Homeಗೌರಿ ಕಣ್ಣೋಟಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರಿಸುತ್ತದೆ.

- Advertisement -
- Advertisement -

ಜೂಲಿಯಾ ಗಿಲ್ಲಾರ್ಡ್ ಆಸ್ಟ್ರೇಲಿಯಾ ದೇಶದ ಪ್ರಥಮ ಮಹಿಳಾ ಪ್ರಧಾನಿ. ವಿದ್ಯಾರ್ಥಿನಿ ಆಗಿದ್ದಾಗಲೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ ಜೂಲಿಯಾ ಸಮಾಜವಾದದಲ್ಲಿ ನಂಬಿಕೆ ಇಟ್ಟವಳು. ಆ ಕಾರಣಕ್ಕೆ ಆಸ್ಟ್ರೇಲಿಯಾದ ಎಡಪಂಥೀಯ ಒಲವನ್ನು ಹೊಂದಿರುವ ಲೇಬರ್ ಪಾರ್ಟಿಯನ್ನು ಸೇರಿಕೊಂಡು ಒಂದೊAದೇ ಮೆಟ್ಟಿಲುಗಳನ್ನು ಏರುತ್ತಾ ಹೋದರು. ಹಿಂದಿನ ಪ್ರಧಾನಿ ಕೆವಿನ್ ರುಡ್ ಅವರು ತಮ್ಮ ಲೇಬರ್ ಪಕ್ಷದ ಸದಸ್ಯರ ಬೆಂಬಲವನ್ನು ಕಳೆದುಕೊಂಡಾಗ ಜೂಲಿಯಾ ಅವರನ್ನು ಪ್ರಧಾನಿಯಾಗಿ ಆ ಪಕ್ಷದ ಸಂಸದರು ಮನಸಿಲ್ಲದ ಮನಸ್ಸಿನೊಂದಿಗೆ ಆಯ್ಕೆ ಮಾಡಿದ್ದರು. ಅವರ ಹಿಂಜರಿಕೆಗೆ ಕಾರಣ ಜೂಲಿಯಾ ಆ ಸ್ಥಾನಕ್ಕೆ ಬೇಕಾದ ಅರ್ಹತೆಗಳನ್ನು ಹೊಂದಿದ್ದಾರೋ ಇಲ್ಲವೂ ಎಂಬುದಾಗಿರಲಿಲ್ಲ. ಬದಲಾಗಿ ಈ ಮಹಿಳೆಗಿಂತ ಸೂಕ್ತವಾದ ಪುರುಷ ತಮ್ಮ ಮುಂದೆ ಇಲ್ಲವಲ್ಲ ಎಂಬ ಲಿಂಗ ತಾರತಮ್ಯ.

ಜೂಲಿಯಾ ಅವರಿಗೆ ಈಗ 51 ವರ್ಷ ವಯಸ್ಸು. ಮದುವೆ ಆಗಿರದ ಆಕೆ ಯಾವ ಮುಚ್ಚುಮರೆ ಇಲ್ಲದೆ ತನ್ನ ಪುರುಷ ಸಂಗಾತಿಯೊಂದಿಗೆ ವಾಸಿಸುತ್ತಿದ್ದಾರೆ. ಇತರೆ ದೇಶಗಳ ಮಹಿಳೆಯರಂತೆ ಜೂಲಿಯಾ ಕೂಡ ತನ್ನ ವೃತ್ತಿ ಬದುಕಿನಲ್ಲಿ ಲಿಂಗಬೇಧವನ್ನು ಎದುರಿಸುತ್ತಲೇ ಮುಂದೆ ಬಂದವರು. ಈಗ ಅವರು ಪ್ರಧಾನಿ ಆಗಿದ್ದರೂ ಆಕೆ ಮಹಿಳೆ ಆಗಿರುವುದರಿಂದಲೇ ಆಕೆಯನ್ನು ಟೀಕೆ ಮಾಡುವವರಿಗೆ ಲೆಕ್ಕವಿಲ್ಲ. ಜೂಲಿಯಾ ಅವರ ಆತ್ಮಸ್ಥೈರ್ಯವನ್ನು ಮುರಿದು ಹಾಕಲು ಆಕೆಯ ಟೀಕಾಕಾರರು ಮಾಡಿರುವ ಪ್ರಯತ್ನಗಳಲ್ಲಿ ಹಲವು ಹೇಸಿಗೆ ಹುಟ್ಟಿಸುವಂತಹವು. ಉದಾಹರಣೆಗೆ ಜೂಲಿಯಾ ಅವರು ಮಕ್ಕಳನ್ನು ಹೆತ್ತಿಲ್ಲ. ಅದನ್ನೇ ಅಸ್ತ್ರವಾಗಿಸಿಕೊಂಡು ಕೆಲವರು ಅವರನ್ನು “ಬೇಕಂತಲೇ ಬಂಜೆ ಆಗಿರುವವಳು’’ ಎಂದು ಜರಿಯುವ ಮಟ್ಟಕ್ಕೆ ಹೋಗಿದ್ದೂ ಉಂಟು. ಜೊತೆಗೆ “Ditch the Bitch’’ (ಈ ಹಾದರಗಿತ್ತಿಯನ್ನು ತೊಲಗಿಸಿ) ಎಂಬ ಕರೆ ಕೊಟ್ಟು ಆಕೆಯ ವಿರುದ್ಧ ಚುನಾವಣಾ ಪ್ರಚಾರವನ್ನೂ ಮಾಡಲಾಗಿತ್ತು.

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರುವುದರಿಂದ ಅವರ ಸಾರಾಂಶವನ್ನು ಇಲ್ಲಿ ನೀಡುತ್ತಿದ್ದೇನೆ.

ನಾನು ಪ್ರಧಾನಿಯಾಗಿ ಈ ಕುರ್ಚಿಯಲ್ಲಿ ಕೂರುವ ನನ್ನ ಎದುರು ವಿರೋಧ ಪಕ್ಷದ ನಾಯಕರಾಗಿ ಕೂರುವ ಈ ಮನುಷ್ಯ ಮೊದಲಿನಿಂದಲೂ ಸ್ತ್ರೀದ್ವೇಷ ನೀತಿಯನ್ನೇ ಪ್ರದರ್ಶಿಸುತ್ತಾ ಬಂದಿದ್ದಾರೆ. ಉದಾಹರಣೆಗೆ ಒಮ್ಮೆ ಈ ಸಂಸತ್ತಿನಲ್ಲಿ ಮಾತನಾಡುತ್ತಾ ನಾನು ’ಗೌರವಾರ್ಹ ಮಹಿಳೆ’ಯಂತೆ ವರ್ತಿಸಬೇಕು ಎಂದಿದ್ದರು. ನನ್ನ ಜಾಗದಲ್ಲಿ ಪುರುಷನೊಬ್ಬ ಕೂತಿದ್ದರೆ ಆತನ ಬಗ್ಗೆ ಇಂತಹ ಪದಗಳನ್ನು ಉಪಯೋಗಿಸುತ್ತಿದ್ದರೆ? ಇಲ್ಲ. ವಿರೋಧ ಪಕ್ಷದ ನಾಯಕರು ಒಮ್ಮೆ ಸಂಸತ್ತಿನ ಹೊರಗಡೆ ನನ್ನ ವಿರುದ್ಧ ’Ditch the Bitch’ ಎಂದು ಬರೆಯಲಾಗಿದ್ದ ಪೋಸ್ಟರ್ ಪಕ್ಕ ನಿಂತರು. ಹಾಗೆಯೇ ಇನ್ನೊಮ್ಮೆ ನನ್ನನ್ನು ಯಾವುದೋ ಪುರಷನ ಹಾದರಗಿತ್ತಿ ಎಂದು ಬಣ್ಣಿಸಿದ್ದ ಪೋಸ್ಟರ್ ಪಕ್ಕ ನಿಂತರು. ಅದು ಮಹಿಳಾ ದ್ವೇಷ ನಿಲುವಲ್ಲದೆ ಇನ್ನೇನು? ಪ್ರತಿದಿನ, ಪ್ರತಿಹಂತದಲ್ಲಿ, ವಿವಿಧ ತರಹದಲ್ಲಿ ನಾನು ಈ ವ್ಯಕ್ತಿಯಿಂದ ಸ್ತ್ರೀದ್ವೇಷಿ ನಿಲುವನ್ನು, ಲಿಂಗಬೇಧ ತಾರತಮ್ಯವನ್ನು ಎದುರಿಸುತ್ತಿದ್ದೇನೆ.

ಇಂತಹ ಮನುಷ್ಯ ಈ ಸಂಸತನ್ನು ಪ್ರವೇಶಿಸಿ ಆಸ್ಟ್ರೇಲಿಯಾದ ಮಹಿಳೆಯರಲ್ಲಿ ಕ್ಷಮೆ ಕೇಳಿಲ್ಲ. ನನ್ನನ್ನು ಪದೇಪದೇ ಅವಮಾನಿಸಿದ್ದಕ್ಕೆ ನನಗೆ ಸಾರಿ ಹೇಳಿಲ್ಲ. ಆದರೆ ಇವತ್ತು ರಾಜಕೀಯ ದುರುದ್ದೇಶದಿಂದ ಮಹಿಳೆಯರ ಪರ ನಿಂತಿರುವುದಾಗಿ ಪೋಸು ಕೊಡುತ್ತಿದ್ದಾರೆ. ಇಂತಹ ಇಬ್ಬಂದಿ ನೀತಿಯನ್ನು ಯಾರೂ ಸಹಿಸಕೂಡದು.

ಆಕೆಯ ಭಾಷಣ ನನಗೆ ಇಷ್ಟವಾಗಿದ್ದರಿಂದ ಅದರ ಮುಖ್ಯ ಭಾಗಗಳನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ….

– ಗೌರಿ ಲಂಕೇಶ್

ಅಕ್ಟೋಬರ್ 31, 2012


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...