Homeಕ್ರೀಡೆಕ್ರಿಕೆಟ್ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

- Advertisement -
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಕೇವಲ 47  ರನ್‌ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. ಟ್ರಾವೆಸ್‌ ಹೆಡ್‌ 120 ಎಸೆತಗಳಲ್ಲಿ 15 ಬೌಂಡರಿ 4 ಸಿಕ್ಸರ್‌ ಸಹಿತ 137 ರನ್‌ ಗಳಿಸಿ ವಿನ್ನಿಂಗ್‌ ಶಾಟ್‌ ಹೊಡೆಯುವ ಯತ್ನದಲ್ಲಿ ಮುಹಮ್ಮದ್‌ ಸಿರಾಜ್‌ ಬೌಲಿಂಗ್‌ ನಲ್ಲಿ ಶುಭಮನ್‌ ಗಿಲ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ 2 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾಗಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಜಯದ ರನ್ ಹೊಡೆಯುತ್ತಿದ್ದಂತೆ ಭಾರತದ ಆಟಗಾರರ ಕಣ್ಣಾಲಿಗಳು ತುಂಬಿದ್ದವು. ರೋಹಿತ್ ಶರ್ಮಾ ತಲೆ ತಗ್ಗಿಸಿಕೊಂಡು ಪೆವಿಲಿಯನ್‌ನತ್ತ ಹೊರಟರು. ಸಿರಾಜ್ ಅವರನ್ನು ಬೂಮ್ರಾ ಸಮಾಧಾನ ಪಡಿಸುತ್ತಾ ತಮ್ಮ ಕಣ್ಣುಗಳನ್ನೂ ಒರೆಸಿಕೊಂಡರು. ವಿರಾಟ್ ಮುಖದಲ್ಲಿಯೂ ಜೀವಕಳೆ ಬತ್ತಿಹೋಗಿತ್ತು. ಕೆ.ಎಲ್. ರಾಹುಲ್ ಕುಸಿದು ಕುಳಿತಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಕ್ ಮುಂದೆ ಬಂದು ನಿಂತ ರೋಹಿತ್, ’ಇವತ್ತಿನ ದಿನದಲ್ಲಿ ನಾವು ನಿರೀಕ್ಷಿಸಿದಷ್ಟು ಚೆನ್ನಾಗಿ ಆಡಲಿಲ್ಲ. ಇನ್ನೂ 20–30 ರನ್‌ಗಳನ್ನು ಹೆಚ್ಚು ಗಳಿಸಿದ್ದರೆ ಚೆನ್ನಾಗಿತ್ತು. ಬ್ಯಾಟಿಂಗ್ ಚೆನ್ನಾಗಿರಲಿಲ್ಲ ಎಂದು ಹೇಳಿದ್ದಾರೆ. 280 ರನ್‌ಗಳ ಗುರಿಯನ್ನು ಒಡ್ಡುವುದು ನಮ್ಮ ಗುರಿಯಾಗಿತ್ತು. ವಿರಾಟ್ ಮತ್ತು ರಾಹುಲ್ ಬ್ಯಾಟಿಂಗ್ ಮಾಡುವಾಗ ಇದು ಸಾಧ್ಯ ಎನಿಸಿತ್ತು. ನಾಲ್ಕನೇ ವಿಕೆಟ್‌ಗೆ ಅವರು ಉತ್ತಮ ಜೊತೆಯಾಟ ಹೆಣೆದಿದ್ದರು. ಆದರೆ ನಂತರ ವಿಕೆಟ್‌ಗಳು ಉರುಳತೊಡಗಿದಾಗ ಹಿನ್ನಡೆಯಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...