Homeಸಿನಿಮಾಕ್ರೀಡೆ2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಸೂಪರ್ ಓವರ್‌ನಲ್ಲಿ ರೋಚಕ ಜಯ ಕಂಡು ಸರಣಿಯಲ್ಲಿ 1-1 ಸಮಬಲ ಸಾಧಿಸಿದ ಭಾರತ ತಂಡ

- Advertisement -
- Advertisement -

2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ ರೂವಾರಿಯೆನೆಸಿದರು.

ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಪಂದ್ಯ ನೋಡಲು 40 ಸಾವಿರಕ್ಕೂ ಅಧಿಕ ಪ್ರೇಕ್ಷಕರು ನೆರೆದಿದ್ದರು. ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿ ಒಂದು ವಿಕೆಟ್ 187 ರನ್ ಗಳಿಸಿದರೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳಿಸಿತು. ಪಂದ್ಯ ಸೂಪರ್ ಓವರ್‌ವರೆಗೂ ತಲುಪಿ ರೋಚಕತೆ ಹುಟ್ಟಿಸಿತ್ತು. ಕೊನೆಗೆ ಸೂಪರ್ ಓವರ್‌ನಲ್ಲಿ ಭಾರತ 4 ರನ್‌ಗಳ ಜಯ ಸಾಧಿಸಿತು.

2022ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ 12 ಟಿ20 ಪಂದ್ಯಗಳನ್ನಾಡಿ 9 ಗೆಲವು ಕಂಡರೆ ಮೂರು ಪಂದ್ಯಗಳು ಫಲಿತಾಂಶ ಕಾಣದೆ ರದ್ದುಗೊಂಡಿದ್ದವು. 13ನೇ ಪಂದ್ಯದಲ್ಲಿ ಅದು ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 5 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ರೋಚಕ ಸೂಪರ್ ಓವರ್

ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾದ ಗ್ರಹಂ ಎಸೆದ ಮೊದಲ ಬಾಲ್ ಎದುರಿಸದ ರಿಚಾ ಘೋಷ್ ಸಿಕ್ಸರ್ ಎತ್ತಿದ್ದರು. ಎರಡನೇ ಬಾಲ್‌ನಲ್ಲಿ ಅವರಿಗೆ ಕ್ಯಾಚಿತ್ತ ನಿರ್ಗಮಿಸಿದರು. ಆಗ ಕ್ರೀಸ್‌ಗಿಳಿದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಒಂದು ರನ್ ಗಳಿಸಿದರು. ನಾಲ್ಕನೇ ಎಸೆತವನ್ನು ಸ್ಮೃತಿ ಮಂದಾನ ಬೌಂಡರಿಗೆ ಅಟ್ಟಿದರು. 5ನೇ ಎಸೆತವನ್ನು ಆಕರ್ಷಕ ಸಿಕ್ಸರ್ ಬಾರಿಸಿದರು. ಆರನೇ ಎಸೆತದಲ್ಲಿ ಮೂರು ರನ್ ಕಲೆ ಹಾಕಿದರು. ಭಾರತವು ಒಂದು ಓವರ್‌ನಲ್ಲಿ 20 ರನ್ ಗಳಿಸಿತು.

ಗೆಲುವಿಗೆ 21 ರನ್ ಗುರಿ ಪಡೆದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಹ್ಯಾಲಿ ರೇಣುಕಾ ಎಸೆದ ಮೊದಲ ಎಸೆತವನ್ನು ನೇರ ಬೌಂಡರಿಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಮುಂದಾದ ಗಾರ್ಡನೆರ್ ರಾಧಾಗೆ ಕ್ಯಾಚಿತ್ತು ನಿರ್ಗಮಿಸಿದರು. ಆಗ ಆಸ್ಟ್ರೇಲಿಯಾ 3 ಎಸೆತದಲ್ಲಿ 16 ರನ್ ಗಳಿಸಬೇಕಿತ್ತು. ನಾಲ್ಕನೇ ಎಸೆತ ಎದುರಿಸಿದ ಮ್ಯಾಗ್ರಥ್ ಒಂದು ರನ್ ಗಳಿಸಿದರು. ಹ್ಯಾಲಿ ಐದನೇ ಎಸೆತ ಬೌಂಡರಿ ಮತ್ತು ಆರನೇ ಎಸೆತ ಸಿಕ್ಸರ್ ಎತ್ತಿದ್ದರು ಸಹ ಆಸ್ಟ್ರೇಲಿಯಾ 4 ರನ್‌ನಿಂದ ಸೋಲು ಕಂಡಿತು.

ರನ್‌ಗಳ ಸುರಿಮಳೆ

ಸೂಪರ್ ಓವರ್‌ಗೂ ಮೊದಲು ನಡೆದ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಯಿತು. ಆಸ್ಟ್ರೇಲಿಯಾದ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ಮ್ಯಾಗ್ರಥ್ 51 ಎಸೆತಗಳಲ್ಲಿ 70 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

188 ರನ್‌ಗಳ ಗುರಿ ಪಡೆದ ಭಾರತ ತಂಡದ ಸ್ಮೃತಿ ಮಂದಾನ 49 ಎಸೆತಗಳಲ್ಲಿ 79 ರನ್‌ ಗಳಿಸಿದರು. ಸೆಫಾಲಿ ವರ್ಮಾ ಸಹ 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕಡೆಯದಾಗ 13 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಪಂದ್ಯ ಟೈ ಆಗುವಂತೆ ನೋಡಿಕೊಂಡರು.

ಉಚಿತ ಪ್ರವೇಶ

ಮಹಿಳಾ ಕ್ರಿಕೆಟ್ ಅನ್ನು ಪ್ರಚಾರ ಮಾಡುವ ದೃಷ್ಟಿಯಿಂದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾನುವಾರದ ಪಂದ್ಯಕ್ಕೆ ಉಚಿತ್ರ ಪ್ರವೇಶ ಕಲ್ಪಿಸಲಾಗಿತ್ತು. ಸುಮಾರು 45,000 ಪ್ರೇಕ್ಷಕರು ಆಟ ಕಣ್ತುಂಬಿಕೊಂಡರು.

ಇದನ್ನೂ ಓದಿ: ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...