Homeಗೌರಿ ಕಣ್ಣೋಟಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರಿಸುತ್ತದೆ.

- Advertisement -
- Advertisement -

ಜೂಲಿಯಾ ಗಿಲ್ಲಾರ್ಡ್ ಆಸ್ಟ್ರೇಲಿಯಾ ದೇಶದ ಪ್ರಥಮ ಮಹಿಳಾ ಪ್ರಧಾನಿ. ವಿದ್ಯಾರ್ಥಿನಿ ಆಗಿದ್ದಾಗಲೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ ಜೂಲಿಯಾ ಸಮಾಜವಾದದಲ್ಲಿ ನಂಬಿಕೆ ಇಟ್ಟವಳು. ಆ ಕಾರಣಕ್ಕೆ ಆಸ್ಟ್ರೇಲಿಯಾದ ಎಡಪಂಥೀಯ ಒಲವನ್ನು ಹೊಂದಿರುವ ಲೇಬರ್ ಪಾರ್ಟಿಯನ್ನು ಸೇರಿಕೊಂಡು ಒಂದೊAದೇ ಮೆಟ್ಟಿಲುಗಳನ್ನು ಏರುತ್ತಾ ಹೋದರು. ಹಿಂದಿನ ಪ್ರಧಾನಿ ಕೆವಿನ್ ರುಡ್ ಅವರು ತಮ್ಮ ಲೇಬರ್ ಪಕ್ಷದ ಸದಸ್ಯರ ಬೆಂಬಲವನ್ನು ಕಳೆದುಕೊಂಡಾಗ ಜೂಲಿಯಾ ಅವರನ್ನು ಪ್ರಧಾನಿಯಾಗಿ ಆ ಪಕ್ಷದ ಸಂಸದರು ಮನಸಿಲ್ಲದ ಮನಸ್ಸಿನೊಂದಿಗೆ ಆಯ್ಕೆ ಮಾಡಿದ್ದರು. ಅವರ ಹಿಂಜರಿಕೆಗೆ ಕಾರಣ ಜೂಲಿಯಾ ಆ ಸ್ಥಾನಕ್ಕೆ ಬೇಕಾದ ಅರ್ಹತೆಗಳನ್ನು ಹೊಂದಿದ್ದಾರೋ ಇಲ್ಲವೂ ಎಂಬುದಾಗಿರಲಿಲ್ಲ. ಬದಲಾಗಿ ಈ ಮಹಿಳೆಗಿಂತ ಸೂಕ್ತವಾದ ಪುರುಷ ತಮ್ಮ ಮುಂದೆ ಇಲ್ಲವಲ್ಲ ಎಂಬ ಲಿಂಗ ತಾರತಮ್ಯ.

ಜೂಲಿಯಾ ಅವರಿಗೆ ಈಗ 51 ವರ್ಷ ವಯಸ್ಸು. ಮದುವೆ ಆಗಿರದ ಆಕೆ ಯಾವ ಮುಚ್ಚುಮರೆ ಇಲ್ಲದೆ ತನ್ನ ಪುರುಷ ಸಂಗಾತಿಯೊಂದಿಗೆ ವಾಸಿಸುತ್ತಿದ್ದಾರೆ. ಇತರೆ ದೇಶಗಳ ಮಹಿಳೆಯರಂತೆ ಜೂಲಿಯಾ ಕೂಡ ತನ್ನ ವೃತ್ತಿ ಬದುಕಿನಲ್ಲಿ ಲಿಂಗಬೇಧವನ್ನು ಎದುರಿಸುತ್ತಲೇ ಮುಂದೆ ಬಂದವರು. ಈಗ ಅವರು ಪ್ರಧಾನಿ ಆಗಿದ್ದರೂ ಆಕೆ ಮಹಿಳೆ ಆಗಿರುವುದರಿಂದಲೇ ಆಕೆಯನ್ನು ಟೀಕೆ ಮಾಡುವವರಿಗೆ ಲೆಕ್ಕವಿಲ್ಲ. ಜೂಲಿಯಾ ಅವರ ಆತ್ಮಸ್ಥೈರ್ಯವನ್ನು ಮುರಿದು ಹಾಕಲು ಆಕೆಯ ಟೀಕಾಕಾರರು ಮಾಡಿರುವ ಪ್ರಯತ್ನಗಳಲ್ಲಿ ಹಲವು ಹೇಸಿಗೆ ಹುಟ್ಟಿಸುವಂತಹವು. ಉದಾಹರಣೆಗೆ ಜೂಲಿಯಾ ಅವರು ಮಕ್ಕಳನ್ನು ಹೆತ್ತಿಲ್ಲ. ಅದನ್ನೇ ಅಸ್ತ್ರವಾಗಿಸಿಕೊಂಡು ಕೆಲವರು ಅವರನ್ನು “ಬೇಕಂತಲೇ ಬಂಜೆ ಆಗಿರುವವಳು’’ ಎಂದು ಜರಿಯುವ ಮಟ್ಟಕ್ಕೆ ಹೋಗಿದ್ದೂ ಉಂಟು. ಜೊತೆಗೆ “Ditch the Bitch’’ (ಈ ಹಾದರಗಿತ್ತಿಯನ್ನು ತೊಲಗಿಸಿ) ಎಂಬ ಕರೆ ಕೊಟ್ಟು ಆಕೆಯ ವಿರುದ್ಧ ಚುನಾವಣಾ ಪ್ರಚಾರವನ್ನೂ ಮಾಡಲಾಗಿತ್ತು.

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರುವುದರಿಂದ ಅವರ ಸಾರಾಂಶವನ್ನು ಇಲ್ಲಿ ನೀಡುತ್ತಿದ್ದೇನೆ.

ನಾನು ಪ್ರಧಾನಿಯಾಗಿ ಈ ಕುರ್ಚಿಯಲ್ಲಿ ಕೂರುವ ನನ್ನ ಎದುರು ವಿರೋಧ ಪಕ್ಷದ ನಾಯಕರಾಗಿ ಕೂರುವ ಈ ಮನುಷ್ಯ ಮೊದಲಿನಿಂದಲೂ ಸ್ತ್ರೀದ್ವೇಷ ನೀತಿಯನ್ನೇ ಪ್ರದರ್ಶಿಸುತ್ತಾ ಬಂದಿದ್ದಾರೆ. ಉದಾಹರಣೆಗೆ ಒಮ್ಮೆ ಈ ಸಂಸತ್ತಿನಲ್ಲಿ ಮಾತನಾಡುತ್ತಾ ನಾನು ’ಗೌರವಾರ್ಹ ಮಹಿಳೆ’ಯಂತೆ ವರ್ತಿಸಬೇಕು ಎಂದಿದ್ದರು. ನನ್ನ ಜಾಗದಲ್ಲಿ ಪುರುಷನೊಬ್ಬ ಕೂತಿದ್ದರೆ ಆತನ ಬಗ್ಗೆ ಇಂತಹ ಪದಗಳನ್ನು ಉಪಯೋಗಿಸುತ್ತಿದ್ದರೆ? ಇಲ್ಲ. ವಿರೋಧ ಪಕ್ಷದ ನಾಯಕರು ಒಮ್ಮೆ ಸಂಸತ್ತಿನ ಹೊರಗಡೆ ನನ್ನ ವಿರುದ್ಧ ’Ditch the Bitch’ ಎಂದು ಬರೆಯಲಾಗಿದ್ದ ಪೋಸ್ಟರ್ ಪಕ್ಕ ನಿಂತರು. ಹಾಗೆಯೇ ಇನ್ನೊಮ್ಮೆ ನನ್ನನ್ನು ಯಾವುದೋ ಪುರಷನ ಹಾದರಗಿತ್ತಿ ಎಂದು ಬಣ್ಣಿಸಿದ್ದ ಪೋಸ್ಟರ್ ಪಕ್ಕ ನಿಂತರು. ಅದು ಮಹಿಳಾ ದ್ವೇಷ ನಿಲುವಲ್ಲದೆ ಇನ್ನೇನು? ಪ್ರತಿದಿನ, ಪ್ರತಿಹಂತದಲ್ಲಿ, ವಿವಿಧ ತರಹದಲ್ಲಿ ನಾನು ಈ ವ್ಯಕ್ತಿಯಿಂದ ಸ್ತ್ರೀದ್ವೇಷಿ ನಿಲುವನ್ನು, ಲಿಂಗಬೇಧ ತಾರತಮ್ಯವನ್ನು ಎದುರಿಸುತ್ತಿದ್ದೇನೆ.

ಇಂತಹ ಮನುಷ್ಯ ಈ ಸಂಸತನ್ನು ಪ್ರವೇಶಿಸಿ ಆಸ್ಟ್ರೇಲಿಯಾದ ಮಹಿಳೆಯರಲ್ಲಿ ಕ್ಷಮೆ ಕೇಳಿಲ್ಲ. ನನ್ನನ್ನು ಪದೇಪದೇ ಅವಮಾನಿಸಿದ್ದಕ್ಕೆ ನನಗೆ ಸಾರಿ ಹೇಳಿಲ್ಲ. ಆದರೆ ಇವತ್ತು ರಾಜಕೀಯ ದುರುದ್ದೇಶದಿಂದ ಮಹಿಳೆಯರ ಪರ ನಿಂತಿರುವುದಾಗಿ ಪೋಸು ಕೊಡುತ್ತಿದ್ದಾರೆ. ಇಂತಹ ಇಬ್ಬಂದಿ ನೀತಿಯನ್ನು ಯಾರೂ ಸಹಿಸಕೂಡದು.

ಆಕೆಯ ಭಾಷಣ ನನಗೆ ಇಷ್ಟವಾಗಿದ್ದರಿಂದ ಅದರ ಮುಖ್ಯ ಭಾಗಗಳನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ….

– ಗೌರಿ ಲಂಕೇಶ್

ಅಕ್ಟೋಬರ್ 31, 2012


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...