Homeಗೌರಿ ಕಣ್ಣೋಟಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರಿಸುತ್ತದೆ.

- Advertisement -
- Advertisement -

ಜೂಲಿಯಾ ಗಿಲ್ಲಾರ್ಡ್ ಆಸ್ಟ್ರೇಲಿಯಾ ದೇಶದ ಪ್ರಥಮ ಮಹಿಳಾ ಪ್ರಧಾನಿ. ವಿದ್ಯಾರ್ಥಿನಿ ಆಗಿದ್ದಾಗಲೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ ಜೂಲಿಯಾ ಸಮಾಜವಾದದಲ್ಲಿ ನಂಬಿಕೆ ಇಟ್ಟವಳು. ಆ ಕಾರಣಕ್ಕೆ ಆಸ್ಟ್ರೇಲಿಯಾದ ಎಡಪಂಥೀಯ ಒಲವನ್ನು ಹೊಂದಿರುವ ಲೇಬರ್ ಪಾರ್ಟಿಯನ್ನು ಸೇರಿಕೊಂಡು ಒಂದೊAದೇ ಮೆಟ್ಟಿಲುಗಳನ್ನು ಏರುತ್ತಾ ಹೋದರು. ಹಿಂದಿನ ಪ್ರಧಾನಿ ಕೆವಿನ್ ರುಡ್ ಅವರು ತಮ್ಮ ಲೇಬರ್ ಪಕ್ಷದ ಸದಸ್ಯರ ಬೆಂಬಲವನ್ನು ಕಳೆದುಕೊಂಡಾಗ ಜೂಲಿಯಾ ಅವರನ್ನು ಪ್ರಧಾನಿಯಾಗಿ ಆ ಪಕ್ಷದ ಸಂಸದರು ಮನಸಿಲ್ಲದ ಮನಸ್ಸಿನೊಂದಿಗೆ ಆಯ್ಕೆ ಮಾಡಿದ್ದರು. ಅವರ ಹಿಂಜರಿಕೆಗೆ ಕಾರಣ ಜೂಲಿಯಾ ಆ ಸ್ಥಾನಕ್ಕೆ ಬೇಕಾದ ಅರ್ಹತೆಗಳನ್ನು ಹೊಂದಿದ್ದಾರೋ ಇಲ್ಲವೂ ಎಂಬುದಾಗಿರಲಿಲ್ಲ. ಬದಲಾಗಿ ಈ ಮಹಿಳೆಗಿಂತ ಸೂಕ್ತವಾದ ಪುರುಷ ತಮ್ಮ ಮುಂದೆ ಇಲ್ಲವಲ್ಲ ಎಂಬ ಲಿಂಗ ತಾರತಮ್ಯ.

ಜೂಲಿಯಾ ಅವರಿಗೆ ಈಗ 51 ವರ್ಷ ವಯಸ್ಸು. ಮದುವೆ ಆಗಿರದ ಆಕೆ ಯಾವ ಮುಚ್ಚುಮರೆ ಇಲ್ಲದೆ ತನ್ನ ಪುರುಷ ಸಂಗಾತಿಯೊಂದಿಗೆ ವಾಸಿಸುತ್ತಿದ್ದಾರೆ. ಇತರೆ ದೇಶಗಳ ಮಹಿಳೆಯರಂತೆ ಜೂಲಿಯಾ ಕೂಡ ತನ್ನ ವೃತ್ತಿ ಬದುಕಿನಲ್ಲಿ ಲಿಂಗಬೇಧವನ್ನು ಎದುರಿಸುತ್ತಲೇ ಮುಂದೆ ಬಂದವರು. ಈಗ ಅವರು ಪ್ರಧಾನಿ ಆಗಿದ್ದರೂ ಆಕೆ ಮಹಿಳೆ ಆಗಿರುವುದರಿಂದಲೇ ಆಕೆಯನ್ನು ಟೀಕೆ ಮಾಡುವವರಿಗೆ ಲೆಕ್ಕವಿಲ್ಲ. ಜೂಲಿಯಾ ಅವರ ಆತ್ಮಸ್ಥೈರ್ಯವನ್ನು ಮುರಿದು ಹಾಕಲು ಆಕೆಯ ಟೀಕಾಕಾರರು ಮಾಡಿರುವ ಪ್ರಯತ್ನಗಳಲ್ಲಿ ಹಲವು ಹೇಸಿಗೆ ಹುಟ್ಟಿಸುವಂತಹವು. ಉದಾಹರಣೆಗೆ ಜೂಲಿಯಾ ಅವರು ಮಕ್ಕಳನ್ನು ಹೆತ್ತಿಲ್ಲ. ಅದನ್ನೇ ಅಸ್ತ್ರವಾಗಿಸಿಕೊಂಡು ಕೆಲವರು ಅವರನ್ನು “ಬೇಕಂತಲೇ ಬಂಜೆ ಆಗಿರುವವಳು’’ ಎಂದು ಜರಿಯುವ ಮಟ್ಟಕ್ಕೆ ಹೋಗಿದ್ದೂ ಉಂಟು. ಜೊತೆಗೆ “Ditch the Bitch’’ (ಈ ಹಾದರಗಿತ್ತಿಯನ್ನು ತೊಲಗಿಸಿ) ಎಂಬ ಕರೆ ಕೊಟ್ಟು ಆಕೆಯ ವಿರುದ್ಧ ಚುನಾವಣಾ ಪ್ರಚಾರವನ್ನೂ ಮಾಡಲಾಗಿತ್ತು.

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರುವುದರಿಂದ ಅವರ ಸಾರಾಂಶವನ್ನು ಇಲ್ಲಿ ನೀಡುತ್ತಿದ್ದೇನೆ.

ನಾನು ಪ್ರಧಾನಿಯಾಗಿ ಈ ಕುರ್ಚಿಯಲ್ಲಿ ಕೂರುವ ನನ್ನ ಎದುರು ವಿರೋಧ ಪಕ್ಷದ ನಾಯಕರಾಗಿ ಕೂರುವ ಈ ಮನುಷ್ಯ ಮೊದಲಿನಿಂದಲೂ ಸ್ತ್ರೀದ್ವೇಷ ನೀತಿಯನ್ನೇ ಪ್ರದರ್ಶಿಸುತ್ತಾ ಬಂದಿದ್ದಾರೆ. ಉದಾಹರಣೆಗೆ ಒಮ್ಮೆ ಈ ಸಂಸತ್ತಿನಲ್ಲಿ ಮಾತನಾಡುತ್ತಾ ನಾನು ’ಗೌರವಾರ್ಹ ಮಹಿಳೆ’ಯಂತೆ ವರ್ತಿಸಬೇಕು ಎಂದಿದ್ದರು. ನನ್ನ ಜಾಗದಲ್ಲಿ ಪುರುಷನೊಬ್ಬ ಕೂತಿದ್ದರೆ ಆತನ ಬಗ್ಗೆ ಇಂತಹ ಪದಗಳನ್ನು ಉಪಯೋಗಿಸುತ್ತಿದ್ದರೆ? ಇಲ್ಲ. ವಿರೋಧ ಪಕ್ಷದ ನಾಯಕರು ಒಮ್ಮೆ ಸಂಸತ್ತಿನ ಹೊರಗಡೆ ನನ್ನ ವಿರುದ್ಧ ’Ditch the Bitch’ ಎಂದು ಬರೆಯಲಾಗಿದ್ದ ಪೋಸ್ಟರ್ ಪಕ್ಕ ನಿಂತರು. ಹಾಗೆಯೇ ಇನ್ನೊಮ್ಮೆ ನನ್ನನ್ನು ಯಾವುದೋ ಪುರಷನ ಹಾದರಗಿತ್ತಿ ಎಂದು ಬಣ್ಣಿಸಿದ್ದ ಪೋಸ್ಟರ್ ಪಕ್ಕ ನಿಂತರು. ಅದು ಮಹಿಳಾ ದ್ವೇಷ ನಿಲುವಲ್ಲದೆ ಇನ್ನೇನು? ಪ್ರತಿದಿನ, ಪ್ರತಿಹಂತದಲ್ಲಿ, ವಿವಿಧ ತರಹದಲ್ಲಿ ನಾನು ಈ ವ್ಯಕ್ತಿಯಿಂದ ಸ್ತ್ರೀದ್ವೇಷಿ ನಿಲುವನ್ನು, ಲಿಂಗಬೇಧ ತಾರತಮ್ಯವನ್ನು ಎದುರಿಸುತ್ತಿದ್ದೇನೆ.

ಇಂತಹ ಮನುಷ್ಯ ಈ ಸಂಸತನ್ನು ಪ್ರವೇಶಿಸಿ ಆಸ್ಟ್ರೇಲಿಯಾದ ಮಹಿಳೆಯರಲ್ಲಿ ಕ್ಷಮೆ ಕೇಳಿಲ್ಲ. ನನ್ನನ್ನು ಪದೇಪದೇ ಅವಮಾನಿಸಿದ್ದಕ್ಕೆ ನನಗೆ ಸಾರಿ ಹೇಳಿಲ್ಲ. ಆದರೆ ಇವತ್ತು ರಾಜಕೀಯ ದುರುದ್ದೇಶದಿಂದ ಮಹಿಳೆಯರ ಪರ ನಿಂತಿರುವುದಾಗಿ ಪೋಸು ಕೊಡುತ್ತಿದ್ದಾರೆ. ಇಂತಹ ಇಬ್ಬಂದಿ ನೀತಿಯನ್ನು ಯಾರೂ ಸಹಿಸಕೂಡದು.

ಆಕೆಯ ಭಾಷಣ ನನಗೆ ಇಷ್ಟವಾಗಿದ್ದರಿಂದ ಅದರ ಮುಖ್ಯ ಭಾಗಗಳನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ….

– ಗೌರಿ ಲಂಕೇಶ್

ಅಕ್ಟೋಬರ್ 31, 2012


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...