Homeಸಿನಿಮಾಕ್ರೀಡೆಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

ಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

- Advertisement -
- Advertisement -

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ನಡೆದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು 85 ರನ್ನುಗಳ ಅಂತರದಲ್ಲಿ ಸೋಲುವ ಮೂಲಕ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರುಗಳಲ್ಲಿ 184/4 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ 185 ರನ್‌ಗಳ ಸವಾಲು ಬೆನ್ನಟ್ಟಿದ ಭಾರತ 19.1 ಓವರಿನಲ್ಲಿ ಕೇವಲ 99 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಮುಗ್ಗರಿಸಿತು.

ಟಾಸ್ ಗೆದ್ದ ಆಸ್ಟ್ರೇಲಿಯ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಲಿಸಾ ಹೀಲಿ ಮತ್ತು ಬೆಥ್ ಮೂನಿ ಕ್ರಮವಾಗಿ 75, 78 ರನ್ ಗಳಿಸಿದರಿಂದ ಆಸ್ಟ್ರೇಲಿಯಾ ತಂಡವು 20 ಓವರಿಗೆ 184 ರನ್ನುಗಳನ್ನು ಪೇರಿಸಿಲು ಸಾಧ್ಯವಾಯಿತು.

ಉತ್ತಮ ಆಟವಾಡುತ್ತಿದ್ದ ಅಲಿಸಾ ಭಾರತದ ರಾಧಾ ಯಾದವ್ ಅವರ ಎಸೆತಕ್ಕೆ ವೇದ ಕೃಷ್ಣಮೂರ್ತಿ ಅವರಿಗೆ ಕ್ಯಾಚ್ ಕೊಟ್ಟು ಔಟಾದರು. ಬೆಥ್ ಮೂನಿ ಕೊನೆವರೆಗೂ ಔಟಾಗದೆ 78 ರನ್ನುಗಳನ್ನು ತಂಡಕ್ಕೆ ನೀಡಿದರು.

185 ರನ್‌ಗಳ ಗುರಿ ಬೆನ್ನ ಭಾರತ, ಶಫಾಲಿ ವರ್ಮ ಮತ್ತು ಸ್ಮೃತಿ ಮಂದನ ಮೊದಲಿಗರಾಗಿ ಬ್ಯಾಟ್ ಬೀಸಿ ಬಹುಬೇಗನೇ ಔಟಾದರು. ನಂತರ ದೀಪ್ತಿ ಶರ್ಮ, ವೇದ ಕೃಷ್ಣಮೂರ್ತಿ, ರೀಚಾ ಘೋಷ್ ಕ್ರಮವಾಗಿ 33, 19, 18 ರನ್ನುಗಳನ್ನು ನೀಡಿದರೂ ಭಾರತ ತಂಡವೂ 19.1 ಓವರಿನಲ್ಲಿ 99 ರನ್ನುಗಳನ್ನಷ್ಟೇ ಪೇರಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

ಸಂಕ್ಷಿಪ್ತ ಪಟ್ಟಿ:

ಆಸ್ಟ್ರೇಲಿಯಾ 184/4 (20.0 / 20)

ಅಲಿಸಾ ಹೀಲಿ 75 ರನ್ (39 ಬಾಲ್ ಗಳಲ್ಲಿ)
ಬೆತ್ ಮೂನಿ ಅಜೇಯ 78 ರನ್ (54 ಬಾಲ್ ಗಳಲ್ಲಿ)
ಮೆಗ್ ಲ್ಯಾನಿಂಗ್ 16 ರನ್ (15 ಬಾಲ್ ಗಳಲ್ಲಿ)
ಆಶ್ಲೀ ಗಾರ್ಡ್ನರ್ 2 ರನ್ (3 ಬಾಲ್ ಗಳಲ್ಲಿ)
ರಾಚೆಲ್ ಹೇನ್ಸ್ 4 ರನ್ (5 ಬಾಲ್ ಗಳಲ್ಲಿ)
ನಿಕೋಲಾ ಕ್ಯಾರಿ ಅಜೇಯ 5 ರನ್ (5 ಬಾಲ್ ಗಳಲ್ಲಿ)
ಹೆಚ್ಚುವರಿ 4 ರನ್ಗಳು
ಒಟ್ಟು 184/4 20.0

ಭಾರತ 99 (19.1 / 20)

ಶಫಾಲಿ ವರ್ಮಾ 2 ರನ್ (3 ಬಾಲ್ ಗಳಲ್ಲಿ)

ಸ್ಮೃತಿ ಮಂದಾನ 11 ರನ್ (8 ಬಾಲ್ ಗಳಲ್ಲಿ)

ತಾನಿಯಾ ಭಾಟಿಯಾ 2 ರನ್ (4 ಬಾಲ್ ಗಳಲ್ಲಿ)
ಜೆಮಿಮಾ ರೊಡ್ರಿಗಸ್ 2 ರನ್

ಹರ್ಮನ್‌ಪ್ರೀತ್ ಕೌರ್ 4 ರನ್ (7 ಬಾಲ್ ಗಳಲ್ಲಿ)

ದೀಪ್ತಿ ಶರ್ಮಾ 33 ರನ್ (35 ಬಾಲ್ ಗಳಲ್ಲಿ)

ವೇದ ಕೃಷ್ಣಮೂರ್ತಿ 19 ರನ್ (24 ಬಾಲ್ ಗಳಲ್ಲಿ)

ರಿಚಾ ಘೋಷ್ 18 ರನ್ (18 ಬಾಲ್ ಗಳಲ್ಲಿ)

ಶಿಖಾ ಪಾಂಡೆ 2 ರನ್ (4 ಬಾಲ್ ಗಳಲ್ಲಿ)

ರಾಧಾ ಯಾದವ್ 1ರನ್ (2 ಬಾಲ್ ಗಳಲ್ಲಿ)

ಪೂನಂ ಯಾದವ್ 1 ರನ್ (5 ಬಾಲ್ ಗಳಲ್ಲಿ)

ರಾಜೇಶ್ವರಿ ಗಾಯಕ್ವಾಡ್ ಅಜೇಯ 1 ರನ್ (3 ಬಾಲ್ ಗಳಲ್ಲಿ)

ಹೆಚ್ಚುವರಿ 5 ರನ್ಗಳು
ಒಟ್ಟು 99/10 (19.1 / 20)

ಫಲಿತಾಂಶ ಆಸ್ಟ್ರೇಲಿಯಾಕ್ಕೆ 85ರನ್‌ಗಳ ಗೆಲುವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...