Homeಸಿನಿಮಾಕ್ರೀಡೆಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

ಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

- Advertisement -
- Advertisement -

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ನಡೆದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು 85 ರನ್ನುಗಳ ಅಂತರದಲ್ಲಿ ಸೋಲುವ ಮೂಲಕ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರುಗಳಲ್ಲಿ 184/4 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ 185 ರನ್‌ಗಳ ಸವಾಲು ಬೆನ್ನಟ್ಟಿದ ಭಾರತ 19.1 ಓವರಿನಲ್ಲಿ ಕೇವಲ 99 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಮುಗ್ಗರಿಸಿತು.

ಟಾಸ್ ಗೆದ್ದ ಆಸ್ಟ್ರೇಲಿಯ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಲಿಸಾ ಹೀಲಿ ಮತ್ತು ಬೆಥ್ ಮೂನಿ ಕ್ರಮವಾಗಿ 75, 78 ರನ್ ಗಳಿಸಿದರಿಂದ ಆಸ್ಟ್ರೇಲಿಯಾ ತಂಡವು 20 ಓವರಿಗೆ 184 ರನ್ನುಗಳನ್ನು ಪೇರಿಸಿಲು ಸಾಧ್ಯವಾಯಿತು.

ಉತ್ತಮ ಆಟವಾಡುತ್ತಿದ್ದ ಅಲಿಸಾ ಭಾರತದ ರಾಧಾ ಯಾದವ್ ಅವರ ಎಸೆತಕ್ಕೆ ವೇದ ಕೃಷ್ಣಮೂರ್ತಿ ಅವರಿಗೆ ಕ್ಯಾಚ್ ಕೊಟ್ಟು ಔಟಾದರು. ಬೆಥ್ ಮೂನಿ ಕೊನೆವರೆಗೂ ಔಟಾಗದೆ 78 ರನ್ನುಗಳನ್ನು ತಂಡಕ್ಕೆ ನೀಡಿದರು.

185 ರನ್‌ಗಳ ಗುರಿ ಬೆನ್ನ ಭಾರತ, ಶಫಾಲಿ ವರ್ಮ ಮತ್ತು ಸ್ಮೃತಿ ಮಂದನ ಮೊದಲಿಗರಾಗಿ ಬ್ಯಾಟ್ ಬೀಸಿ ಬಹುಬೇಗನೇ ಔಟಾದರು. ನಂತರ ದೀಪ್ತಿ ಶರ್ಮ, ವೇದ ಕೃಷ್ಣಮೂರ್ತಿ, ರೀಚಾ ಘೋಷ್ ಕ್ರಮವಾಗಿ 33, 19, 18 ರನ್ನುಗಳನ್ನು ನೀಡಿದರೂ ಭಾರತ ತಂಡವೂ 19.1 ಓವರಿನಲ್ಲಿ 99 ರನ್ನುಗಳನ್ನಷ್ಟೇ ಪೇರಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

ಸಂಕ್ಷಿಪ್ತ ಪಟ್ಟಿ:

ಆಸ್ಟ್ರೇಲಿಯಾ 184/4 (20.0 / 20)

ಅಲಿಸಾ ಹೀಲಿ 75 ರನ್ (39 ಬಾಲ್ ಗಳಲ್ಲಿ)
ಬೆತ್ ಮೂನಿ ಅಜೇಯ 78 ರನ್ (54 ಬಾಲ್ ಗಳಲ್ಲಿ)
ಮೆಗ್ ಲ್ಯಾನಿಂಗ್ 16 ರನ್ (15 ಬಾಲ್ ಗಳಲ್ಲಿ)
ಆಶ್ಲೀ ಗಾರ್ಡ್ನರ್ 2 ರನ್ (3 ಬಾಲ್ ಗಳಲ್ಲಿ)
ರಾಚೆಲ್ ಹೇನ್ಸ್ 4 ರನ್ (5 ಬಾಲ್ ಗಳಲ್ಲಿ)
ನಿಕೋಲಾ ಕ್ಯಾರಿ ಅಜೇಯ 5 ರನ್ (5 ಬಾಲ್ ಗಳಲ್ಲಿ)
ಹೆಚ್ಚುವರಿ 4 ರನ್ಗಳು
ಒಟ್ಟು 184/4 20.0

ಭಾರತ 99 (19.1 / 20)

ಶಫಾಲಿ ವರ್ಮಾ 2 ರನ್ (3 ಬಾಲ್ ಗಳಲ್ಲಿ)

ಸ್ಮೃತಿ ಮಂದಾನ 11 ರನ್ (8 ಬಾಲ್ ಗಳಲ್ಲಿ)

ತಾನಿಯಾ ಭಾಟಿಯಾ 2 ರನ್ (4 ಬಾಲ್ ಗಳಲ್ಲಿ)
ಜೆಮಿಮಾ ರೊಡ್ರಿಗಸ್ 2 ರನ್

ಹರ್ಮನ್‌ಪ್ರೀತ್ ಕೌರ್ 4 ರನ್ (7 ಬಾಲ್ ಗಳಲ್ಲಿ)

ದೀಪ್ತಿ ಶರ್ಮಾ 33 ರನ್ (35 ಬಾಲ್ ಗಳಲ್ಲಿ)

ವೇದ ಕೃಷ್ಣಮೂರ್ತಿ 19 ರನ್ (24 ಬಾಲ್ ಗಳಲ್ಲಿ)

ರಿಚಾ ಘೋಷ್ 18 ರನ್ (18 ಬಾಲ್ ಗಳಲ್ಲಿ)

ಶಿಖಾ ಪಾಂಡೆ 2 ರನ್ (4 ಬಾಲ್ ಗಳಲ್ಲಿ)

ರಾಧಾ ಯಾದವ್ 1ರನ್ (2 ಬಾಲ್ ಗಳಲ್ಲಿ)

ಪೂನಂ ಯಾದವ್ 1 ರನ್ (5 ಬಾಲ್ ಗಳಲ್ಲಿ)

ರಾಜೇಶ್ವರಿ ಗಾಯಕ್ವಾಡ್ ಅಜೇಯ 1 ರನ್ (3 ಬಾಲ್ ಗಳಲ್ಲಿ)

ಹೆಚ್ಚುವರಿ 5 ರನ್ಗಳು
ಒಟ್ಟು 99/10 (19.1 / 20)

ಫಲಿತಾಂಶ ಆಸ್ಟ್ರೇಲಿಯಾಕ್ಕೆ 85ರನ್‌ಗಳ ಗೆಲುವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...