Homeಮುಖಪುಟಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ.

“ಪುಸ್ತಕದ ಮುದ್ರಿತ ಅಥವಾ ಡಿಜಿಟಲ್ ರೂಪದ ಯಾವುದೇ ಪ್ರತಿಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿಲ್ಲ, ವಿತರಿಸಿಲ್ಲ, ಮಾರಾಟ ಮಾಡಿಲ್ಲ ಅಥವಾ ಲಭ್ಯವಾಗುವಂತೆ ಮಾಡಿಲ್ಲ” ಎಂಬ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ(ಪಿಆರ್‌ಹೆಚ್‌ಐ) ಹೇಳಿಕೆಯನ್ನು ಅವರು ಮಂಗಳವಾರ (ಫೆ.10,2026) ಪ್ರತಿಧ್ವನಿಸಿದ್ದಾರೆ.

ಪುಸ್ತಕದ ವಿಚಾರ ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ಜಟಾಪಟಿಗೆ ಕಾರಣವಾಗಿರುವ ನಡುವೆ, ಅದರ ಪ್ರಕಾಶಕರಾದ ‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’ ಸೋಮವಾರ (ಫೆ.9,2026) ಸ್ಪಷ್ಟನೆ ಕೊಟ್ಟಿದೆ.

“ಇತ್ತೀಚಿನ ಸಾರ್ವಜನಿಕ ಚರ್ಚೆಗಳು ಮತ್ತು ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ, ಭಾರತದ ಮಾಜಿ ಭೂಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಕಥೆಯಾದ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಪುಸ್ತಕದ ಸಂಪೂರ್ಣ ಪ್ರಕಟಣಾ ಹಕ್ಕುಗಳನ್ನು ನಾವು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸ್ಪಷ್ಟಪಡಿಸಲು ಬಯಸುತ್ತದೆ. ಈ ಪುಸ್ತಕವು ಇನ್ನೂ ಪ್ರಕಟಗೊಂಡಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ. ಮುದ್ರಿತ ಅಥವಾ ಡಿಜಿಟಲ್ ರೂಪದ ಯಾವುದೇ ಪ್ರತಿಗಳನ್ನು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದಿಂದ ಸಾರ್ವಜನಿಕವಾಗಿ ಪ್ರಕಟಿಸಿಲ್ಲ, ವಿತರಿಸಿಲ್ಲ, ಮಾರಾಟ ಮಾಡಿಲ್ಲ ಅಥವಾ ಲಭ್ಯವಾಗುವಂತೆ ಮಾಡಿಲ್ಲ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.

ಮುಂದುವರಿದು, “ಪ್ರಸ್ತುತ ಚಲಾವಣೆಯಲ್ಲಿರುವ ಈ ಪುಸ್ತಕದ ಯಾವುದೇ ಪ್ರತಿಗಳು, ಅವು ಪೂರ್ಣವಾಗಿರಲಿ ಅಥವಾ ಭಾಗಶಃವಾಗಿರಲಿ, ಮುದ್ರಿತ, ಡಿಜಿಟಲ್, ಪಿಡಿಎಫ್‌ ಅಥವಾ ಇನ್ನಾವುದೇ ರೂಪದಲ್ಲಿದ್ದರೂ ಮತ್ತು ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಪ್ಲಾಟ್‌ಫಾರ್ಮ್‌ನಲ್ಲಿದ್ದರೂ, ಅವು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ಹಕ್ಕುಸ್ವಾಮ್ಯದ ಉಲ್ಲಂಘನೆಯಾಗುತ್ತವೆ ಮತ್ತು ಅದನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ಹೇಳಿದೆ.

ಪೆಂಗ್ವಿನ್ ಹೌಸ್‌ನ ಸ್ಪಷ್ಟೀಕರಣದ ಈ ಪೋಸ್ಟ್ ಅನ್ನು ನರವಾಣೆ ಅವರು ಹಂಚಿಕೊಂಡಿದ್ದು, “ಇದು ಪುಸ್ತಕದ ಸ್ಥಿತಿ” ಎಂದು ಬರೆದುಕೊಂಡಿದ್ದಾರೆ.

ಅಂದು ಪ್ರಿ-ಆರ್ಡರ್ ಮಾಡಿ ಎಂದಿದ್ದರು ನರವಾಣೆ

ಪುಸ್ತಕ ಪ್ರಕಟಿಸಿಲ್ಲ ಎಂಬ ಪೆಂಗ್ವಿನ್ ಹೌಸ್‌ನ ಹೇಳಿಕೆಯನ್ನು ಪ್ರತಿಧ್ವನಿಸಿರುವ ನರವಾಣೆ ಅವರು, ಈ ಹಿಂದೆ 2023ರ ಡಿಸೆಂಬರ್ 15ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ “ನಮಸ್ಕಾರ ಸ್ನೇಹಿತರೇ. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ, ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟ್‌ನಲ್ಲಿ ಅವರು ಪೆಂಗ್ವಿನ್ ಹೌಸ್ ತನ್ನ ಪುಸ್ತಕದ ಕುರಿತು ಹಾಕಿದ್ದ ಪೋಸ್ಟ್‌ನ ಸ್ಕ್ರೀನ್ ಶಾಟ್‌ ಅನ್ನು ಹಂಚಿಕೊಂಡಿದ್ದರು.

ಪೆಂಗ್ವಿನ್ ಹೌಸ್ ಈ ರೀತಿ ಪೋಸ್ಟ್ ಹಾಕಿತ್ತು : “ನಾವು #VijayDiwas (ವಿಜಯ್ ದಿವಸ್) ಆಚರಣೆಗೆ ಸಜ್ಜಾಗುತ್ತಿರುವ ಈ ಸಂದರ್ಭದಲ್ಲಿ, ದಶಕಗಳ ಕಾಲ ಭಾರತಕ್ಕಾಗಿ ಹೋರಾಡಿದ 28ನೇ ಭೂಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ನರವಾಣೆ ಅವರಿಂದ ಆರಂಭಿಸಿ, ನಮ್ಮ ದೇಶದ ವೀರ ನಾಯಕರನ್ನು ಗೌರವಿಸೋಣ. ಅವರ ಕಥೆಯನ್ನು ತಿಳಿಯಲು, #4StarsOfDestiny ಪುಸ್ತಕವನ್ನು ಈಗಲೇ ಮುಂಗಡವಾಗಿ ಕಾಯ್ದಿರಿಸಿ (Pre-order): amzn.eu/d/fM48WQP”

ರಾಹುಲ್ ಗಾಂಧಿಯ ಪ್ರಶ್ನೆ ಏನು?

ಪೆಂಗ್ವಿನ್ ಹೌಸ್ ಪುಸ್ತಕ ಪ್ರಕಟಗೊಂಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿರುವುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಅಂದು ಸ್ವತಃ ನರವಾಣೆ ಅವರೇ ನನ್ನ ಪುಸ್ತಕ ಮುಂಗಡ ಆರ್ಡರ್ ಮಾಡಿ, ಓದಿ ಎಂದಿದ್ದರು. ಪೆಂಗ್ವಿನ್ ಹೌಸ್ ಕೂಡ ಇದನ್ನೇ ಹೇಳಿತ್ತು” ಆದರೆ, ಈಗ ಪೆಂಗ್ವಿನ್ ಹೌಸ್ ಪುಸ್ತಕ ಪ್ರಕಟಗೊಂಡಿಲ್ಲ ಎಂದು ಹೇಳುತ್ತಿದೆ. ಹಾಗಾದರೆ, ಇಲ್ಲಿ ಸುಳ್ಳು ಹೇಳುತ್ತಿರುವುದು ಯಾರು?” ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ಮಂಗಳವಾರ ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಮಸ್ಕಾರ ಸ್ನೇಹಿತರೇ.. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ.. ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ನರವಾಣೆ ಅವರು ಹಾಕಿದ್ದ ಹಳೆಯ ಸಾಮಾಜಿಕ ಮಾಧ್ಯಮ ಪೋಸ್ಟ್ ಓದಿ ಕೇಳಿಸಿದ್ದಾರೆ.

“ಇದು ಜನರಲ್ ನರವಾಣೆ ಅವರು ಮಾಡಿರುವ ಟ್ವೀಟ್. ನಾನು ಹೇಳಲು ಬಯಸುತ್ತಿರುವ ಅಂಶವೆಂದರೆ, ಇಲ್ಲಿ ಒಂದೋ ನರವಾಣೆ ಅವರು ಸುಳ್ಳು ಹೇಳುತ್ತಿರಬೇಕು ಅಥವಾ ಪೆಂಗ್ವಿನ್ ಪ್ರಕಾಶನ ಸಂಸ್ಥೆ ಸುಳ್ಳು ಹೇಳುತ್ತಿರಬೇಕು. ಇಬ್ಬರೂ ಏಕಕಾಲಕ್ಕೆ ಸತ್ಯ ಹೇಳಲು ಸಾಧ್ಯವಿಲ್ಲ. ಆದರೆ, ನಾನು ಮಾಜಿ ಸೇನಾ ಮುಖ್ಯಸ್ಥರ ಮಾತನ್ನು ನಂಬುತ್ತೇನೆ; ಅವರು ಸುಳ್ಳು ಹೇಳುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂದುವರಿದು, “ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಈ ಪುಸ್ತಕ ಪ್ರಕಟವಾಗಿಲ್ಲ ಎಂದು ಹೇಳುತ್ತಿದೆ. ಆದರೆ ಅದೇ ಪುಸ್ತಕವು ಅಮೆಜಾನ್‌ನಲ್ಲಿ ಲಭ್ಯವಿದೆ. ಜನರಲ್ ನರವಾಣೆ ಅವರು 2023ರಲ್ಲೇ ಟ್ವೀಟ್ ಮಾಡಿ, ‘ನನ್ನ ಪುಸ್ತಕವನ್ನು ದಯವಿಟ್ಟು ಖರೀದಿಸಿ’ ಎಂದು ಕೇಳಿಕೊಂಡಿದ್ದರು. ಇದನ್ನು ನಾನು ಆಗಲೇ ಓದಿ ತೋರಿಸಿದ್ದೇನೆ. ಈಗ ನೀವೇ ಹೇಳಿ, ನೀವು ನರವಾಣೆ ಅವರಿಗಿಂತ ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರಾ? ನಾನಂತೂ ಜನರಲ್ ನರವಾಣೆ ಅವರನ್ನೇ ನಂಬುತ್ತೇನೆ” ಎಂದಿದ್ದಾರೆ.

ಅಮೆಜಾನ್‌ನಲ್ಲಿತ್ತು ಪುಸ್ತಕ

ಅಮೆಜಾನ್‌ನ ಅಮೆರಿಕದ ವೆಬ್‌ಸೈಟ್‌ನಲ್ಲಿ ನರವಾಣೆ ಅವರ ಪುಸ್ತಕವು ಮೇ 1, 2024 ರಂದೇ ಪ್ರಕಟವಾಗಿದೆ ಎಂದು ತೋರಿಸುತ್ತಿದೆ. ಆದರೆ, ಪ್ರಸ್ತುತ ಅದು “ಲಭ್ಯವಿಲ್ಲ” ಎಂದು ನಮೂದಿಸಲಾಗಿದೆ. ಇದೇ ವೇಳೆ, ಭಾರತದ ಅಮೆಜಾನ್ ವೆಬ್‌ಸೈಟ್‌ನಲ್ಲಿ ಹುಡುಕಿದಾಗ ಈ ಪುಟವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಂದೇಶ ಕಾಣಿಸುತ್ತಿದೆ. ಪ್ರಕಾಶಕರು ಪುಸ್ತಕ ಬಿಡುಗಡೆಯೇ ಆಗಿಲ್ಲ ಎನ್ನುತ್ತಿದ್ದರೂ, ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪ್ರಕಟಣೆಯ ದಿನಾಂಕ ನಮೂದಾಗಿರುವುದು ರಾಹುಲ್ ಗಾಂಧಿಯವರ “ಪುಸ್ತಕ ಲಭ್ಯವಿತ್ತು” ಎಂಬ ವಾದಕ್ಕೆ ಆಧಾರ ನೀಡಿದಂತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಕೊನೆಯದಾಗಿ…ಪೆಂಗ್ವಿನ್ ಹೌಸ್ ಪುಸ್ತಕ ಪ್ರಕಟಿಸುವ ಮುನ್ನವೇ ಮುಂಗಡ ಬುಕ್ಕಿಂಗ್ ಮಾಡಿ ಎಂದು ಪೋಸ್ಟ್ ಹಾಕಿತ್ತೇ..? ನರವಾಣೆ ಕೂಡ ಇದೇ ಅರ್ಥದಲ್ಲಿ ಪೋಸ್ಟ್ ಹಂಚಿಕೊಂಡಿದ್ದರೇ? ಎಂಬ ಪ್ರಶ್ನೆ ಈಗ ಮೂಡಿದೆ. ಒಂದು ವೇಳೆ ಪ್ರಕಟಗೊಳ್ಳುವ ಮುನ್ನವೇ ಮುಂಗಡ ಬುಕ್ಕಿಂಗ್ ಮಾಡಿ ಎಂದಿದ್ದರೆ, ಪ್ರತಿಷ್ಠಿತ ಪ್ರಕಾಶನ ಸಂಸ್ಥೆ ಬುಕ್ಕಿಂಗ್ ಮಾಡಿದ ಜನರಿಗೆ ತಕ್ಷಣ ಎಲ್ಲಿಂದ ಪುಸ್ತಕ ಕೊಡುತ್ತಿತ್ತು? ಇಲ್ಲ ನಾವು ತಡವಾಗಿ ಕೊಡುತ್ತಿದ್ದೆವು ಎನ್ನುವುದಾದರೆ ಸಂಸ್ಥೆಯ ಉತ್ತಮ ಹೆಸರಿಗೆ (Good Will) ಹಿನ್ನಡೆಯಾದಂತೆ ಅಲ್ಲವೇ?

ಇನ್ನು, 2026ರ ಫೆ.10ರವರೆಗೆ ಪುಸ್ತಕದ ಕುರಿತ ರಾಜಕೀಯ ಜಟಾಪಟಿಯ ಬಗ್ಗೆ ನರವಾಣೆ ಮೌನವಾಗಿದ್ದರು. ಫೆ.10ರಂದು ರಾಹುಲ್ ಗಾಂಧಿ ನರವಾಣೆ ಈ ಹಿಂದೆ ಹೀಗೆ ಹೇಳಿದ್ದಾರೆ, ಈಗ ಪೆಂಗ್ವಿನ್ ಹೌಸ್ ಈ ರೀತಿ ಹೇಳುತ್ತಿದೆ ಎಂದು ನರವಾಣೆ ಅವರ ಹಳೆಯ ಟ್ವೀಟ್ ಓದಿದ ಬಳಿಕ, ನರವಾಣೆ ಮೌನ ಮುರಿದಿದ್ದಾರೆ. ಪೆಂಗ್ವಿನ್ ಹೌಸ್ ಹೇಳಿಕೆಯನ್ನು ಪ್ರತಿಧ್ವನಿಸಿದ್ದಾರೆ. ಹಾಗಾಗಿ, ನರವಾಣೆ ತಾನು ಈ ಹಿಂದೆ ಹಾಕಿದ್ದ ಪೋಸ್ಟ್‌ಗೆ ತದ್ವಿರುದ್ದವಾದ ನಿಲುವು ವ್ಯಕ್ತಪಡಿಸಿದಂತೆ ಕಾಣುತ್ತಿದೆ. ನರವಾಣೆಯ ಇತ್ತೀಚಿನ ಪೋಸ್ಟ್‌ನಿಂದ “ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ” ಎಂಬ ರಾಹುಲ್ ಗಾಂಧಿಯ ಫೆ.10ರ ಹೇಳಿಕೆ ಅರ್ಥ ಕಳೆದುಕೊಂಡಂತಾಗಿದೆ. ಯಾವುದು ಸತ್ಯ? ಏನನ್ನು ನಂಬಬೇಕು ಎಂಬ ಗೊಂದಲ ಮೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...