Homeಸಿನಿಮಾಕ್ರೀಡೆ2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಸೂಪರ್ ಓವರ್‌ನಲ್ಲಿ ರೋಚಕ ಜಯ ಕಂಡು ಸರಣಿಯಲ್ಲಿ 1-1 ಸಮಬಲ ಸಾಧಿಸಿದ ಭಾರತ ತಂಡ

- Advertisement -
- Advertisement -

2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ ರೂವಾರಿಯೆನೆಸಿದರು.

ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಪಂದ್ಯ ನೋಡಲು 40 ಸಾವಿರಕ್ಕೂ ಅಧಿಕ ಪ್ರೇಕ್ಷಕರು ನೆರೆದಿದ್ದರು. ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿ ಒಂದು ವಿಕೆಟ್ 187 ರನ್ ಗಳಿಸಿದರೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳಿಸಿತು. ಪಂದ್ಯ ಸೂಪರ್ ಓವರ್‌ವರೆಗೂ ತಲುಪಿ ರೋಚಕತೆ ಹುಟ್ಟಿಸಿತ್ತು. ಕೊನೆಗೆ ಸೂಪರ್ ಓವರ್‌ನಲ್ಲಿ ಭಾರತ 4 ರನ್‌ಗಳ ಜಯ ಸಾಧಿಸಿತು.

2022ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ 12 ಟಿ20 ಪಂದ್ಯಗಳನ್ನಾಡಿ 9 ಗೆಲವು ಕಂಡರೆ ಮೂರು ಪಂದ್ಯಗಳು ಫಲಿತಾಂಶ ಕಾಣದೆ ರದ್ದುಗೊಂಡಿದ್ದವು. 13ನೇ ಪಂದ್ಯದಲ್ಲಿ ಅದು ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 5 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ರೋಚಕ ಸೂಪರ್ ಓವರ್

ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾದ ಗ್ರಹಂ ಎಸೆದ ಮೊದಲ ಬಾಲ್ ಎದುರಿಸದ ರಿಚಾ ಘೋಷ್ ಸಿಕ್ಸರ್ ಎತ್ತಿದ್ದರು. ಎರಡನೇ ಬಾಲ್‌ನಲ್ಲಿ ಅವರಿಗೆ ಕ್ಯಾಚಿತ್ತ ನಿರ್ಗಮಿಸಿದರು. ಆಗ ಕ್ರೀಸ್‌ಗಿಳಿದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಒಂದು ರನ್ ಗಳಿಸಿದರು. ನಾಲ್ಕನೇ ಎಸೆತವನ್ನು ಸ್ಮೃತಿ ಮಂದಾನ ಬೌಂಡರಿಗೆ ಅಟ್ಟಿದರು. 5ನೇ ಎಸೆತವನ್ನು ಆಕರ್ಷಕ ಸಿಕ್ಸರ್ ಬಾರಿಸಿದರು. ಆರನೇ ಎಸೆತದಲ್ಲಿ ಮೂರು ರನ್ ಕಲೆ ಹಾಕಿದರು. ಭಾರತವು ಒಂದು ಓವರ್‌ನಲ್ಲಿ 20 ರನ್ ಗಳಿಸಿತು.

ಗೆಲುವಿಗೆ 21 ರನ್ ಗುರಿ ಪಡೆದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಹ್ಯಾಲಿ ರೇಣುಕಾ ಎಸೆದ ಮೊದಲ ಎಸೆತವನ್ನು ನೇರ ಬೌಂಡರಿಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಮುಂದಾದ ಗಾರ್ಡನೆರ್ ರಾಧಾಗೆ ಕ್ಯಾಚಿತ್ತು ನಿರ್ಗಮಿಸಿದರು. ಆಗ ಆಸ್ಟ್ರೇಲಿಯಾ 3 ಎಸೆತದಲ್ಲಿ 16 ರನ್ ಗಳಿಸಬೇಕಿತ್ತು. ನಾಲ್ಕನೇ ಎಸೆತ ಎದುರಿಸಿದ ಮ್ಯಾಗ್ರಥ್ ಒಂದು ರನ್ ಗಳಿಸಿದರು. ಹ್ಯಾಲಿ ಐದನೇ ಎಸೆತ ಬೌಂಡರಿ ಮತ್ತು ಆರನೇ ಎಸೆತ ಸಿಕ್ಸರ್ ಎತ್ತಿದ್ದರು ಸಹ ಆಸ್ಟ್ರೇಲಿಯಾ 4 ರನ್‌ನಿಂದ ಸೋಲು ಕಂಡಿತು.

ರನ್‌ಗಳ ಸುರಿಮಳೆ

ಸೂಪರ್ ಓವರ್‌ಗೂ ಮೊದಲು ನಡೆದ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಯಿತು. ಆಸ್ಟ್ರೇಲಿಯಾದ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ಮ್ಯಾಗ್ರಥ್ 51 ಎಸೆತಗಳಲ್ಲಿ 70 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

188 ರನ್‌ಗಳ ಗುರಿ ಪಡೆದ ಭಾರತ ತಂಡದ ಸ್ಮೃತಿ ಮಂದಾನ 49 ಎಸೆತಗಳಲ್ಲಿ 79 ರನ್‌ ಗಳಿಸಿದರು. ಸೆಫಾಲಿ ವರ್ಮಾ ಸಹ 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕಡೆಯದಾಗ 13 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಪಂದ್ಯ ಟೈ ಆಗುವಂತೆ ನೋಡಿಕೊಂಡರು.

ಉಚಿತ ಪ್ರವೇಶ

ಮಹಿಳಾ ಕ್ರಿಕೆಟ್ ಅನ್ನು ಪ್ರಚಾರ ಮಾಡುವ ದೃಷ್ಟಿಯಿಂದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾನುವಾರದ ಪಂದ್ಯಕ್ಕೆ ಉಚಿತ್ರ ಪ್ರವೇಶ ಕಲ್ಪಿಸಲಾಗಿತ್ತು. ಸುಮಾರು 45,000 ಪ್ರೇಕ್ಷಕರು ಆಟ ಕಣ್ತುಂಬಿಕೊಂಡರು.

ಇದನ್ನೂ ಓದಿ: ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...