Homeಕ್ರೀಡೆಕ್ರಿಕೆಟ್ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

- Advertisement -
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಕೇವಲ 47  ರನ್‌ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. ಟ್ರಾವೆಸ್‌ ಹೆಡ್‌ 120 ಎಸೆತಗಳಲ್ಲಿ 15 ಬೌಂಡರಿ 4 ಸಿಕ್ಸರ್‌ ಸಹಿತ 137 ರನ್‌ ಗಳಿಸಿ ವಿನ್ನಿಂಗ್‌ ಶಾಟ್‌ ಹೊಡೆಯುವ ಯತ್ನದಲ್ಲಿ ಮುಹಮ್ಮದ್‌ ಸಿರಾಜ್‌ ಬೌಲಿಂಗ್‌ ನಲ್ಲಿ ಶುಭಮನ್‌ ಗಿಲ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ 2 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾಗಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಜಯದ ರನ್ ಹೊಡೆಯುತ್ತಿದ್ದಂತೆ ಭಾರತದ ಆಟಗಾರರ ಕಣ್ಣಾಲಿಗಳು ತುಂಬಿದ್ದವು. ರೋಹಿತ್ ಶರ್ಮಾ ತಲೆ ತಗ್ಗಿಸಿಕೊಂಡು ಪೆವಿಲಿಯನ್‌ನತ್ತ ಹೊರಟರು. ಸಿರಾಜ್ ಅವರನ್ನು ಬೂಮ್ರಾ ಸಮಾಧಾನ ಪಡಿಸುತ್ತಾ ತಮ್ಮ ಕಣ್ಣುಗಳನ್ನೂ ಒರೆಸಿಕೊಂಡರು. ವಿರಾಟ್ ಮುಖದಲ್ಲಿಯೂ ಜೀವಕಳೆ ಬತ್ತಿಹೋಗಿತ್ತು. ಕೆ.ಎಲ್. ರಾಹುಲ್ ಕುಸಿದು ಕುಳಿತಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಕ್ ಮುಂದೆ ಬಂದು ನಿಂತ ರೋಹಿತ್, ’ಇವತ್ತಿನ ದಿನದಲ್ಲಿ ನಾವು ನಿರೀಕ್ಷಿಸಿದಷ್ಟು ಚೆನ್ನಾಗಿ ಆಡಲಿಲ್ಲ. ಇನ್ನೂ 20–30 ರನ್‌ಗಳನ್ನು ಹೆಚ್ಚು ಗಳಿಸಿದ್ದರೆ ಚೆನ್ನಾಗಿತ್ತು. ಬ್ಯಾಟಿಂಗ್ ಚೆನ್ನಾಗಿರಲಿಲ್ಲ ಎಂದು ಹೇಳಿದ್ದಾರೆ. 280 ರನ್‌ಗಳ ಗುರಿಯನ್ನು ಒಡ್ಡುವುದು ನಮ್ಮ ಗುರಿಯಾಗಿತ್ತು. ವಿರಾಟ್ ಮತ್ತು ರಾಹುಲ್ ಬ್ಯಾಟಿಂಗ್ ಮಾಡುವಾಗ ಇದು ಸಾಧ್ಯ ಎನಿಸಿತ್ತು. ನಾಲ್ಕನೇ ವಿಕೆಟ್‌ಗೆ ಅವರು ಉತ್ತಮ ಜೊತೆಯಾಟ ಹೆಣೆದಿದ್ದರು. ಆದರೆ ನಂತರ ವಿಕೆಟ್‌ಗಳು ಉರುಳತೊಡಗಿದಾಗ ಹಿನ್ನಡೆಯಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...