Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

- Advertisement -
- Advertisement -

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಎಡಪಂಥೀಯ ಲೇಬರ್ ಪಕ್ಷವು ಶನಿವಾರ (ಮೇ 3, 2025) ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ವರದಿಯಾಗಿದೆ.

ಈ ಮೂಲಕ , ಆಂಥೋನಿ ಅಲ್ಬನೀಸ್ ಅವರು 21 ವರ್ಷಗಳ ಬಳಿಕ ಮೂರು ವರ್ಷಗಳ ಅಧಿಕಾರವದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎನಿಸಿಕೊಂಡಿದ್ದಾರೆ.

“ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಫಲಿತಾಂಶ ಬಂದಾಗ ಅದು ಸ್ಪಷ್ಟವಾಗಿದೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಚುನಾವಣೆಯ ಸೋಲಿನ ಬಳಿಕ ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆದ್ದಿರುವ ಪ್ರಧಾನಿ ಅಲ್ಬನೀಸ್ ಅವರಿಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ.
ಇದು ಲೇಬರ್ ಪಕ್ಷಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ನಾವು ಅದನ್ನು ಗುರುತಿಸುತ್ತೇವೆ” ಎಂದು ಡಟ್ಟನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 150 ಸ್ಥಾನಗಳನ್ನು ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪ್ರಧಾನಿ ಅಲ್ಬನೀಸ್ ನೇತೃತ್ವದ ಆಡಳಿತಾರೂಢ ಸೆಂಟರ್-ಲೆಫ್ಟ್‌ ಲೇಬರ್ ಪಾರ್ಟಿ 70 ಸ್ಥಾನಗಳು ಮತ್ತು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ 24 ಸ್ಥಾನಗಳನ್ನು ಗೆದ್ದಿವೆ. ಅಲಿಪ್ತ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು 13 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ ಚುನಾವಣಾ ವಿಶ್ಲೇಷಕ ಆಂಥೋನಿ ಗ್ರೀನ್, ಲೇಬರ್ ಪಾರ್ಟಿ 76 ಸ್ಥಾನ, ಕನ್ಸರ್ವೇಟಿವ್ ಒಕ್ಕೂಟ 36 ಸ್ಥಾನ ಮತ್ತು ಅಲಿಪ್ತ ಪಕ್ಷಗಳು 13 ಸ್ಥಾನಗಳನ್ನು ಅಂತಿಮವಾಗಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಲೇಬರ್ ಪಾರ್ಟಿ ಬಹುಮತದ ಅಥವಾ ಅಲ್ಪಮತದ ಸರ್ಕಾರ ರಚಿಸಬಹುದು. ಕನ್ಸರ್ವೇಟಿವ್ ಅಲ್ಪಮತದ ಸರ್ಕಾರ ರಚಿಸುವ ಯಾವುದೇ ಭರವಸೆ ಇಲ್ಲ ಎಂದು ಗ್ರೀನ್ ಹೇಳಿದ್ದಾರೆ.

ಇಂಧನ ನೀತಿ ಮತ್ತು ಹಣದುಬ್ಬರ ಚುನಾವಣಾ ಪ್ರಚಾರದ ಪ್ರಮುಖ ವಿಷಯಗಳಾಗಿತ್ತು. ದೇಶವು ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

ವಿರೋಧ ಪಕ್ಷದ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ, ಹಣದುಬ್ಬರ ಮತ್ತು ಬಡ್ಡಿದರಗಳ ಹೆಚ್ಚಳಕ್ಕೆ ಸರ್ಕಾರಿ ದುಂದುವೆಚ್ಚ ಕಾರಣ ಎಂದು ಲೇಬರ್ ಪಾರ್ಟಿ ಸರ್ಕಾರವನ್ನು ದೂಷಿಸಿತ್ತು. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡಲು ಅಧಿಕಾರಕ್ಕೆ ಬಂದರೆ ಐದು ಸಾರ್ವಜನಿಕ ಸೇವಾ ಉದ್ಯೋಗಗಳಲ್ಲಿ ಒಂದಕ್ಕಿಂತ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಪ್ರತಿಜ್ಞೆ ಮಾಡಿತ್ತು.

2050ರ ವೇಳೆಗೆ ದೇಶವು ಶೂನ್ಯ ಹಸಿರುಮನೆ ಅನಿಲ ಹೊರಸೂಸುವಿಕೆಯ ಗುರಿಯನ್ನು ತಲುಪಬೇಕು ಎಂದು ಎರಡೂ ಕಡೆಯವರು ಹೇಳುತ್ತಿದ್ದರು. ಸೌರ ಮತ್ತು ಪವನ ಟರ್ಬೈನ್‌ಗಳಂತಹ ನವೀಕರಿಸಬಹುದಾದ ಇಂಧನ ಮೂಲಗಳ ಬದಲಿಗೆ, ಹೆಚ್ಚಿನ ಪರಮಾಣು ಶಕ್ತಿಯನ್ನು ಅವಲಂಬಿಸುವುದರಿಂದ ಕಡಿಮೆ ವೆಚ್ಚದ ವಿದ್ಯುತ್ ದೊರೆಯುತ್ತದೆ ಎಂದು ಡಟ್ಟನ್ ವಾದಿಸಿದ್ದರು.

ಲೇಬರ್ ಪಾರ್ಟಿ ವಿರೋಧ ಪಕ್ಷದ ನಾಯಕನನ್ನು “ಡಾಗ್-ವೈ ಡಟ್ಟನ್” ಎಂದು ಕರೆದಿತ್ತು. ಅವರ ಪಕ್ಷವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಅನುಕರಿಸುತ್ತಿದೆ ಎಂದು ಆರೋಪಿಸಿತ್ತು. ಡಟ್ಟನ್ ಅವರ ವಿರೋಧ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದರೆ ಪರಮಾಣು ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಸರ್ಕಾರಿ ಸೇವೆಗಳನ್ನು ಕಡಿತಗೊಳಿಸಲಿದೆ ಎಂದು ಲೇಬರ್ ಪಕ್ಷ ಹೇಳಿತ್ತು.

“ಆಸ್ಟ್ರೇಲಿಯನ್ನರನ್ನು ಪರಸ್ಪರ ಎತ್ತಿಕಟ್ಟುವ ಮೂಲಕ ಅಮೆರಿಕನ್ ಶೈಲಿಯ ರಾಜಕೀಯ ಮಾಡುವ ಪ್ರಯತ್ನವನ್ನು ಡಟ್ಟನ್ ಮಾಡುತ್ತಿದ್ದಾರೆ. ಇದು ಆಸ್ಟ್ರೇಲಿಯಾಕ್ಕೆ ಹೇಳಿದ್ದಲ್ಲ ಎಂದು” ಎಂದು ಅಲ್ಬನೀಸ್ ಚುನಾವಣೆ ಪ್ರಚಾರದ ವೇಳೆ ಕಿಡಿಕಾರಿದ್ದರು.

ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಹೊಸ ವಾಯುದಾಳಿಗೆ 32 ಪ್ಯಾಲೆಸ್ತೀನಿಯನ್ನರು ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...