Homeಮುಖಪುಟನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

- Advertisement -
- Advertisement -

ದೇಶಕ್ಕೆ ನಿರಂಕುಶ ಪ್ರಭುತ್ವ ಹಾನಿಕರವಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದ್ದು, ಅಂತಹ ಸರಕಾರ ಈ ಹಿಂದೆ ಉತ್ತಮವಾಗಿ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಮುಂಬೈನ ತಮ್ಮ ನಿವಾಸ ‘ಮಾತೋಶ್ರೀ’ಯಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ದೇಶಕ್ಕೆ ಬಲಿಷ್ಠ ನಾಯಕನ ಅವಶ್ಯಕತೆ ಇದೆ, ಆ ನಾಯಕ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ಜಲಗಾಂವ್ ಜಿಲ್ಲೆಯ ಭಾರತೀಯ ಜನತಾ ಪಕ್ಷ (ಬಿಜೆಪಿ), ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ವಂಚಿತ್ ಬಹುಜನ ಅಘಾಡಿ (ವಿಬಿಎ) ಪದಾಧಿಕಾರಿಗಳು ಶಿವಸೇನಾ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಸಮಾಧಾನ ಗೋಚರಿಸುತ್ತಿದೆ ಎಂದು ಹೇಳಿದ್ದಾರೆ.

ನಿರಂಕುಶ ಆಡಳಿತವು ದೇಶಕ್ಕೆ ಹಾನಿಕಾರಕವಾಗಿದೆ. ಒಂದು ಕಾಲದಲ್ಲಿ ಸಮ್ಮಿಶ್ರ ಸರ್ಕಾರ ಬೇಡ ಎಂಬ ಭಾವನೆ ಇತ್ತು. ಆದರೆ ಪಿ ವಿ ನರಸಿಂಹ ರಾವ್, ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರು ಸಮ್ಮಿಶ್ರ ಸರ್ಕಾರಗಳನ್ನು ಚೆನ್ನಾಗಿ ನಡೆಸಿದ್ದರು. ಕೆಲವು ಸಂದರ್ಭಗಳನ್ನು ಹೊರತುಪಡಿಸಿ, ಸಮ್ಮಿಶ್ರ ಸರ್ಕಾರಗಳು ದೇಶದಲ್ಲಿ ಉತ್ತಮವಾಗಿ ಕೆಲಸ ಮಾಡಿದೆ. ನಮಗೆ ಬಲಿಷ್ಠ ದೇಶ ಮತ್ತು ಸಮ್ಮಿಶ್ರ ಸರ್ಕಾರ ಬೇಕು. ನಮಗೆ ಬಲಿಷ್ಠ ನಾಯಕ ಬೇಕು, ಬಲಿಷ್ಠ ನಾಯಕ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬಲ್ಲರು ಎಂದು ಠಾಕ್ರೆ ಹೇಳಿದರು.

ವಿರೋಧ ಪಕ್ಷದ ಇಂಡಿಯಾ ಬಣವು ದೇಶಕ್ಕೆ ಉತ್ತಮವಾದ ಸಮ್ಮಿಶ್ರ ಸರ್ಕಾರವನ್ನು ನೀಡಬಹುದು. ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ಶೀಘ್ರದಲ್ಲೇ ರಾಜ್ಯದಲ್ಲಿ ಜಂಟಿ ರ್ಯಾಲಿಗಳನ್ನು ನಡೆಸಲಿವೆ ಎಂದು ಉದ್ದವ್‌ ಠಾಕ್ರೆ ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಶಿವಸೇನೆ ಕುರಿತ ‘ನಕಲಿ’ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನನ್ನ ಪಕ್ಷವು ನಿಮ್ಮ ಪದವಿಯಂತೆ ಇರಲಿಲ್ಲ” ಎಂದು ಹೇಳಿದರು. ಮುಂಬೈ ಬಳಿಯ ಮಹಾರಾಷ್ಟ್ರದ ಬೋಯಿಸರ್‌ನಲ್ಲಿ ತಮ್ಮ ಪಕ್ಷದ ಪಾಲ್ಘರ್ ಲೋಕಸಭಾ ಅಭ್ಯರ್ಥಿ ಭಾರತಿ ಕಾಮ್ಡಿ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತಿದ್ದ ಪ್ರಚಾರ ಸಭೆಯಲ್ಲಿ ಠಾಕ್ರೆ ಈ ಹೇಳಿಕೆಗಳನ್ನು ನೀಡಿದ್ದರು.

ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಶಿವಸೇನೆ ಮುಖ್ಯಸ್ಥ ಬಾಲ್ ಠಾಕ್ರೆ ಸ್ಥಾಪಿಸಿದ ಶಿವಸೇನೆಯನ್ನು ನಕಲಿ ಎಂದು ಕರೆಯಲಾಗುತ್ತಿದೆ, ಅದನ್ನು ನಕಲಿ ಎಂದು ಕರೆಯಲು ಅದು ನಿಮ್ಮ ಪದವಿಯಂತಲ್ಲ ಎಂದು ಉದ್ದವ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ: ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...