Homeಕ್ರೀಡೆಕ್ರಿಕೆಟ್ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

- Advertisement -
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಕೇವಲ 47  ರನ್‌ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. ಟ್ರಾವೆಸ್‌ ಹೆಡ್‌ 120 ಎಸೆತಗಳಲ್ಲಿ 15 ಬೌಂಡರಿ 4 ಸಿಕ್ಸರ್‌ ಸಹಿತ 137 ರನ್‌ ಗಳಿಸಿ ವಿನ್ನಿಂಗ್‌ ಶಾಟ್‌ ಹೊಡೆಯುವ ಯತ್ನದಲ್ಲಿ ಮುಹಮ್ಮದ್‌ ಸಿರಾಜ್‌ ಬೌಲಿಂಗ್‌ ನಲ್ಲಿ ಶುಭಮನ್‌ ಗಿಲ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ 2 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾಗಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಜಯದ ರನ್ ಹೊಡೆಯುತ್ತಿದ್ದಂತೆ ಭಾರತದ ಆಟಗಾರರ ಕಣ್ಣಾಲಿಗಳು ತುಂಬಿದ್ದವು. ರೋಹಿತ್ ಶರ್ಮಾ ತಲೆ ತಗ್ಗಿಸಿಕೊಂಡು ಪೆವಿಲಿಯನ್‌ನತ್ತ ಹೊರಟರು. ಸಿರಾಜ್ ಅವರನ್ನು ಬೂಮ್ರಾ ಸಮಾಧಾನ ಪಡಿಸುತ್ತಾ ತಮ್ಮ ಕಣ್ಣುಗಳನ್ನೂ ಒರೆಸಿಕೊಂಡರು. ವಿರಾಟ್ ಮುಖದಲ್ಲಿಯೂ ಜೀವಕಳೆ ಬತ್ತಿಹೋಗಿತ್ತು. ಕೆ.ಎಲ್. ರಾಹುಲ್ ಕುಸಿದು ಕುಳಿತಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಕ್ ಮುಂದೆ ಬಂದು ನಿಂತ ರೋಹಿತ್, ’ಇವತ್ತಿನ ದಿನದಲ್ಲಿ ನಾವು ನಿರೀಕ್ಷಿಸಿದಷ್ಟು ಚೆನ್ನಾಗಿ ಆಡಲಿಲ್ಲ. ಇನ್ನೂ 20–30 ರನ್‌ಗಳನ್ನು ಹೆಚ್ಚು ಗಳಿಸಿದ್ದರೆ ಚೆನ್ನಾಗಿತ್ತು. ಬ್ಯಾಟಿಂಗ್ ಚೆನ್ನಾಗಿರಲಿಲ್ಲ ಎಂದು ಹೇಳಿದ್ದಾರೆ. 280 ರನ್‌ಗಳ ಗುರಿಯನ್ನು ಒಡ್ಡುವುದು ನಮ್ಮ ಗುರಿಯಾಗಿತ್ತು. ವಿರಾಟ್ ಮತ್ತು ರಾಹುಲ್ ಬ್ಯಾಟಿಂಗ್ ಮಾಡುವಾಗ ಇದು ಸಾಧ್ಯ ಎನಿಸಿತ್ತು. ನಾಲ್ಕನೇ ವಿಕೆಟ್‌ಗೆ ಅವರು ಉತ್ತಮ ಜೊತೆಯಾಟ ಹೆಣೆದಿದ್ದರು. ಆದರೆ ನಂತರ ವಿಕೆಟ್‌ಗಳು ಉರುಳತೊಡಗಿದಾಗ ಹಿನ್ನಡೆಯಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...