Homeಕ್ರೀಡೆಕ್ರಿಕೆಟ್ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

- Advertisement -
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಕೇವಲ 47  ರನ್‌ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. ಟ್ರಾವೆಸ್‌ ಹೆಡ್‌ 120 ಎಸೆತಗಳಲ್ಲಿ 15 ಬೌಂಡರಿ 4 ಸಿಕ್ಸರ್‌ ಸಹಿತ 137 ರನ್‌ ಗಳಿಸಿ ವಿನ್ನಿಂಗ್‌ ಶಾಟ್‌ ಹೊಡೆಯುವ ಯತ್ನದಲ್ಲಿ ಮುಹಮ್ಮದ್‌ ಸಿರಾಜ್‌ ಬೌಲಿಂಗ್‌ ನಲ್ಲಿ ಶುಭಮನ್‌ ಗಿಲ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ 2 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾಗಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಜಯದ ರನ್ ಹೊಡೆಯುತ್ತಿದ್ದಂತೆ ಭಾರತದ ಆಟಗಾರರ ಕಣ್ಣಾಲಿಗಳು ತುಂಬಿದ್ದವು. ರೋಹಿತ್ ಶರ್ಮಾ ತಲೆ ತಗ್ಗಿಸಿಕೊಂಡು ಪೆವಿಲಿಯನ್‌ನತ್ತ ಹೊರಟರು. ಸಿರಾಜ್ ಅವರನ್ನು ಬೂಮ್ರಾ ಸಮಾಧಾನ ಪಡಿಸುತ್ತಾ ತಮ್ಮ ಕಣ್ಣುಗಳನ್ನೂ ಒರೆಸಿಕೊಂಡರು. ವಿರಾಟ್ ಮುಖದಲ್ಲಿಯೂ ಜೀವಕಳೆ ಬತ್ತಿಹೋಗಿತ್ತು. ಕೆ.ಎಲ್. ರಾಹುಲ್ ಕುಸಿದು ಕುಳಿತಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಕ್ ಮುಂದೆ ಬಂದು ನಿಂತ ರೋಹಿತ್, ’ಇವತ್ತಿನ ದಿನದಲ್ಲಿ ನಾವು ನಿರೀಕ್ಷಿಸಿದಷ್ಟು ಚೆನ್ನಾಗಿ ಆಡಲಿಲ್ಲ. ಇನ್ನೂ 20–30 ರನ್‌ಗಳನ್ನು ಹೆಚ್ಚು ಗಳಿಸಿದ್ದರೆ ಚೆನ್ನಾಗಿತ್ತು. ಬ್ಯಾಟಿಂಗ್ ಚೆನ್ನಾಗಿರಲಿಲ್ಲ ಎಂದು ಹೇಳಿದ್ದಾರೆ. 280 ರನ್‌ಗಳ ಗುರಿಯನ್ನು ಒಡ್ಡುವುದು ನಮ್ಮ ಗುರಿಯಾಗಿತ್ತು. ವಿರಾಟ್ ಮತ್ತು ರಾಹುಲ್ ಬ್ಯಾಟಿಂಗ್ ಮಾಡುವಾಗ ಇದು ಸಾಧ್ಯ ಎನಿಸಿತ್ತು. ನಾಲ್ಕನೇ ವಿಕೆಟ್‌ಗೆ ಅವರು ಉತ್ತಮ ಜೊತೆಯಾಟ ಹೆಣೆದಿದ್ದರು. ಆದರೆ ನಂತರ ವಿಕೆಟ್‌ಗಳು ಉರುಳತೊಡಗಿದಾಗ ಹಿನ್ನಡೆಯಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...