Homeಕರ್ನಾಟಕಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

- Advertisement -
- Advertisement -

ಡಿಸೆಂಬರ್‌ 1 ರ ಬುಧವಾರದಿಂದ ಆಟೋ ರಿಕ್ಷಾದ ಹೊಸ ದರಗಳು ಜಾರಿಗೆ ಬಂದಿವೆ. ಇದು 8 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮಾಡಲಾಗಿರುವ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆಯಾಗಿದೆ. ಇಂಧನ ದರಗಳು, ವಾಹನ ಬಿಡಿಬಾಗಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಮಾಡುವುದು ದುಡಿಯುವ ವರ್ಗಕ್ಕೆ ಅನಿವಾರ್ಯವಾಗಿದೆ. ದರ ಏರಿಕೆಯಾಗಿದ್ದು ನಿಜವಾದರೂ, ಹಲವು ಆಟೋಗಳಲ್ಲಿ ಹಳೆಯ ಮೀಟರುಗಳೇ ಚಲಾವಣೆಯಲ್ಲಿದೆ. ಕಳೆದ ನವೆಂಬರ್‌ನಲ್ಲಿ ಸರ್ಕಾರವು ದರ ಹೆಚ್ಚಳಕ್ಕೆ ಅನುಮತಿ ನೀಡಿರುವುದರಿಂದ ಮುಂದಿನ ಫೆಬ್ರವರಿ ತಿಂಗಳ ಒಳಗಡೆ ಮೀಟರ್‌ಗಳನ್ನು ಅಪ್‌ಡೇಟ್‌‌ ಮಾಡಿಕೊಳ್ಳಲು ಚಾಲಕರಿಗೆ ಸಮಯ ನೀಡಲಾಗಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಎರಡು ಕಿ.ಮೀ. ವರೆಗೆ ಕನಿಷ್ಠ ದರ 25 ರೂಪಾಯಿ ಇತ್ತು. ಈಗ ಈ ಕನಿಷ್ಠ ದರವು 30 ರೂಗೆ ಹೆಚ್ಚಾಗಿದೆ. ಜೊತೆಗೆ ನಂತರದ ಪ್ರತಿ ಕಿ.ಮೀ ಗೆ 15 ರೂ. ಆಗಿದೆ. ದರ ಹೆಚ್ಚಳದ ಬಗ್ಗೆ ಸರ್ಕಾರದಿಂದ ಅಧಿಸೂಚನೆ ಬಂದು ಕೇವಲ ಒಂದೇ ತಿಂಗಳು ಆಗಿರುವುದರಿಂದ ಮುಂದಿನ ವರ್ಷದ ಫೆಬ್ರವರಿವೆರೆಗೆ ಆಟೋದಲ್ಲಿನ ಮೀಟರ್‌ ಅಪ್‌ಡೇಟ್‌ ಮಾಡಲು ಚಾಲಕರಿಗೆ ಸಮಯವಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

ಪ್ರಸ್ತುತ ಹೆಚ್ಚಿನ ಆಟೋಗಳಲ್ಲಿ ಹಳೆಯ ಮೀಟರ್‌ ಇರುವುದರಿಂದ ಆಟೋ ಚಾಲಕರಿಗೆ ಮತ್ತು ಪ್ರಯಾಣಿಕರಿಗೆ ಗೊಂದಲಗಳಿರುವ ಕಾರಣಕ್ಕೆ ನಾನುಗೌರಿ.ಕಾಂ ಓದುಗರಿಗಾಗಿ ಕೆಲವು ಮಾದರಿಗಳನ್ನು ನೀಡಿದ್ದ ಕೆಳಗಿನಂತಿವೆ.

ಪ್ರಯಾಣದ ದೂರ (ಕಿ. ಮೀ)ನಲ್ಲಿಡಿಸೆಂಬರ್‌ 1 ರಿಂದ ಅನ್ವಯಾಗಲಿರುವ ಹೊಸ ದರ
ಮೊದಲ 2 ಕಿ.ಮೀ ವರೆಗೆ30 ರೂ.
2.2 ಕಿ.ಮೀ 33 ರೂ.
2.4 ಕಿ.ಮೀ 36 ರೂ.
2.6 ಕಿ.ಮೀ 39 ರೂ.
2.8 ಕಿ.ಮೀ 42 ರೂ.
03 ಕಿ.ಮೀ 45 ರೂ.
3.2 ಕಿ.ಮೀ48 ರೂ.
3.4 ಕಿ.ಮೀ 51 ರೂ.
3.6 ಕಿ.ಮೀ 54 ರೂ.
ಹೀಗೇ ಪ್ರತಿ 0.2 ಕಿ.ಮಿಗೆ ಮೂರು ರೂ ಹೆಚ್ಚಾಗುತ್ತಾ ಹೋಗುತ್ತದೆ. (ಅಂದರೆ ಪ್ರತಿ 0.1 ಕಿ.ಮೀ.ಗೆ 1.5 ರೂ)
ಚಿತ್ರದಲ್ಲಿರುವ ಮೀಟರ್‌ ಹಳೆಯ ದರವೇ(37) ತೋರಿಸುತ್ತಿದೆ. ಹೊಸ ದರದ ಅನ್ವಯ, 2.9 ಕಿ.ಮೀ ಗೆ 43.5 ರೂ ಅಗಲಿದೆ. (2.9×15=43.5)

ಜೊತೆಗೆ, ಹೊಸ ಪರಿಷ್ಕೃತ ದರದಂತೆ, ಕಾಯುವಿಕೆಯ ದರ ಮೊದಲ 5 ನಿಮಿಷ ಉಚಿತವಾಗಿದೆ. ನಂತರ ಪ್ರತಿ  15 ನಿಮಿಷಕ್ಕೆ 5 ರೂಪಾಯಿ ಹೆಚ್ಚುವರಿಯಾಗಿ ಪ್ರಯಾಣಿಕರು ಪಾವತಿಸಬೇಕಾಗಿದೆ. ಅಲ್ಲದೆ, ಪ್ರಯಾಣಿಕರ ಲಗೇಜು 20 ಕೆಜಿ ಒಳಗಿದ್ದರೆ ಉಚಿತವೆಂದು ಪರಿಗಣಿಸಬೇಕಾಗಿದೆ. ಪ್ರಯಾಣಿಕರ ಲಗೇಜು 20 ಕೆಜಿಗಿಂತಲೂ ಅಧಿಕವಾಗಿದ್ದರೆ, ಪ್ರತಿ 20 ಕೆಜಿ ಲಗೇಜಿಗೆ 5 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಒಳಗೆ ಸಾಮಾನ್ಯ ದರದ ಜೊತೆಗೆ ಅದರ ಅರ್ಧ ಪಟ್ಟು ದರವನ್ನು ಪ್ರಯಾಣಿಕರು ಆಟೋಗೆ ಪಾವತಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಸರ್ಕಾರಕ್ಕೆ ಬೆಲೆ ಏರಿಕೆ ಮಾಡಲು ಮನವಿ ಸಲ್ಲಿಸಿದ್ದರು. ಚಾಲಕರ ಈ ಮನವಿಯನ್ನು ಪುರಸ್ಕರಿಸಿ ದರ ಹೆಚ್ಚಳಕ್ಕೆ ಅನುಮತಿ ನೀಡಿದೆ. ಬೆಂಗಳೂರಿನಲ್ಲಿ 8 ವರ್ಷಗಳ ಬಳಿಕ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. 8 ವರ್ಷಗಳ ಹಿಂದೆ 2013 ರಲ್ಲಿ ಆಟೋರಿಕ್ಷಾ ದರವನ್ನು ಕೊನೆಯ ಬಾರಿಗೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...