Homeಸಿನಿಮಾಕ್ರೀಡೆಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

ಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

- Advertisement -
- Advertisement -

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ನಡೆದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು 85 ರನ್ನುಗಳ ಅಂತರದಲ್ಲಿ ಸೋಲುವ ಮೂಲಕ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರುಗಳಲ್ಲಿ 184/4 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ 185 ರನ್‌ಗಳ ಸವಾಲು ಬೆನ್ನಟ್ಟಿದ ಭಾರತ 19.1 ಓವರಿನಲ್ಲಿ ಕೇವಲ 99 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಮುಗ್ಗರಿಸಿತು.

ಟಾಸ್ ಗೆದ್ದ ಆಸ್ಟ್ರೇಲಿಯ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಲಿಸಾ ಹೀಲಿ ಮತ್ತು ಬೆಥ್ ಮೂನಿ ಕ್ರಮವಾಗಿ 75, 78 ರನ್ ಗಳಿಸಿದರಿಂದ ಆಸ್ಟ್ರೇಲಿಯಾ ತಂಡವು 20 ಓವರಿಗೆ 184 ರನ್ನುಗಳನ್ನು ಪೇರಿಸಿಲು ಸಾಧ್ಯವಾಯಿತು.

ಉತ್ತಮ ಆಟವಾಡುತ್ತಿದ್ದ ಅಲಿಸಾ ಭಾರತದ ರಾಧಾ ಯಾದವ್ ಅವರ ಎಸೆತಕ್ಕೆ ವೇದ ಕೃಷ್ಣಮೂರ್ತಿ ಅವರಿಗೆ ಕ್ಯಾಚ್ ಕೊಟ್ಟು ಔಟಾದರು. ಬೆಥ್ ಮೂನಿ ಕೊನೆವರೆಗೂ ಔಟಾಗದೆ 78 ರನ್ನುಗಳನ್ನು ತಂಡಕ್ಕೆ ನೀಡಿದರು.

185 ರನ್‌ಗಳ ಗುರಿ ಬೆನ್ನ ಭಾರತ, ಶಫಾಲಿ ವರ್ಮ ಮತ್ತು ಸ್ಮೃತಿ ಮಂದನ ಮೊದಲಿಗರಾಗಿ ಬ್ಯಾಟ್ ಬೀಸಿ ಬಹುಬೇಗನೇ ಔಟಾದರು. ನಂತರ ದೀಪ್ತಿ ಶರ್ಮ, ವೇದ ಕೃಷ್ಣಮೂರ್ತಿ, ರೀಚಾ ಘೋಷ್ ಕ್ರಮವಾಗಿ 33, 19, 18 ರನ್ನುಗಳನ್ನು ನೀಡಿದರೂ ಭಾರತ ತಂಡವೂ 19.1 ಓವರಿನಲ್ಲಿ 99 ರನ್ನುಗಳನ್ನಷ್ಟೇ ಪೇರಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

ಸಂಕ್ಷಿಪ್ತ ಪಟ್ಟಿ:

ಆಸ್ಟ್ರೇಲಿಯಾ 184/4 (20.0 / 20)

ಅಲಿಸಾ ಹೀಲಿ 75 ರನ್ (39 ಬಾಲ್ ಗಳಲ್ಲಿ)
ಬೆತ್ ಮೂನಿ ಅಜೇಯ 78 ರನ್ (54 ಬಾಲ್ ಗಳಲ್ಲಿ)
ಮೆಗ್ ಲ್ಯಾನಿಂಗ್ 16 ರನ್ (15 ಬಾಲ್ ಗಳಲ್ಲಿ)
ಆಶ್ಲೀ ಗಾರ್ಡ್ನರ್ 2 ರನ್ (3 ಬಾಲ್ ಗಳಲ್ಲಿ)
ರಾಚೆಲ್ ಹೇನ್ಸ್ 4 ರನ್ (5 ಬಾಲ್ ಗಳಲ್ಲಿ)
ನಿಕೋಲಾ ಕ್ಯಾರಿ ಅಜೇಯ 5 ರನ್ (5 ಬಾಲ್ ಗಳಲ್ಲಿ)
ಹೆಚ್ಚುವರಿ 4 ರನ್ಗಳು
ಒಟ್ಟು 184/4 20.0

ಭಾರತ 99 (19.1 / 20)

ಶಫಾಲಿ ವರ್ಮಾ 2 ರನ್ (3 ಬಾಲ್ ಗಳಲ್ಲಿ)

ಸ್ಮೃತಿ ಮಂದಾನ 11 ರನ್ (8 ಬಾಲ್ ಗಳಲ್ಲಿ)

ತಾನಿಯಾ ಭಾಟಿಯಾ 2 ರನ್ (4 ಬಾಲ್ ಗಳಲ್ಲಿ)
ಜೆಮಿಮಾ ರೊಡ್ರಿಗಸ್ 2 ರನ್

ಹರ್ಮನ್‌ಪ್ರೀತ್ ಕೌರ್ 4 ರನ್ (7 ಬಾಲ್ ಗಳಲ್ಲಿ)

ದೀಪ್ತಿ ಶರ್ಮಾ 33 ರನ್ (35 ಬಾಲ್ ಗಳಲ್ಲಿ)

ವೇದ ಕೃಷ್ಣಮೂರ್ತಿ 19 ರನ್ (24 ಬಾಲ್ ಗಳಲ್ಲಿ)

ರಿಚಾ ಘೋಷ್ 18 ರನ್ (18 ಬಾಲ್ ಗಳಲ್ಲಿ)

ಶಿಖಾ ಪಾಂಡೆ 2 ರನ್ (4 ಬಾಲ್ ಗಳಲ್ಲಿ)

ರಾಧಾ ಯಾದವ್ 1ರನ್ (2 ಬಾಲ್ ಗಳಲ್ಲಿ)

ಪೂನಂ ಯಾದವ್ 1 ರನ್ (5 ಬಾಲ್ ಗಳಲ್ಲಿ)

ರಾಜೇಶ್ವರಿ ಗಾಯಕ್ವಾಡ್ ಅಜೇಯ 1 ರನ್ (3 ಬಾಲ್ ಗಳಲ್ಲಿ)

ಹೆಚ್ಚುವರಿ 5 ರನ್ಗಳು
ಒಟ್ಟು 99/10 (19.1 / 20)

ಫಲಿತಾಂಶ ಆಸ್ಟ್ರೇಲಿಯಾಕ್ಕೆ 85ರನ್‌ಗಳ ಗೆಲುವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...