Homeಸಿನಿಮಾಕ್ರೀಡೆ2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಸೂಪರ್ ಓವರ್‌ನಲ್ಲಿ ರೋಚಕ ಜಯ ಕಂಡು ಸರಣಿಯಲ್ಲಿ 1-1 ಸಮಬಲ ಸಾಧಿಸಿದ ಭಾರತ ತಂಡ

- Advertisement -
- Advertisement -

2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ ರೂವಾರಿಯೆನೆಸಿದರು.

ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಪಂದ್ಯ ನೋಡಲು 40 ಸಾವಿರಕ್ಕೂ ಅಧಿಕ ಪ್ರೇಕ್ಷಕರು ನೆರೆದಿದ್ದರು. ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿ ಒಂದು ವಿಕೆಟ್ 187 ರನ್ ಗಳಿಸಿದರೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳಿಸಿತು. ಪಂದ್ಯ ಸೂಪರ್ ಓವರ್‌ವರೆಗೂ ತಲುಪಿ ರೋಚಕತೆ ಹುಟ್ಟಿಸಿತ್ತು. ಕೊನೆಗೆ ಸೂಪರ್ ಓವರ್‌ನಲ್ಲಿ ಭಾರತ 4 ರನ್‌ಗಳ ಜಯ ಸಾಧಿಸಿತು.

2022ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ 12 ಟಿ20 ಪಂದ್ಯಗಳನ್ನಾಡಿ 9 ಗೆಲವು ಕಂಡರೆ ಮೂರು ಪಂದ್ಯಗಳು ಫಲಿತಾಂಶ ಕಾಣದೆ ರದ್ದುಗೊಂಡಿದ್ದವು. 13ನೇ ಪಂದ್ಯದಲ್ಲಿ ಅದು ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 5 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ರೋಚಕ ಸೂಪರ್ ಓವರ್

ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾದ ಗ್ರಹಂ ಎಸೆದ ಮೊದಲ ಬಾಲ್ ಎದುರಿಸದ ರಿಚಾ ಘೋಷ್ ಸಿಕ್ಸರ್ ಎತ್ತಿದ್ದರು. ಎರಡನೇ ಬಾಲ್‌ನಲ್ಲಿ ಅವರಿಗೆ ಕ್ಯಾಚಿತ್ತ ನಿರ್ಗಮಿಸಿದರು. ಆಗ ಕ್ರೀಸ್‌ಗಿಳಿದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಒಂದು ರನ್ ಗಳಿಸಿದರು. ನಾಲ್ಕನೇ ಎಸೆತವನ್ನು ಸ್ಮೃತಿ ಮಂದಾನ ಬೌಂಡರಿಗೆ ಅಟ್ಟಿದರು. 5ನೇ ಎಸೆತವನ್ನು ಆಕರ್ಷಕ ಸಿಕ್ಸರ್ ಬಾರಿಸಿದರು. ಆರನೇ ಎಸೆತದಲ್ಲಿ ಮೂರು ರನ್ ಕಲೆ ಹಾಕಿದರು. ಭಾರತವು ಒಂದು ಓವರ್‌ನಲ್ಲಿ 20 ರನ್ ಗಳಿಸಿತು.

ಗೆಲುವಿಗೆ 21 ರನ್ ಗುರಿ ಪಡೆದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಹ್ಯಾಲಿ ರೇಣುಕಾ ಎಸೆದ ಮೊದಲ ಎಸೆತವನ್ನು ನೇರ ಬೌಂಡರಿಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಮುಂದಾದ ಗಾರ್ಡನೆರ್ ರಾಧಾಗೆ ಕ್ಯಾಚಿತ್ತು ನಿರ್ಗಮಿಸಿದರು. ಆಗ ಆಸ್ಟ್ರೇಲಿಯಾ 3 ಎಸೆತದಲ್ಲಿ 16 ರನ್ ಗಳಿಸಬೇಕಿತ್ತು. ನಾಲ್ಕನೇ ಎಸೆತ ಎದುರಿಸಿದ ಮ್ಯಾಗ್ರಥ್ ಒಂದು ರನ್ ಗಳಿಸಿದರು. ಹ್ಯಾಲಿ ಐದನೇ ಎಸೆತ ಬೌಂಡರಿ ಮತ್ತು ಆರನೇ ಎಸೆತ ಸಿಕ್ಸರ್ ಎತ್ತಿದ್ದರು ಸಹ ಆಸ್ಟ್ರೇಲಿಯಾ 4 ರನ್‌ನಿಂದ ಸೋಲು ಕಂಡಿತು.

ರನ್‌ಗಳ ಸುರಿಮಳೆ

ಸೂಪರ್ ಓವರ್‌ಗೂ ಮೊದಲು ನಡೆದ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಯಿತು. ಆಸ್ಟ್ರೇಲಿಯಾದ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ಮ್ಯಾಗ್ರಥ್ 51 ಎಸೆತಗಳಲ್ಲಿ 70 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

188 ರನ್‌ಗಳ ಗುರಿ ಪಡೆದ ಭಾರತ ತಂಡದ ಸ್ಮೃತಿ ಮಂದಾನ 49 ಎಸೆತಗಳಲ್ಲಿ 79 ರನ್‌ ಗಳಿಸಿದರು. ಸೆಫಾಲಿ ವರ್ಮಾ ಸಹ 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕಡೆಯದಾಗ 13 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಪಂದ್ಯ ಟೈ ಆಗುವಂತೆ ನೋಡಿಕೊಂಡರು.

ಉಚಿತ ಪ್ರವೇಶ

ಮಹಿಳಾ ಕ್ರಿಕೆಟ್ ಅನ್ನು ಪ್ರಚಾರ ಮಾಡುವ ದೃಷ್ಟಿಯಿಂದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾನುವಾರದ ಪಂದ್ಯಕ್ಕೆ ಉಚಿತ್ರ ಪ್ರವೇಶ ಕಲ್ಪಿಸಲಾಗಿತ್ತು. ಸುಮಾರು 45,000 ಪ್ರೇಕ್ಷಕರು ಆಟ ಕಣ್ತುಂಬಿಕೊಂಡರು.

ಇದನ್ನೂ ಓದಿ: ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...