Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

- Advertisement -
- Advertisement -

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಎಡಪಂಥೀಯ ಲೇಬರ್ ಪಕ್ಷವು ಶನಿವಾರ (ಮೇ 3, 2025) ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ವರದಿಯಾಗಿದೆ.

ಈ ಮೂಲಕ , ಆಂಥೋನಿ ಅಲ್ಬನೀಸ್ ಅವರು 21 ವರ್ಷಗಳ ಬಳಿಕ ಮೂರು ವರ್ಷಗಳ ಅಧಿಕಾರವದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎನಿಸಿಕೊಂಡಿದ್ದಾರೆ.

“ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಫಲಿತಾಂಶ ಬಂದಾಗ ಅದು ಸ್ಪಷ್ಟವಾಗಿದೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಚುನಾವಣೆಯ ಸೋಲಿನ ಬಳಿಕ ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆದ್ದಿರುವ ಪ್ರಧಾನಿ ಅಲ್ಬನೀಸ್ ಅವರಿಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ.
ಇದು ಲೇಬರ್ ಪಕ್ಷಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ನಾವು ಅದನ್ನು ಗುರುತಿಸುತ್ತೇವೆ” ಎಂದು ಡಟ್ಟನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 150 ಸ್ಥಾನಗಳನ್ನು ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪ್ರಧಾನಿ ಅಲ್ಬನೀಸ್ ನೇತೃತ್ವದ ಆಡಳಿತಾರೂಢ ಸೆಂಟರ್-ಲೆಫ್ಟ್‌ ಲೇಬರ್ ಪಾರ್ಟಿ 70 ಸ್ಥಾನಗಳು ಮತ್ತು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ 24 ಸ್ಥಾನಗಳನ್ನು ಗೆದ್ದಿವೆ. ಅಲಿಪ್ತ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು 13 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ ಚುನಾವಣಾ ವಿಶ್ಲೇಷಕ ಆಂಥೋನಿ ಗ್ರೀನ್, ಲೇಬರ್ ಪಾರ್ಟಿ 76 ಸ್ಥಾನ, ಕನ್ಸರ್ವೇಟಿವ್ ಒಕ್ಕೂಟ 36 ಸ್ಥಾನ ಮತ್ತು ಅಲಿಪ್ತ ಪಕ್ಷಗಳು 13 ಸ್ಥಾನಗಳನ್ನು ಅಂತಿಮವಾಗಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಲೇಬರ್ ಪಾರ್ಟಿ ಬಹುಮತದ ಅಥವಾ ಅಲ್ಪಮತದ ಸರ್ಕಾರ ರಚಿಸಬಹುದು. ಕನ್ಸರ್ವೇಟಿವ್ ಅಲ್ಪಮತದ ಸರ್ಕಾರ ರಚಿಸುವ ಯಾವುದೇ ಭರವಸೆ ಇಲ್ಲ ಎಂದು ಗ್ರೀನ್ ಹೇಳಿದ್ದಾರೆ.

ಇಂಧನ ನೀತಿ ಮತ್ತು ಹಣದುಬ್ಬರ ಚುನಾವಣಾ ಪ್ರಚಾರದ ಪ್ರಮುಖ ವಿಷಯಗಳಾಗಿತ್ತು. ದೇಶವು ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

ವಿರೋಧ ಪಕ್ಷದ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ, ಹಣದುಬ್ಬರ ಮತ್ತು ಬಡ್ಡಿದರಗಳ ಹೆಚ್ಚಳಕ್ಕೆ ಸರ್ಕಾರಿ ದುಂದುವೆಚ್ಚ ಕಾರಣ ಎಂದು ಲೇಬರ್ ಪಾರ್ಟಿ ಸರ್ಕಾರವನ್ನು ದೂಷಿಸಿತ್ತು. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡಲು ಅಧಿಕಾರಕ್ಕೆ ಬಂದರೆ ಐದು ಸಾರ್ವಜನಿಕ ಸೇವಾ ಉದ್ಯೋಗಗಳಲ್ಲಿ ಒಂದಕ್ಕಿಂತ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಪ್ರತಿಜ್ಞೆ ಮಾಡಿತ್ತು.

2050ರ ವೇಳೆಗೆ ದೇಶವು ಶೂನ್ಯ ಹಸಿರುಮನೆ ಅನಿಲ ಹೊರಸೂಸುವಿಕೆಯ ಗುರಿಯನ್ನು ತಲುಪಬೇಕು ಎಂದು ಎರಡೂ ಕಡೆಯವರು ಹೇಳುತ್ತಿದ್ದರು. ಸೌರ ಮತ್ತು ಪವನ ಟರ್ಬೈನ್‌ಗಳಂತಹ ನವೀಕರಿಸಬಹುದಾದ ಇಂಧನ ಮೂಲಗಳ ಬದಲಿಗೆ, ಹೆಚ್ಚಿನ ಪರಮಾಣು ಶಕ್ತಿಯನ್ನು ಅವಲಂಬಿಸುವುದರಿಂದ ಕಡಿಮೆ ವೆಚ್ಚದ ವಿದ್ಯುತ್ ದೊರೆಯುತ್ತದೆ ಎಂದು ಡಟ್ಟನ್ ವಾದಿಸಿದ್ದರು.

ಲೇಬರ್ ಪಾರ್ಟಿ ವಿರೋಧ ಪಕ್ಷದ ನಾಯಕನನ್ನು “ಡಾಗ್-ವೈ ಡಟ್ಟನ್” ಎಂದು ಕರೆದಿತ್ತು. ಅವರ ಪಕ್ಷವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಅನುಕರಿಸುತ್ತಿದೆ ಎಂದು ಆರೋಪಿಸಿತ್ತು. ಡಟ್ಟನ್ ಅವರ ವಿರೋಧ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದರೆ ಪರಮಾಣು ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಸರ್ಕಾರಿ ಸೇವೆಗಳನ್ನು ಕಡಿತಗೊಳಿಸಲಿದೆ ಎಂದು ಲೇಬರ್ ಪಕ್ಷ ಹೇಳಿತ್ತು.

“ಆಸ್ಟ್ರೇಲಿಯನ್ನರನ್ನು ಪರಸ್ಪರ ಎತ್ತಿಕಟ್ಟುವ ಮೂಲಕ ಅಮೆರಿಕನ್ ಶೈಲಿಯ ರಾಜಕೀಯ ಮಾಡುವ ಪ್ರಯತ್ನವನ್ನು ಡಟ್ಟನ್ ಮಾಡುತ್ತಿದ್ದಾರೆ. ಇದು ಆಸ್ಟ್ರೇಲಿಯಾಕ್ಕೆ ಹೇಳಿದ್ದಲ್ಲ ಎಂದು” ಎಂದು ಅಲ್ಬನೀಸ್ ಚುನಾವಣೆ ಪ್ರಚಾರದ ವೇಳೆ ಕಿಡಿಕಾರಿದ್ದರು.

ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಹೊಸ ವಾಯುದಾಳಿಗೆ 32 ಪ್ಯಾಲೆಸ್ತೀನಿಯನ್ನರು ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...