Homeಕರ್ನಾಟಕಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

- Advertisement -
- Advertisement -

ಡಿಸೆಂಬರ್‌ 1 ರ ಬುಧವಾರದಿಂದ ಆಟೋ ರಿಕ್ಷಾದ ಹೊಸ ದರಗಳು ಜಾರಿಗೆ ಬಂದಿವೆ. ಇದು 8 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮಾಡಲಾಗಿರುವ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆಯಾಗಿದೆ. ಇಂಧನ ದರಗಳು, ವಾಹನ ಬಿಡಿಬಾಗಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಮಾಡುವುದು ದುಡಿಯುವ ವರ್ಗಕ್ಕೆ ಅನಿವಾರ್ಯವಾಗಿದೆ. ದರ ಏರಿಕೆಯಾಗಿದ್ದು ನಿಜವಾದರೂ, ಹಲವು ಆಟೋಗಳಲ್ಲಿ ಹಳೆಯ ಮೀಟರುಗಳೇ ಚಲಾವಣೆಯಲ್ಲಿದೆ. ಕಳೆದ ನವೆಂಬರ್‌ನಲ್ಲಿ ಸರ್ಕಾರವು ದರ ಹೆಚ್ಚಳಕ್ಕೆ ಅನುಮತಿ ನೀಡಿರುವುದರಿಂದ ಮುಂದಿನ ಫೆಬ್ರವರಿ ತಿಂಗಳ ಒಳಗಡೆ ಮೀಟರ್‌ಗಳನ್ನು ಅಪ್‌ಡೇಟ್‌‌ ಮಾಡಿಕೊಳ್ಳಲು ಚಾಲಕರಿಗೆ ಸಮಯ ನೀಡಲಾಗಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಎರಡು ಕಿ.ಮೀ. ವರೆಗೆ ಕನಿಷ್ಠ ದರ 25 ರೂಪಾಯಿ ಇತ್ತು. ಈಗ ಈ ಕನಿಷ್ಠ ದರವು 30 ರೂಗೆ ಹೆಚ್ಚಾಗಿದೆ. ಜೊತೆಗೆ ನಂತರದ ಪ್ರತಿ ಕಿ.ಮೀ ಗೆ 15 ರೂ. ಆಗಿದೆ. ದರ ಹೆಚ್ಚಳದ ಬಗ್ಗೆ ಸರ್ಕಾರದಿಂದ ಅಧಿಸೂಚನೆ ಬಂದು ಕೇವಲ ಒಂದೇ ತಿಂಗಳು ಆಗಿರುವುದರಿಂದ ಮುಂದಿನ ವರ್ಷದ ಫೆಬ್ರವರಿವೆರೆಗೆ ಆಟೋದಲ್ಲಿನ ಮೀಟರ್‌ ಅಪ್‌ಡೇಟ್‌ ಮಾಡಲು ಚಾಲಕರಿಗೆ ಸಮಯವಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

ಪ್ರಸ್ತುತ ಹೆಚ್ಚಿನ ಆಟೋಗಳಲ್ಲಿ ಹಳೆಯ ಮೀಟರ್‌ ಇರುವುದರಿಂದ ಆಟೋ ಚಾಲಕರಿಗೆ ಮತ್ತು ಪ್ರಯಾಣಿಕರಿಗೆ ಗೊಂದಲಗಳಿರುವ ಕಾರಣಕ್ಕೆ ನಾನುಗೌರಿ.ಕಾಂ ಓದುಗರಿಗಾಗಿ ಕೆಲವು ಮಾದರಿಗಳನ್ನು ನೀಡಿದ್ದ ಕೆಳಗಿನಂತಿವೆ.

ಪ್ರಯಾಣದ ದೂರ (ಕಿ. ಮೀ)ನಲ್ಲಿಡಿಸೆಂಬರ್‌ 1 ರಿಂದ ಅನ್ವಯಾಗಲಿರುವ ಹೊಸ ದರ
ಮೊದಲ 2 ಕಿ.ಮೀ ವರೆಗೆ30 ರೂ.
2.2 ಕಿ.ಮೀ 33 ರೂ.
2.4 ಕಿ.ಮೀ 36 ರೂ.
2.6 ಕಿ.ಮೀ 39 ರೂ.
2.8 ಕಿ.ಮೀ 42 ರೂ.
03 ಕಿ.ಮೀ 45 ರೂ.
3.2 ಕಿ.ಮೀ48 ರೂ.
3.4 ಕಿ.ಮೀ 51 ರೂ.
3.6 ಕಿ.ಮೀ 54 ರೂ.
ಹೀಗೇ ಪ್ರತಿ 0.2 ಕಿ.ಮಿಗೆ ಮೂರು ರೂ ಹೆಚ್ಚಾಗುತ್ತಾ ಹೋಗುತ್ತದೆ. (ಅಂದರೆ ಪ್ರತಿ 0.1 ಕಿ.ಮೀ.ಗೆ 1.5 ರೂ)
ಚಿತ್ರದಲ್ಲಿರುವ ಮೀಟರ್‌ ಹಳೆಯ ದರವೇ(37) ತೋರಿಸುತ್ತಿದೆ. ಹೊಸ ದರದ ಅನ್ವಯ, 2.9 ಕಿ.ಮೀ ಗೆ 43.5 ರೂ ಅಗಲಿದೆ. (2.9×15=43.5)

ಜೊತೆಗೆ, ಹೊಸ ಪರಿಷ್ಕೃತ ದರದಂತೆ, ಕಾಯುವಿಕೆಯ ದರ ಮೊದಲ 5 ನಿಮಿಷ ಉಚಿತವಾಗಿದೆ. ನಂತರ ಪ್ರತಿ  15 ನಿಮಿಷಕ್ಕೆ 5 ರೂಪಾಯಿ ಹೆಚ್ಚುವರಿಯಾಗಿ ಪ್ರಯಾಣಿಕರು ಪಾವತಿಸಬೇಕಾಗಿದೆ. ಅಲ್ಲದೆ, ಪ್ರಯಾಣಿಕರ ಲಗೇಜು 20 ಕೆಜಿ ಒಳಗಿದ್ದರೆ ಉಚಿತವೆಂದು ಪರಿಗಣಿಸಬೇಕಾಗಿದೆ. ಪ್ರಯಾಣಿಕರ ಲಗೇಜು 20 ಕೆಜಿಗಿಂತಲೂ ಅಧಿಕವಾಗಿದ್ದರೆ, ಪ್ರತಿ 20 ಕೆಜಿ ಲಗೇಜಿಗೆ 5 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಒಳಗೆ ಸಾಮಾನ್ಯ ದರದ ಜೊತೆಗೆ ಅದರ ಅರ್ಧ ಪಟ್ಟು ದರವನ್ನು ಪ್ರಯಾಣಿಕರು ಆಟೋಗೆ ಪಾವತಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಸರ್ಕಾರಕ್ಕೆ ಬೆಲೆ ಏರಿಕೆ ಮಾಡಲು ಮನವಿ ಸಲ್ಲಿಸಿದ್ದರು. ಚಾಲಕರ ಈ ಮನವಿಯನ್ನು ಪುರಸ್ಕರಿಸಿ ದರ ಹೆಚ್ಚಳಕ್ಕೆ ಅನುಮತಿ ನೀಡಿದೆ. ಬೆಂಗಳೂರಿನಲ್ಲಿ 8 ವರ್ಷಗಳ ಬಳಿಕ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. 8 ವರ್ಷಗಳ ಹಿಂದೆ 2013 ರಲ್ಲಿ ಆಟೋರಿಕ್ಷಾ ದರವನ್ನು ಕೊನೆಯ ಬಾರಿಗೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...