Homeಕ್ರೀಡೆಕ್ರಿಕೆಟ್ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

- Advertisement -
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಕೇವಲ 47  ರನ್‌ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. ಟ್ರಾವೆಸ್‌ ಹೆಡ್‌ 120 ಎಸೆತಗಳಲ್ಲಿ 15 ಬೌಂಡರಿ 4 ಸಿಕ್ಸರ್‌ ಸಹಿತ 137 ರನ್‌ ಗಳಿಸಿ ವಿನ್ನಿಂಗ್‌ ಶಾಟ್‌ ಹೊಡೆಯುವ ಯತ್ನದಲ್ಲಿ ಮುಹಮ್ಮದ್‌ ಸಿರಾಜ್‌ ಬೌಲಿಂಗ್‌ ನಲ್ಲಿ ಶುಭಮನ್‌ ಗಿಲ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ 2 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾಗಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಜಯದ ರನ್ ಹೊಡೆಯುತ್ತಿದ್ದಂತೆ ಭಾರತದ ಆಟಗಾರರ ಕಣ್ಣಾಲಿಗಳು ತುಂಬಿದ್ದವು. ರೋಹಿತ್ ಶರ್ಮಾ ತಲೆ ತಗ್ಗಿಸಿಕೊಂಡು ಪೆವಿಲಿಯನ್‌ನತ್ತ ಹೊರಟರು. ಸಿರಾಜ್ ಅವರನ್ನು ಬೂಮ್ರಾ ಸಮಾಧಾನ ಪಡಿಸುತ್ತಾ ತಮ್ಮ ಕಣ್ಣುಗಳನ್ನೂ ಒರೆಸಿಕೊಂಡರು. ವಿರಾಟ್ ಮುಖದಲ್ಲಿಯೂ ಜೀವಕಳೆ ಬತ್ತಿಹೋಗಿತ್ತು. ಕೆ.ಎಲ್. ರಾಹುಲ್ ಕುಸಿದು ಕುಳಿತಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಕ್ ಮುಂದೆ ಬಂದು ನಿಂತ ರೋಹಿತ್, ’ಇವತ್ತಿನ ದಿನದಲ್ಲಿ ನಾವು ನಿರೀಕ್ಷಿಸಿದಷ್ಟು ಚೆನ್ನಾಗಿ ಆಡಲಿಲ್ಲ. ಇನ್ನೂ 20–30 ರನ್‌ಗಳನ್ನು ಹೆಚ್ಚು ಗಳಿಸಿದ್ದರೆ ಚೆನ್ನಾಗಿತ್ತು. ಬ್ಯಾಟಿಂಗ್ ಚೆನ್ನಾಗಿರಲಿಲ್ಲ ಎಂದು ಹೇಳಿದ್ದಾರೆ. 280 ರನ್‌ಗಳ ಗುರಿಯನ್ನು ಒಡ್ಡುವುದು ನಮ್ಮ ಗುರಿಯಾಗಿತ್ತು. ವಿರಾಟ್ ಮತ್ತು ರಾಹುಲ್ ಬ್ಯಾಟಿಂಗ್ ಮಾಡುವಾಗ ಇದು ಸಾಧ್ಯ ಎನಿಸಿತ್ತು. ನಾಲ್ಕನೇ ವಿಕೆಟ್‌ಗೆ ಅವರು ಉತ್ತಮ ಜೊತೆಯಾಟ ಹೆಣೆದಿದ್ದರು. ಆದರೆ ನಂತರ ವಿಕೆಟ್‌ಗಳು ಉರುಳತೊಡಗಿದಾಗ ಹಿನ್ನಡೆಯಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...