ಅಂಬೇಕರ್ 17 ನೇ ಶತಮಾನದ ಚಕ್ರವರ್ತಿಯು ಈಗ “ಅಪ್ರಸ್ತುತ” ಎಂದು ಬಣ್ಣಿಸಿದ್ದರು. ಸಮಾಧಿಯನ್ನು ಸ್ಥಳಾಂತರಿಸಬೇಕೇ ಎಂಬ ಪ್ರಶ್ನೆಗೆ ಅವರು “ಇದು ಪ್ರಸ್ತುತವಲ್ಲ” ಎಂದು ಉತ್ತರಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...