Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

- Advertisement -
- Advertisement -

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಎಡಪಂಥೀಯ ಲೇಬರ್ ಪಕ್ಷವು ಶನಿವಾರ (ಮೇ 3, 2025) ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ವರದಿಯಾಗಿದೆ.

ಈ ಮೂಲಕ , ಆಂಥೋನಿ ಅಲ್ಬನೀಸ್ ಅವರು 21 ವರ್ಷಗಳ ಬಳಿಕ ಮೂರು ವರ್ಷಗಳ ಅಧಿಕಾರವದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎನಿಸಿಕೊಂಡಿದ್ದಾರೆ.

“ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಫಲಿತಾಂಶ ಬಂದಾಗ ಅದು ಸ್ಪಷ್ಟವಾಗಿದೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಚುನಾವಣೆಯ ಸೋಲಿನ ಬಳಿಕ ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆದ್ದಿರುವ ಪ್ರಧಾನಿ ಅಲ್ಬನೀಸ್ ಅವರಿಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ.
ಇದು ಲೇಬರ್ ಪಕ್ಷಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ನಾವು ಅದನ್ನು ಗುರುತಿಸುತ್ತೇವೆ” ಎಂದು ಡಟ್ಟನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 150 ಸ್ಥಾನಗಳನ್ನು ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪ್ರಧಾನಿ ಅಲ್ಬನೀಸ್ ನೇತೃತ್ವದ ಆಡಳಿತಾರೂಢ ಸೆಂಟರ್-ಲೆಫ್ಟ್‌ ಲೇಬರ್ ಪಾರ್ಟಿ 70 ಸ್ಥಾನಗಳು ಮತ್ತು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ 24 ಸ್ಥಾನಗಳನ್ನು ಗೆದ್ದಿವೆ. ಅಲಿಪ್ತ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು 13 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ ಚುನಾವಣಾ ವಿಶ್ಲೇಷಕ ಆಂಥೋನಿ ಗ್ರೀನ್, ಲೇಬರ್ ಪಾರ್ಟಿ 76 ಸ್ಥಾನ, ಕನ್ಸರ್ವೇಟಿವ್ ಒಕ್ಕೂಟ 36 ಸ್ಥಾನ ಮತ್ತು ಅಲಿಪ್ತ ಪಕ್ಷಗಳು 13 ಸ್ಥಾನಗಳನ್ನು ಅಂತಿಮವಾಗಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಲೇಬರ್ ಪಾರ್ಟಿ ಬಹುಮತದ ಅಥವಾ ಅಲ್ಪಮತದ ಸರ್ಕಾರ ರಚಿಸಬಹುದು. ಕನ್ಸರ್ವೇಟಿವ್ ಅಲ್ಪಮತದ ಸರ್ಕಾರ ರಚಿಸುವ ಯಾವುದೇ ಭರವಸೆ ಇಲ್ಲ ಎಂದು ಗ್ರೀನ್ ಹೇಳಿದ್ದಾರೆ.

ಇಂಧನ ನೀತಿ ಮತ್ತು ಹಣದುಬ್ಬರ ಚುನಾವಣಾ ಪ್ರಚಾರದ ಪ್ರಮುಖ ವಿಷಯಗಳಾಗಿತ್ತು. ದೇಶವು ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

ವಿರೋಧ ಪಕ್ಷದ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ, ಹಣದುಬ್ಬರ ಮತ್ತು ಬಡ್ಡಿದರಗಳ ಹೆಚ್ಚಳಕ್ಕೆ ಸರ್ಕಾರಿ ದುಂದುವೆಚ್ಚ ಕಾರಣ ಎಂದು ಲೇಬರ್ ಪಾರ್ಟಿ ಸರ್ಕಾರವನ್ನು ದೂಷಿಸಿತ್ತು. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡಲು ಅಧಿಕಾರಕ್ಕೆ ಬಂದರೆ ಐದು ಸಾರ್ವಜನಿಕ ಸೇವಾ ಉದ್ಯೋಗಗಳಲ್ಲಿ ಒಂದಕ್ಕಿಂತ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಪ್ರತಿಜ್ಞೆ ಮಾಡಿತ್ತು.

2050ರ ವೇಳೆಗೆ ದೇಶವು ಶೂನ್ಯ ಹಸಿರುಮನೆ ಅನಿಲ ಹೊರಸೂಸುವಿಕೆಯ ಗುರಿಯನ್ನು ತಲುಪಬೇಕು ಎಂದು ಎರಡೂ ಕಡೆಯವರು ಹೇಳುತ್ತಿದ್ದರು. ಸೌರ ಮತ್ತು ಪವನ ಟರ್ಬೈನ್‌ಗಳಂತಹ ನವೀಕರಿಸಬಹುದಾದ ಇಂಧನ ಮೂಲಗಳ ಬದಲಿಗೆ, ಹೆಚ್ಚಿನ ಪರಮಾಣು ಶಕ್ತಿಯನ್ನು ಅವಲಂಬಿಸುವುದರಿಂದ ಕಡಿಮೆ ವೆಚ್ಚದ ವಿದ್ಯುತ್ ದೊರೆಯುತ್ತದೆ ಎಂದು ಡಟ್ಟನ್ ವಾದಿಸಿದ್ದರು.

ಲೇಬರ್ ಪಾರ್ಟಿ ವಿರೋಧ ಪಕ್ಷದ ನಾಯಕನನ್ನು “ಡಾಗ್-ವೈ ಡಟ್ಟನ್” ಎಂದು ಕರೆದಿತ್ತು. ಅವರ ಪಕ್ಷವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಅನುಕರಿಸುತ್ತಿದೆ ಎಂದು ಆರೋಪಿಸಿತ್ತು. ಡಟ್ಟನ್ ಅವರ ವಿರೋಧ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದರೆ ಪರಮಾಣು ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಸರ್ಕಾರಿ ಸೇವೆಗಳನ್ನು ಕಡಿತಗೊಳಿಸಲಿದೆ ಎಂದು ಲೇಬರ್ ಪಕ್ಷ ಹೇಳಿತ್ತು.

“ಆಸ್ಟ್ರೇಲಿಯನ್ನರನ್ನು ಪರಸ್ಪರ ಎತ್ತಿಕಟ್ಟುವ ಮೂಲಕ ಅಮೆರಿಕನ್ ಶೈಲಿಯ ರಾಜಕೀಯ ಮಾಡುವ ಪ್ರಯತ್ನವನ್ನು ಡಟ್ಟನ್ ಮಾಡುತ್ತಿದ್ದಾರೆ. ಇದು ಆಸ್ಟ್ರೇಲಿಯಾಕ್ಕೆ ಹೇಳಿದ್ದಲ್ಲ ಎಂದು” ಎಂದು ಅಲ್ಬನೀಸ್ ಚುನಾವಣೆ ಪ್ರಚಾರದ ವೇಳೆ ಕಿಡಿಕಾರಿದ್ದರು.

ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಹೊಸ ವಾಯುದಾಳಿಗೆ 32 ಪ್ಯಾಲೆಸ್ತೀನಿಯನ್ನರು ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...