Homeಮುಖಪುಟನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

- Advertisement -
- Advertisement -

ದೇಶಕ್ಕೆ ನಿರಂಕುಶ ಪ್ರಭುತ್ವ ಹಾನಿಕರವಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದ್ದು, ಅಂತಹ ಸರಕಾರ ಈ ಹಿಂದೆ ಉತ್ತಮವಾಗಿ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಮುಂಬೈನ ತಮ್ಮ ನಿವಾಸ ‘ಮಾತೋಶ್ರೀ’ಯಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ದೇಶಕ್ಕೆ ಬಲಿಷ್ಠ ನಾಯಕನ ಅವಶ್ಯಕತೆ ಇದೆ, ಆ ನಾಯಕ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ಜಲಗಾಂವ್ ಜಿಲ್ಲೆಯ ಭಾರತೀಯ ಜನತಾ ಪಕ್ಷ (ಬಿಜೆಪಿ), ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ವಂಚಿತ್ ಬಹುಜನ ಅಘಾಡಿ (ವಿಬಿಎ) ಪದಾಧಿಕಾರಿಗಳು ಶಿವಸೇನಾ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಸಮಾಧಾನ ಗೋಚರಿಸುತ್ತಿದೆ ಎಂದು ಹೇಳಿದ್ದಾರೆ.

ನಿರಂಕುಶ ಆಡಳಿತವು ದೇಶಕ್ಕೆ ಹಾನಿಕಾರಕವಾಗಿದೆ. ಒಂದು ಕಾಲದಲ್ಲಿ ಸಮ್ಮಿಶ್ರ ಸರ್ಕಾರ ಬೇಡ ಎಂಬ ಭಾವನೆ ಇತ್ತು. ಆದರೆ ಪಿ ವಿ ನರಸಿಂಹ ರಾವ್, ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರು ಸಮ್ಮಿಶ್ರ ಸರ್ಕಾರಗಳನ್ನು ಚೆನ್ನಾಗಿ ನಡೆಸಿದ್ದರು. ಕೆಲವು ಸಂದರ್ಭಗಳನ್ನು ಹೊರತುಪಡಿಸಿ, ಸಮ್ಮಿಶ್ರ ಸರ್ಕಾರಗಳು ದೇಶದಲ್ಲಿ ಉತ್ತಮವಾಗಿ ಕೆಲಸ ಮಾಡಿದೆ. ನಮಗೆ ಬಲಿಷ್ಠ ದೇಶ ಮತ್ತು ಸಮ್ಮಿಶ್ರ ಸರ್ಕಾರ ಬೇಕು. ನಮಗೆ ಬಲಿಷ್ಠ ನಾಯಕ ಬೇಕು, ಬಲಿಷ್ಠ ನಾಯಕ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬಲ್ಲರು ಎಂದು ಠಾಕ್ರೆ ಹೇಳಿದರು.

ವಿರೋಧ ಪಕ್ಷದ ಇಂಡಿಯಾ ಬಣವು ದೇಶಕ್ಕೆ ಉತ್ತಮವಾದ ಸಮ್ಮಿಶ್ರ ಸರ್ಕಾರವನ್ನು ನೀಡಬಹುದು. ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ಶೀಘ್ರದಲ್ಲೇ ರಾಜ್ಯದಲ್ಲಿ ಜಂಟಿ ರ್ಯಾಲಿಗಳನ್ನು ನಡೆಸಲಿವೆ ಎಂದು ಉದ್ದವ್‌ ಠಾಕ್ರೆ ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಶಿವಸೇನೆ ಕುರಿತ ‘ನಕಲಿ’ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನನ್ನ ಪಕ್ಷವು ನಿಮ್ಮ ಪದವಿಯಂತೆ ಇರಲಿಲ್ಲ” ಎಂದು ಹೇಳಿದರು. ಮುಂಬೈ ಬಳಿಯ ಮಹಾರಾಷ್ಟ್ರದ ಬೋಯಿಸರ್‌ನಲ್ಲಿ ತಮ್ಮ ಪಕ್ಷದ ಪಾಲ್ಘರ್ ಲೋಕಸಭಾ ಅಭ್ಯರ್ಥಿ ಭಾರತಿ ಕಾಮ್ಡಿ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತಿದ್ದ ಪ್ರಚಾರ ಸಭೆಯಲ್ಲಿ ಠಾಕ್ರೆ ಈ ಹೇಳಿಕೆಗಳನ್ನು ನೀಡಿದ್ದರು.

ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಶಿವಸೇನೆ ಮುಖ್ಯಸ್ಥ ಬಾಲ್ ಠಾಕ್ರೆ ಸ್ಥಾಪಿಸಿದ ಶಿವಸೇನೆಯನ್ನು ನಕಲಿ ಎಂದು ಕರೆಯಲಾಗುತ್ತಿದೆ, ಅದನ್ನು ನಕಲಿ ಎಂದು ಕರೆಯಲು ಅದು ನಿಮ್ಮ ಪದವಿಯಂತಲ್ಲ ಎಂದು ಉದ್ದವ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ: ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...