Homeಗೌರಿ ಕಣ್ಣೋಟಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರಿಸುತ್ತದೆ.

- Advertisement -
- Advertisement -

ಜೂಲಿಯಾ ಗಿಲ್ಲಾರ್ಡ್ ಆಸ್ಟ್ರೇಲಿಯಾ ದೇಶದ ಪ್ರಥಮ ಮಹಿಳಾ ಪ್ರಧಾನಿ. ವಿದ್ಯಾರ್ಥಿನಿ ಆಗಿದ್ದಾಗಲೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ ಜೂಲಿಯಾ ಸಮಾಜವಾದದಲ್ಲಿ ನಂಬಿಕೆ ಇಟ್ಟವಳು. ಆ ಕಾರಣಕ್ಕೆ ಆಸ್ಟ್ರೇಲಿಯಾದ ಎಡಪಂಥೀಯ ಒಲವನ್ನು ಹೊಂದಿರುವ ಲೇಬರ್ ಪಾರ್ಟಿಯನ್ನು ಸೇರಿಕೊಂಡು ಒಂದೊAದೇ ಮೆಟ್ಟಿಲುಗಳನ್ನು ಏರುತ್ತಾ ಹೋದರು. ಹಿಂದಿನ ಪ್ರಧಾನಿ ಕೆವಿನ್ ರುಡ್ ಅವರು ತಮ್ಮ ಲೇಬರ್ ಪಕ್ಷದ ಸದಸ್ಯರ ಬೆಂಬಲವನ್ನು ಕಳೆದುಕೊಂಡಾಗ ಜೂಲಿಯಾ ಅವರನ್ನು ಪ್ರಧಾನಿಯಾಗಿ ಆ ಪಕ್ಷದ ಸಂಸದರು ಮನಸಿಲ್ಲದ ಮನಸ್ಸಿನೊಂದಿಗೆ ಆಯ್ಕೆ ಮಾಡಿದ್ದರು. ಅವರ ಹಿಂಜರಿಕೆಗೆ ಕಾರಣ ಜೂಲಿಯಾ ಆ ಸ್ಥಾನಕ್ಕೆ ಬೇಕಾದ ಅರ್ಹತೆಗಳನ್ನು ಹೊಂದಿದ್ದಾರೋ ಇಲ್ಲವೂ ಎಂಬುದಾಗಿರಲಿಲ್ಲ. ಬದಲಾಗಿ ಈ ಮಹಿಳೆಗಿಂತ ಸೂಕ್ತವಾದ ಪುರುಷ ತಮ್ಮ ಮುಂದೆ ಇಲ್ಲವಲ್ಲ ಎಂಬ ಲಿಂಗ ತಾರತಮ್ಯ.

ಜೂಲಿಯಾ ಅವರಿಗೆ ಈಗ 51 ವರ್ಷ ವಯಸ್ಸು. ಮದುವೆ ಆಗಿರದ ಆಕೆ ಯಾವ ಮುಚ್ಚುಮರೆ ಇಲ್ಲದೆ ತನ್ನ ಪುರುಷ ಸಂಗಾತಿಯೊಂದಿಗೆ ವಾಸಿಸುತ್ತಿದ್ದಾರೆ. ಇತರೆ ದೇಶಗಳ ಮಹಿಳೆಯರಂತೆ ಜೂಲಿಯಾ ಕೂಡ ತನ್ನ ವೃತ್ತಿ ಬದುಕಿನಲ್ಲಿ ಲಿಂಗಬೇಧವನ್ನು ಎದುರಿಸುತ್ತಲೇ ಮುಂದೆ ಬಂದವರು. ಈಗ ಅವರು ಪ್ರಧಾನಿ ಆಗಿದ್ದರೂ ಆಕೆ ಮಹಿಳೆ ಆಗಿರುವುದರಿಂದಲೇ ಆಕೆಯನ್ನು ಟೀಕೆ ಮಾಡುವವರಿಗೆ ಲೆಕ್ಕವಿಲ್ಲ. ಜೂಲಿಯಾ ಅವರ ಆತ್ಮಸ್ಥೈರ್ಯವನ್ನು ಮುರಿದು ಹಾಕಲು ಆಕೆಯ ಟೀಕಾಕಾರರು ಮಾಡಿರುವ ಪ್ರಯತ್ನಗಳಲ್ಲಿ ಹಲವು ಹೇಸಿಗೆ ಹುಟ್ಟಿಸುವಂತಹವು. ಉದಾಹರಣೆಗೆ ಜೂಲಿಯಾ ಅವರು ಮಕ್ಕಳನ್ನು ಹೆತ್ತಿಲ್ಲ. ಅದನ್ನೇ ಅಸ್ತ್ರವಾಗಿಸಿಕೊಂಡು ಕೆಲವರು ಅವರನ್ನು “ಬೇಕಂತಲೇ ಬಂಜೆ ಆಗಿರುವವಳು’’ ಎಂದು ಜರಿಯುವ ಮಟ್ಟಕ್ಕೆ ಹೋಗಿದ್ದೂ ಉಂಟು. ಜೊತೆಗೆ “Ditch the Bitch’’ (ಈ ಹಾದರಗಿತ್ತಿಯನ್ನು ತೊಲಗಿಸಿ) ಎಂಬ ಕರೆ ಕೊಟ್ಟು ಆಕೆಯ ವಿರುದ್ಧ ಚುನಾವಣಾ ಪ್ರಚಾರವನ್ನೂ ಮಾಡಲಾಗಿತ್ತು.

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರುವುದರಿಂದ ಅವರ ಸಾರಾಂಶವನ್ನು ಇಲ್ಲಿ ನೀಡುತ್ತಿದ್ದೇನೆ.

ನಾನು ಪ್ರಧಾನಿಯಾಗಿ ಈ ಕುರ್ಚಿಯಲ್ಲಿ ಕೂರುವ ನನ್ನ ಎದುರು ವಿರೋಧ ಪಕ್ಷದ ನಾಯಕರಾಗಿ ಕೂರುವ ಈ ಮನುಷ್ಯ ಮೊದಲಿನಿಂದಲೂ ಸ್ತ್ರೀದ್ವೇಷ ನೀತಿಯನ್ನೇ ಪ್ರದರ್ಶಿಸುತ್ತಾ ಬಂದಿದ್ದಾರೆ. ಉದಾಹರಣೆಗೆ ಒಮ್ಮೆ ಈ ಸಂಸತ್ತಿನಲ್ಲಿ ಮಾತನಾಡುತ್ತಾ ನಾನು ’ಗೌರವಾರ್ಹ ಮಹಿಳೆ’ಯಂತೆ ವರ್ತಿಸಬೇಕು ಎಂದಿದ್ದರು. ನನ್ನ ಜಾಗದಲ್ಲಿ ಪುರುಷನೊಬ್ಬ ಕೂತಿದ್ದರೆ ಆತನ ಬಗ್ಗೆ ಇಂತಹ ಪದಗಳನ್ನು ಉಪಯೋಗಿಸುತ್ತಿದ್ದರೆ? ಇಲ್ಲ. ವಿರೋಧ ಪಕ್ಷದ ನಾಯಕರು ಒಮ್ಮೆ ಸಂಸತ್ತಿನ ಹೊರಗಡೆ ನನ್ನ ವಿರುದ್ಧ ’Ditch the Bitch’ ಎಂದು ಬರೆಯಲಾಗಿದ್ದ ಪೋಸ್ಟರ್ ಪಕ್ಕ ನಿಂತರು. ಹಾಗೆಯೇ ಇನ್ನೊಮ್ಮೆ ನನ್ನನ್ನು ಯಾವುದೋ ಪುರಷನ ಹಾದರಗಿತ್ತಿ ಎಂದು ಬಣ್ಣಿಸಿದ್ದ ಪೋಸ್ಟರ್ ಪಕ್ಕ ನಿಂತರು. ಅದು ಮಹಿಳಾ ದ್ವೇಷ ನಿಲುವಲ್ಲದೆ ಇನ್ನೇನು? ಪ್ರತಿದಿನ, ಪ್ರತಿಹಂತದಲ್ಲಿ, ವಿವಿಧ ತರಹದಲ್ಲಿ ನಾನು ಈ ವ್ಯಕ್ತಿಯಿಂದ ಸ್ತ್ರೀದ್ವೇಷಿ ನಿಲುವನ್ನು, ಲಿಂಗಬೇಧ ತಾರತಮ್ಯವನ್ನು ಎದುರಿಸುತ್ತಿದ್ದೇನೆ.

ಇಂತಹ ಮನುಷ್ಯ ಈ ಸಂಸತನ್ನು ಪ್ರವೇಶಿಸಿ ಆಸ್ಟ್ರೇಲಿಯಾದ ಮಹಿಳೆಯರಲ್ಲಿ ಕ್ಷಮೆ ಕೇಳಿಲ್ಲ. ನನ್ನನ್ನು ಪದೇಪದೇ ಅವಮಾನಿಸಿದ್ದಕ್ಕೆ ನನಗೆ ಸಾರಿ ಹೇಳಿಲ್ಲ. ಆದರೆ ಇವತ್ತು ರಾಜಕೀಯ ದುರುದ್ದೇಶದಿಂದ ಮಹಿಳೆಯರ ಪರ ನಿಂತಿರುವುದಾಗಿ ಪೋಸು ಕೊಡುತ್ತಿದ್ದಾರೆ. ಇಂತಹ ಇಬ್ಬಂದಿ ನೀತಿಯನ್ನು ಯಾರೂ ಸಹಿಸಕೂಡದು.

ಆಕೆಯ ಭಾಷಣ ನನಗೆ ಇಷ್ಟವಾಗಿದ್ದರಿಂದ ಅದರ ಮುಖ್ಯ ಭಾಗಗಳನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ….

– ಗೌರಿ ಲಂಕೇಶ್

ಅಕ್ಟೋಬರ್ 31, 2012


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...