Homeಮುಖಪುಟಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

ಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

- Advertisement -
- Advertisement -

15 ಜನ ಸಂಸದರ ಅಮಾನತು ಆದೇಶ ವಿರೋಧಿಸಿ ತಮಿಳುನಾಡು ಸಂಸದ ಉದಯನಿಧಿ ಸ್ಟಾಲಿನ್ ಕಿಡಿಕಾರಿದ್ದಾರೆ. ‘ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಡಿಎಂಕೆ ಕನಿಮೊಳಿ ಮತ್ತು ಎಸ್‌ಆರ್‌ ಪಾರ್ಥಿಬನ್ ಸೇರಿದಂತೆ ಪ್ರತಿಪಕ್ಷಗಳ 15 ಸಂಸದರ ಅಮಾನತು ಮಾಡಲಾಗಿದೆ. ಕೇಂದ್ರದ ಈ ನಡೆ ಅತ್ಯಂತ ಖಂಡನೀಯವಾಗಿದೆ. ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ. ಸಂಸತ್ತಿನಲ್ಲಿ ಗಂಭೀರ ಭದ್ರತಾ ಲೋಪವನ್ನು ಪ್ರಶ್ನಿಸುವ ಜನಪ್ರತಿನಿಧಿಗಳ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ತತ್ವಗಳ ಮೇಲಿನ ಸ್ಪಷ್ಟ ದಾಳಿಯಾಗಿದೆ. ಕೇಂದ್ರ ಸರ್ಕಾರ ತನ್ನ ಅಸಹಿಷ್ಣು ಧೋರಣೆ ಕೈಬಿಟ್ಟು ಸಂಸದರ ಅಮಾನತು ಹಿಂಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಲೋಪದ ಬಗ್ಗೆ ಮಾತನಾಡಲು ಯಾಕಿಷ್ಟು ಭಯ?

ತನ್ನ ಐದು ಜನ ಸಂಸದರನ್ನು ಅಮಾನತು ಮಾಡಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿ, ‘ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ? ಸಂಸತ್ತಿನ ಮೇಲೆ ದಾಳಿಯಾಗಲು ಸಹಕರಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವುದಿರಲಿ ಕನಿಷ್ಠ ವಿಚಾರಣೆಗೂ ಒಳಪಡಿಸಲಿಲ್ಲ. ಭದ್ರತಾ ಲೋಪವನ್ನು ಚರ್ಚಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್‌ನ 5 ಸಂಸದರನ್ನು ಕಲಾಪದಿಂದ ಅಮಾನಾತು ಮಾಡಲಾಗಿದೆ. ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ. ಇದು ಬಿಜೆಪಿ ಪ್ರಾಯೋಜಿತ ಘಟನೆಯೇ’ ಎಂದು ಪ್ರಶ್ನಿಸಿದೆ.

ಒಬ್ರಿಯಾನ್ ಮೌನ ಪ್ರತಿಭಟನೆ:

ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ನಿನ್ನೆ ಟೀಕಿಸಿದ್ದರು.

ಕಣ್ತಪ್ಪಿನಿಂದ ಪಾರ್ಥಿಬನ್ ಹೆಸರು ಸೇರ್ಪಡೆ!

ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಗುರುವಾರ ನಡೆದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಂಡ 14 ಪ್ರತಿಪಕ್ಷಗಳ ಸಂಸದರಲ್ಲಿ ಡಿಎಂಕೆ ನಾಯಕ ಎಸ್‌ಆರ್ ಪಾರ್ಥಿಬನ್ ಅವರ ಹೆಸರೂ ಸೇರಿದೆ. ಪಾರ್ಥಿಬನ್ ಅವರ ಹೆಸರು ಕಣ್ತಪ್ಪಿನಿಂದ ಸೇರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ’13 ಜನ ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಅಮಾನತುಗೊಂಡ ಸಂಸದರ ಪೈಕಿ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಇರಲಿಲ್ಲ (ಅವರು ಚೆನ್ನೈನಲ್ಲಿದ್ದಾರೆ) ಎಂದು ಉಳಿದ ಸಂಸದರು ದೂರಿದ್ದರು. ‘ಒಬ್ಬ ಸಂಸದರ ಹೆಸರನ್ನು ಕಣ್ತಪ್ಪಿನಿಂದ ಗುರುತಿಸಲಾಗಿದೆ. ತಪ್ಪಾಗಿ ನಮೂದಿಸಿರುವ ಸಂಸದರ ಹೆಸರನ್ನು ತೆಗೆದುಹಾಕುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿದ್ದು, ಸಭಾಧ್ಯಕ್ಷರು ಮನವಿ ಸ್ವೀಕರಿಸಿದರು’ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಅಮಿತ್ ಶಾ ಉತ್ತರಕ್ಕೆ ಸಂಸದರ ಆಗ್ರಹ:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದರು. ಆಗ ಸದನದಲ್ಲಿ ತೀವ್ರ ಗದ್ದಲ ಉಂಟಾಗಿದೆ.

ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...