Homeಮುಖಪುಟನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

- Advertisement -
- Advertisement -

ದೇಶಕ್ಕೆ ನಿರಂಕುಶ ಪ್ರಭುತ್ವ ಹಾನಿಕರವಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದ್ದು, ಅಂತಹ ಸರಕಾರ ಈ ಹಿಂದೆ ಉತ್ತಮವಾಗಿ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಮುಂಬೈನ ತಮ್ಮ ನಿವಾಸ ‘ಮಾತೋಶ್ರೀ’ಯಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ದೇಶಕ್ಕೆ ಬಲಿಷ್ಠ ನಾಯಕನ ಅವಶ್ಯಕತೆ ಇದೆ, ಆ ನಾಯಕ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ಜಲಗಾಂವ್ ಜಿಲ್ಲೆಯ ಭಾರತೀಯ ಜನತಾ ಪಕ್ಷ (ಬಿಜೆಪಿ), ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ವಂಚಿತ್ ಬಹುಜನ ಅಘಾಡಿ (ವಿಬಿಎ) ಪದಾಧಿಕಾರಿಗಳು ಶಿವಸೇನಾ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಸಮಾಧಾನ ಗೋಚರಿಸುತ್ತಿದೆ ಎಂದು ಹೇಳಿದ್ದಾರೆ.

ನಿರಂಕುಶ ಆಡಳಿತವು ದೇಶಕ್ಕೆ ಹಾನಿಕಾರಕವಾಗಿದೆ. ಒಂದು ಕಾಲದಲ್ಲಿ ಸಮ್ಮಿಶ್ರ ಸರ್ಕಾರ ಬೇಡ ಎಂಬ ಭಾವನೆ ಇತ್ತು. ಆದರೆ ಪಿ ವಿ ನರಸಿಂಹ ರಾವ್, ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರು ಸಮ್ಮಿಶ್ರ ಸರ್ಕಾರಗಳನ್ನು ಚೆನ್ನಾಗಿ ನಡೆಸಿದ್ದರು. ಕೆಲವು ಸಂದರ್ಭಗಳನ್ನು ಹೊರತುಪಡಿಸಿ, ಸಮ್ಮಿಶ್ರ ಸರ್ಕಾರಗಳು ದೇಶದಲ್ಲಿ ಉತ್ತಮವಾಗಿ ಕೆಲಸ ಮಾಡಿದೆ. ನಮಗೆ ಬಲಿಷ್ಠ ದೇಶ ಮತ್ತು ಸಮ್ಮಿಶ್ರ ಸರ್ಕಾರ ಬೇಕು. ನಮಗೆ ಬಲಿಷ್ಠ ನಾಯಕ ಬೇಕು, ಬಲಿಷ್ಠ ನಾಯಕ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬಲ್ಲರು ಎಂದು ಠಾಕ್ರೆ ಹೇಳಿದರು.

ವಿರೋಧ ಪಕ್ಷದ ಇಂಡಿಯಾ ಬಣವು ದೇಶಕ್ಕೆ ಉತ್ತಮವಾದ ಸಮ್ಮಿಶ್ರ ಸರ್ಕಾರವನ್ನು ನೀಡಬಹುದು. ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ಶೀಘ್ರದಲ್ಲೇ ರಾಜ್ಯದಲ್ಲಿ ಜಂಟಿ ರ್ಯಾಲಿಗಳನ್ನು ನಡೆಸಲಿವೆ ಎಂದು ಉದ್ದವ್‌ ಠಾಕ್ರೆ ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಶಿವಸೇನೆ ಕುರಿತ ‘ನಕಲಿ’ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನನ್ನ ಪಕ್ಷವು ನಿಮ್ಮ ಪದವಿಯಂತೆ ಇರಲಿಲ್ಲ” ಎಂದು ಹೇಳಿದರು. ಮುಂಬೈ ಬಳಿಯ ಮಹಾರಾಷ್ಟ್ರದ ಬೋಯಿಸರ್‌ನಲ್ಲಿ ತಮ್ಮ ಪಕ್ಷದ ಪಾಲ್ಘರ್ ಲೋಕಸಭಾ ಅಭ್ಯರ್ಥಿ ಭಾರತಿ ಕಾಮ್ಡಿ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತಿದ್ದ ಪ್ರಚಾರ ಸಭೆಯಲ್ಲಿ ಠಾಕ್ರೆ ಈ ಹೇಳಿಕೆಗಳನ್ನು ನೀಡಿದ್ದರು.

ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಶಿವಸೇನೆ ಮುಖ್ಯಸ್ಥ ಬಾಲ್ ಠಾಕ್ರೆ ಸ್ಥಾಪಿಸಿದ ಶಿವಸೇನೆಯನ್ನು ನಕಲಿ ಎಂದು ಕರೆಯಲಾಗುತ್ತಿದೆ, ಅದನ್ನು ನಕಲಿ ಎಂದು ಕರೆಯಲು ಅದು ನಿಮ್ಮ ಪದವಿಯಂತಲ್ಲ ಎಂದು ಉದ್ದವ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ: ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...