Homeಗೌರಿ ಕಣ್ಣೋಟಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರಿಸುತ್ತದೆ.

- Advertisement -
- Advertisement -

ಜೂಲಿಯಾ ಗಿಲ್ಲಾರ್ಡ್ ಆಸ್ಟ್ರೇಲಿಯಾ ದೇಶದ ಪ್ರಥಮ ಮಹಿಳಾ ಪ್ರಧಾನಿ. ವಿದ್ಯಾರ್ಥಿನಿ ಆಗಿದ್ದಾಗಲೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ ಜೂಲಿಯಾ ಸಮಾಜವಾದದಲ್ಲಿ ನಂಬಿಕೆ ಇಟ್ಟವಳು. ಆ ಕಾರಣಕ್ಕೆ ಆಸ್ಟ್ರೇಲಿಯಾದ ಎಡಪಂಥೀಯ ಒಲವನ್ನು ಹೊಂದಿರುವ ಲೇಬರ್ ಪಾರ್ಟಿಯನ್ನು ಸೇರಿಕೊಂಡು ಒಂದೊAದೇ ಮೆಟ್ಟಿಲುಗಳನ್ನು ಏರುತ್ತಾ ಹೋದರು. ಹಿಂದಿನ ಪ್ರಧಾನಿ ಕೆವಿನ್ ರುಡ್ ಅವರು ತಮ್ಮ ಲೇಬರ್ ಪಕ್ಷದ ಸದಸ್ಯರ ಬೆಂಬಲವನ್ನು ಕಳೆದುಕೊಂಡಾಗ ಜೂಲಿಯಾ ಅವರನ್ನು ಪ್ರಧಾನಿಯಾಗಿ ಆ ಪಕ್ಷದ ಸಂಸದರು ಮನಸಿಲ್ಲದ ಮನಸ್ಸಿನೊಂದಿಗೆ ಆಯ್ಕೆ ಮಾಡಿದ್ದರು. ಅವರ ಹಿಂಜರಿಕೆಗೆ ಕಾರಣ ಜೂಲಿಯಾ ಆ ಸ್ಥಾನಕ್ಕೆ ಬೇಕಾದ ಅರ್ಹತೆಗಳನ್ನು ಹೊಂದಿದ್ದಾರೋ ಇಲ್ಲವೂ ಎಂಬುದಾಗಿರಲಿಲ್ಲ. ಬದಲಾಗಿ ಈ ಮಹಿಳೆಗಿಂತ ಸೂಕ್ತವಾದ ಪುರುಷ ತಮ್ಮ ಮುಂದೆ ಇಲ್ಲವಲ್ಲ ಎಂಬ ಲಿಂಗ ತಾರತಮ್ಯ.

ಜೂಲಿಯಾ ಅವರಿಗೆ ಈಗ 51 ವರ್ಷ ವಯಸ್ಸು. ಮದುವೆ ಆಗಿರದ ಆಕೆ ಯಾವ ಮುಚ್ಚುಮರೆ ಇಲ್ಲದೆ ತನ್ನ ಪುರುಷ ಸಂಗಾತಿಯೊಂದಿಗೆ ವಾಸಿಸುತ್ತಿದ್ದಾರೆ. ಇತರೆ ದೇಶಗಳ ಮಹಿಳೆಯರಂತೆ ಜೂಲಿಯಾ ಕೂಡ ತನ್ನ ವೃತ್ತಿ ಬದುಕಿನಲ್ಲಿ ಲಿಂಗಬೇಧವನ್ನು ಎದುರಿಸುತ್ತಲೇ ಮುಂದೆ ಬಂದವರು. ಈಗ ಅವರು ಪ್ರಧಾನಿ ಆಗಿದ್ದರೂ ಆಕೆ ಮಹಿಳೆ ಆಗಿರುವುದರಿಂದಲೇ ಆಕೆಯನ್ನು ಟೀಕೆ ಮಾಡುವವರಿಗೆ ಲೆಕ್ಕವಿಲ್ಲ. ಜೂಲಿಯಾ ಅವರ ಆತ್ಮಸ್ಥೈರ್ಯವನ್ನು ಮುರಿದು ಹಾಕಲು ಆಕೆಯ ಟೀಕಾಕಾರರು ಮಾಡಿರುವ ಪ್ರಯತ್ನಗಳಲ್ಲಿ ಹಲವು ಹೇಸಿಗೆ ಹುಟ್ಟಿಸುವಂತಹವು. ಉದಾಹರಣೆಗೆ ಜೂಲಿಯಾ ಅವರು ಮಕ್ಕಳನ್ನು ಹೆತ್ತಿಲ್ಲ. ಅದನ್ನೇ ಅಸ್ತ್ರವಾಗಿಸಿಕೊಂಡು ಕೆಲವರು ಅವರನ್ನು “ಬೇಕಂತಲೇ ಬಂಜೆ ಆಗಿರುವವಳು’’ ಎಂದು ಜರಿಯುವ ಮಟ್ಟಕ್ಕೆ ಹೋಗಿದ್ದೂ ಉಂಟು. ಜೊತೆಗೆ “Ditch the Bitch’’ (ಈ ಹಾದರಗಿತ್ತಿಯನ್ನು ತೊಲಗಿಸಿ) ಎಂಬ ಕರೆ ಕೊಟ್ಟು ಆಕೆಯ ವಿರುದ್ಧ ಚುನಾವಣಾ ಪ್ರಚಾರವನ್ನೂ ಮಾಡಲಾಗಿತ್ತು.

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರುವುದರಿಂದ ಅವರ ಸಾರಾಂಶವನ್ನು ಇಲ್ಲಿ ನೀಡುತ್ತಿದ್ದೇನೆ.

ನಾನು ಪ್ರಧಾನಿಯಾಗಿ ಈ ಕುರ್ಚಿಯಲ್ಲಿ ಕೂರುವ ನನ್ನ ಎದುರು ವಿರೋಧ ಪಕ್ಷದ ನಾಯಕರಾಗಿ ಕೂರುವ ಈ ಮನುಷ್ಯ ಮೊದಲಿನಿಂದಲೂ ಸ್ತ್ರೀದ್ವೇಷ ನೀತಿಯನ್ನೇ ಪ್ರದರ್ಶಿಸುತ್ತಾ ಬಂದಿದ್ದಾರೆ. ಉದಾಹರಣೆಗೆ ಒಮ್ಮೆ ಈ ಸಂಸತ್ತಿನಲ್ಲಿ ಮಾತನಾಡುತ್ತಾ ನಾನು ’ಗೌರವಾರ್ಹ ಮಹಿಳೆ’ಯಂತೆ ವರ್ತಿಸಬೇಕು ಎಂದಿದ್ದರು. ನನ್ನ ಜಾಗದಲ್ಲಿ ಪುರುಷನೊಬ್ಬ ಕೂತಿದ್ದರೆ ಆತನ ಬಗ್ಗೆ ಇಂತಹ ಪದಗಳನ್ನು ಉಪಯೋಗಿಸುತ್ತಿದ್ದರೆ? ಇಲ್ಲ. ವಿರೋಧ ಪಕ್ಷದ ನಾಯಕರು ಒಮ್ಮೆ ಸಂಸತ್ತಿನ ಹೊರಗಡೆ ನನ್ನ ವಿರುದ್ಧ ’Ditch the Bitch’ ಎಂದು ಬರೆಯಲಾಗಿದ್ದ ಪೋಸ್ಟರ್ ಪಕ್ಕ ನಿಂತರು. ಹಾಗೆಯೇ ಇನ್ನೊಮ್ಮೆ ನನ್ನನ್ನು ಯಾವುದೋ ಪುರಷನ ಹಾದರಗಿತ್ತಿ ಎಂದು ಬಣ್ಣಿಸಿದ್ದ ಪೋಸ್ಟರ್ ಪಕ್ಕ ನಿಂತರು. ಅದು ಮಹಿಳಾ ದ್ವೇಷ ನಿಲುವಲ್ಲದೆ ಇನ್ನೇನು? ಪ್ರತಿದಿನ, ಪ್ರತಿಹಂತದಲ್ಲಿ, ವಿವಿಧ ತರಹದಲ್ಲಿ ನಾನು ಈ ವ್ಯಕ್ತಿಯಿಂದ ಸ್ತ್ರೀದ್ವೇಷಿ ನಿಲುವನ್ನು, ಲಿಂಗಬೇಧ ತಾರತಮ್ಯವನ್ನು ಎದುರಿಸುತ್ತಿದ್ದೇನೆ.

ಇಂತಹ ಮನುಷ್ಯ ಈ ಸಂಸತನ್ನು ಪ್ರವೇಶಿಸಿ ಆಸ್ಟ್ರೇಲಿಯಾದ ಮಹಿಳೆಯರಲ್ಲಿ ಕ್ಷಮೆ ಕೇಳಿಲ್ಲ. ನನ್ನನ್ನು ಪದೇಪದೇ ಅವಮಾನಿಸಿದ್ದಕ್ಕೆ ನನಗೆ ಸಾರಿ ಹೇಳಿಲ್ಲ. ಆದರೆ ಇವತ್ತು ರಾಜಕೀಯ ದುರುದ್ದೇಶದಿಂದ ಮಹಿಳೆಯರ ಪರ ನಿಂತಿರುವುದಾಗಿ ಪೋಸು ಕೊಡುತ್ತಿದ್ದಾರೆ. ಇಂತಹ ಇಬ್ಬಂದಿ ನೀತಿಯನ್ನು ಯಾರೂ ಸಹಿಸಕೂಡದು.

ಆಕೆಯ ಭಾಷಣ ನನಗೆ ಇಷ್ಟವಾಗಿದ್ದರಿಂದ ಅದರ ಮುಖ್ಯ ಭಾಗಗಳನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ….

– ಗೌರಿ ಲಂಕೇಶ್

ಅಕ್ಟೋಬರ್ 31, 2012


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...