Homeಸಿನಿಮಾಕ್ರೀಡೆ2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಸೂಪರ್ ಓವರ್‌ನಲ್ಲಿ ರೋಚಕ ಜಯ ಕಂಡು ಸರಣಿಯಲ್ಲಿ 1-1 ಸಮಬಲ ಸಾಧಿಸಿದ ಭಾರತ ತಂಡ

- Advertisement -
- Advertisement -

2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ ರೂವಾರಿಯೆನೆಸಿದರು.

ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಪಂದ್ಯ ನೋಡಲು 40 ಸಾವಿರಕ್ಕೂ ಅಧಿಕ ಪ್ರೇಕ್ಷಕರು ನೆರೆದಿದ್ದರು. ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿ ಒಂದು ವಿಕೆಟ್ 187 ರನ್ ಗಳಿಸಿದರೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳಿಸಿತು. ಪಂದ್ಯ ಸೂಪರ್ ಓವರ್‌ವರೆಗೂ ತಲುಪಿ ರೋಚಕತೆ ಹುಟ್ಟಿಸಿತ್ತು. ಕೊನೆಗೆ ಸೂಪರ್ ಓವರ್‌ನಲ್ಲಿ ಭಾರತ 4 ರನ್‌ಗಳ ಜಯ ಸಾಧಿಸಿತು.

2022ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ 12 ಟಿ20 ಪಂದ್ಯಗಳನ್ನಾಡಿ 9 ಗೆಲವು ಕಂಡರೆ ಮೂರು ಪಂದ್ಯಗಳು ಫಲಿತಾಂಶ ಕಾಣದೆ ರದ್ದುಗೊಂಡಿದ್ದವು. 13ನೇ ಪಂದ್ಯದಲ್ಲಿ ಅದು ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 5 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ರೋಚಕ ಸೂಪರ್ ಓವರ್

ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾದ ಗ್ರಹಂ ಎಸೆದ ಮೊದಲ ಬಾಲ್ ಎದುರಿಸದ ರಿಚಾ ಘೋಷ್ ಸಿಕ್ಸರ್ ಎತ್ತಿದ್ದರು. ಎರಡನೇ ಬಾಲ್‌ನಲ್ಲಿ ಅವರಿಗೆ ಕ್ಯಾಚಿತ್ತ ನಿರ್ಗಮಿಸಿದರು. ಆಗ ಕ್ರೀಸ್‌ಗಿಳಿದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಒಂದು ರನ್ ಗಳಿಸಿದರು. ನಾಲ್ಕನೇ ಎಸೆತವನ್ನು ಸ್ಮೃತಿ ಮಂದಾನ ಬೌಂಡರಿಗೆ ಅಟ್ಟಿದರು. 5ನೇ ಎಸೆತವನ್ನು ಆಕರ್ಷಕ ಸಿಕ್ಸರ್ ಬಾರಿಸಿದರು. ಆರನೇ ಎಸೆತದಲ್ಲಿ ಮೂರು ರನ್ ಕಲೆ ಹಾಕಿದರು. ಭಾರತವು ಒಂದು ಓವರ್‌ನಲ್ಲಿ 20 ರನ್ ಗಳಿಸಿತು.

ಗೆಲುವಿಗೆ 21 ರನ್ ಗುರಿ ಪಡೆದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಹ್ಯಾಲಿ ರೇಣುಕಾ ಎಸೆದ ಮೊದಲ ಎಸೆತವನ್ನು ನೇರ ಬೌಂಡರಿಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಮುಂದಾದ ಗಾರ್ಡನೆರ್ ರಾಧಾಗೆ ಕ್ಯಾಚಿತ್ತು ನಿರ್ಗಮಿಸಿದರು. ಆಗ ಆಸ್ಟ್ರೇಲಿಯಾ 3 ಎಸೆತದಲ್ಲಿ 16 ರನ್ ಗಳಿಸಬೇಕಿತ್ತು. ನಾಲ್ಕನೇ ಎಸೆತ ಎದುರಿಸಿದ ಮ್ಯಾಗ್ರಥ್ ಒಂದು ರನ್ ಗಳಿಸಿದರು. ಹ್ಯಾಲಿ ಐದನೇ ಎಸೆತ ಬೌಂಡರಿ ಮತ್ತು ಆರನೇ ಎಸೆತ ಸಿಕ್ಸರ್ ಎತ್ತಿದ್ದರು ಸಹ ಆಸ್ಟ್ರೇಲಿಯಾ 4 ರನ್‌ನಿಂದ ಸೋಲು ಕಂಡಿತು.

ರನ್‌ಗಳ ಸುರಿಮಳೆ

ಸೂಪರ್ ಓವರ್‌ಗೂ ಮೊದಲು ನಡೆದ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಯಿತು. ಆಸ್ಟ್ರೇಲಿಯಾದ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ಮ್ಯಾಗ್ರಥ್ 51 ಎಸೆತಗಳಲ್ಲಿ 70 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

188 ರನ್‌ಗಳ ಗುರಿ ಪಡೆದ ಭಾರತ ತಂಡದ ಸ್ಮೃತಿ ಮಂದಾನ 49 ಎಸೆತಗಳಲ್ಲಿ 79 ರನ್‌ ಗಳಿಸಿದರು. ಸೆಫಾಲಿ ವರ್ಮಾ ಸಹ 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕಡೆಯದಾಗ 13 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಪಂದ್ಯ ಟೈ ಆಗುವಂತೆ ನೋಡಿಕೊಂಡರು.

ಉಚಿತ ಪ್ರವೇಶ

ಮಹಿಳಾ ಕ್ರಿಕೆಟ್ ಅನ್ನು ಪ್ರಚಾರ ಮಾಡುವ ದೃಷ್ಟಿಯಿಂದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾನುವಾರದ ಪಂದ್ಯಕ್ಕೆ ಉಚಿತ್ರ ಪ್ರವೇಶ ಕಲ್ಪಿಸಲಾಗಿತ್ತು. ಸುಮಾರು 45,000 ಪ್ರೇಕ್ಷಕರು ಆಟ ಕಣ್ತುಂಬಿಕೊಂಡರು.

ಇದನ್ನೂ ಓದಿ: ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...