Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

- Advertisement -
- Advertisement -

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಎಡಪಂಥೀಯ ಲೇಬರ್ ಪಕ್ಷವು ಶನಿವಾರ (ಮೇ 3, 2025) ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ವರದಿಯಾಗಿದೆ.

ಈ ಮೂಲಕ , ಆಂಥೋನಿ ಅಲ್ಬನೀಸ್ ಅವರು 21 ವರ್ಷಗಳ ಬಳಿಕ ಮೂರು ವರ್ಷಗಳ ಅಧಿಕಾರವದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎನಿಸಿಕೊಂಡಿದ್ದಾರೆ.

“ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಫಲಿತಾಂಶ ಬಂದಾಗ ಅದು ಸ್ಪಷ್ಟವಾಗಿದೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಚುನಾವಣೆಯ ಸೋಲಿನ ಬಳಿಕ ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆದ್ದಿರುವ ಪ್ರಧಾನಿ ಅಲ್ಬನೀಸ್ ಅವರಿಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ.
ಇದು ಲೇಬರ್ ಪಕ್ಷಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ನಾವು ಅದನ್ನು ಗುರುತಿಸುತ್ತೇವೆ” ಎಂದು ಡಟ್ಟನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 150 ಸ್ಥಾನಗಳನ್ನು ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪ್ರಧಾನಿ ಅಲ್ಬನೀಸ್ ನೇತೃತ್ವದ ಆಡಳಿತಾರೂಢ ಸೆಂಟರ್-ಲೆಫ್ಟ್‌ ಲೇಬರ್ ಪಾರ್ಟಿ 70 ಸ್ಥಾನಗಳು ಮತ್ತು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ 24 ಸ್ಥಾನಗಳನ್ನು ಗೆದ್ದಿವೆ. ಅಲಿಪ್ತ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು 13 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ ಚುನಾವಣಾ ವಿಶ್ಲೇಷಕ ಆಂಥೋನಿ ಗ್ರೀನ್, ಲೇಬರ್ ಪಾರ್ಟಿ 76 ಸ್ಥಾನ, ಕನ್ಸರ್ವೇಟಿವ್ ಒಕ್ಕೂಟ 36 ಸ್ಥಾನ ಮತ್ತು ಅಲಿಪ್ತ ಪಕ್ಷಗಳು 13 ಸ್ಥಾನಗಳನ್ನು ಅಂತಿಮವಾಗಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಲೇಬರ್ ಪಾರ್ಟಿ ಬಹುಮತದ ಅಥವಾ ಅಲ್ಪಮತದ ಸರ್ಕಾರ ರಚಿಸಬಹುದು. ಕನ್ಸರ್ವೇಟಿವ್ ಅಲ್ಪಮತದ ಸರ್ಕಾರ ರಚಿಸುವ ಯಾವುದೇ ಭರವಸೆ ಇಲ್ಲ ಎಂದು ಗ್ರೀನ್ ಹೇಳಿದ್ದಾರೆ.

ಇಂಧನ ನೀತಿ ಮತ್ತು ಹಣದುಬ್ಬರ ಚುನಾವಣಾ ಪ್ರಚಾರದ ಪ್ರಮುಖ ವಿಷಯಗಳಾಗಿತ್ತು. ದೇಶವು ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

ವಿರೋಧ ಪಕ್ಷದ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ, ಹಣದುಬ್ಬರ ಮತ್ತು ಬಡ್ಡಿದರಗಳ ಹೆಚ್ಚಳಕ್ಕೆ ಸರ್ಕಾರಿ ದುಂದುವೆಚ್ಚ ಕಾರಣ ಎಂದು ಲೇಬರ್ ಪಾರ್ಟಿ ಸರ್ಕಾರವನ್ನು ದೂಷಿಸಿತ್ತು. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡಲು ಅಧಿಕಾರಕ್ಕೆ ಬಂದರೆ ಐದು ಸಾರ್ವಜನಿಕ ಸೇವಾ ಉದ್ಯೋಗಗಳಲ್ಲಿ ಒಂದಕ್ಕಿಂತ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಪ್ರತಿಜ್ಞೆ ಮಾಡಿತ್ತು.

2050ರ ವೇಳೆಗೆ ದೇಶವು ಶೂನ್ಯ ಹಸಿರುಮನೆ ಅನಿಲ ಹೊರಸೂಸುವಿಕೆಯ ಗುರಿಯನ್ನು ತಲುಪಬೇಕು ಎಂದು ಎರಡೂ ಕಡೆಯವರು ಹೇಳುತ್ತಿದ್ದರು. ಸೌರ ಮತ್ತು ಪವನ ಟರ್ಬೈನ್‌ಗಳಂತಹ ನವೀಕರಿಸಬಹುದಾದ ಇಂಧನ ಮೂಲಗಳ ಬದಲಿಗೆ, ಹೆಚ್ಚಿನ ಪರಮಾಣು ಶಕ್ತಿಯನ್ನು ಅವಲಂಬಿಸುವುದರಿಂದ ಕಡಿಮೆ ವೆಚ್ಚದ ವಿದ್ಯುತ್ ದೊರೆಯುತ್ತದೆ ಎಂದು ಡಟ್ಟನ್ ವಾದಿಸಿದ್ದರು.

ಲೇಬರ್ ಪಾರ್ಟಿ ವಿರೋಧ ಪಕ್ಷದ ನಾಯಕನನ್ನು “ಡಾಗ್-ವೈ ಡಟ್ಟನ್” ಎಂದು ಕರೆದಿತ್ತು. ಅವರ ಪಕ್ಷವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಅನುಕರಿಸುತ್ತಿದೆ ಎಂದು ಆರೋಪಿಸಿತ್ತು. ಡಟ್ಟನ್ ಅವರ ವಿರೋಧ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದರೆ ಪರಮಾಣು ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಸರ್ಕಾರಿ ಸೇವೆಗಳನ್ನು ಕಡಿತಗೊಳಿಸಲಿದೆ ಎಂದು ಲೇಬರ್ ಪಕ್ಷ ಹೇಳಿತ್ತು.

“ಆಸ್ಟ್ರೇಲಿಯನ್ನರನ್ನು ಪರಸ್ಪರ ಎತ್ತಿಕಟ್ಟುವ ಮೂಲಕ ಅಮೆರಿಕನ್ ಶೈಲಿಯ ರಾಜಕೀಯ ಮಾಡುವ ಪ್ರಯತ್ನವನ್ನು ಡಟ್ಟನ್ ಮಾಡುತ್ತಿದ್ದಾರೆ. ಇದು ಆಸ್ಟ್ರೇಲಿಯಾಕ್ಕೆ ಹೇಳಿದ್ದಲ್ಲ ಎಂದು” ಎಂದು ಅಲ್ಬನೀಸ್ ಚುನಾವಣೆ ಪ್ರಚಾರದ ವೇಳೆ ಕಿಡಿಕಾರಿದ್ದರು.

ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಹೊಸ ವಾಯುದಾಳಿಗೆ 32 ಪ್ಯಾಲೆಸ್ತೀನಿಯನ್ನರು ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...