Homeಮುಖಪುಟಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

ಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

- Advertisement -
- Advertisement -

15 ಜನ ಸಂಸದರ ಅಮಾನತು ಆದೇಶ ವಿರೋಧಿಸಿ ತಮಿಳುನಾಡು ಸಂಸದ ಉದಯನಿಧಿ ಸ್ಟಾಲಿನ್ ಕಿಡಿಕಾರಿದ್ದಾರೆ. ‘ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಡಿಎಂಕೆ ಕನಿಮೊಳಿ ಮತ್ತು ಎಸ್‌ಆರ್‌ ಪಾರ್ಥಿಬನ್ ಸೇರಿದಂತೆ ಪ್ರತಿಪಕ್ಷಗಳ 15 ಸಂಸದರ ಅಮಾನತು ಮಾಡಲಾಗಿದೆ. ಕೇಂದ್ರದ ಈ ನಡೆ ಅತ್ಯಂತ ಖಂಡನೀಯವಾಗಿದೆ. ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ. ಸಂಸತ್ತಿನಲ್ಲಿ ಗಂಭೀರ ಭದ್ರತಾ ಲೋಪವನ್ನು ಪ್ರಶ್ನಿಸುವ ಜನಪ್ರತಿನಿಧಿಗಳ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ತತ್ವಗಳ ಮೇಲಿನ ಸ್ಪಷ್ಟ ದಾಳಿಯಾಗಿದೆ. ಕೇಂದ್ರ ಸರ್ಕಾರ ತನ್ನ ಅಸಹಿಷ್ಣು ಧೋರಣೆ ಕೈಬಿಟ್ಟು ಸಂಸದರ ಅಮಾನತು ಹಿಂಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಲೋಪದ ಬಗ್ಗೆ ಮಾತನಾಡಲು ಯಾಕಿಷ್ಟು ಭಯ?

ತನ್ನ ಐದು ಜನ ಸಂಸದರನ್ನು ಅಮಾನತು ಮಾಡಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿ, ‘ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ? ಸಂಸತ್ತಿನ ಮೇಲೆ ದಾಳಿಯಾಗಲು ಸಹಕರಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವುದಿರಲಿ ಕನಿಷ್ಠ ವಿಚಾರಣೆಗೂ ಒಳಪಡಿಸಲಿಲ್ಲ. ಭದ್ರತಾ ಲೋಪವನ್ನು ಚರ್ಚಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್‌ನ 5 ಸಂಸದರನ್ನು ಕಲಾಪದಿಂದ ಅಮಾನಾತು ಮಾಡಲಾಗಿದೆ. ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ. ಇದು ಬಿಜೆಪಿ ಪ್ರಾಯೋಜಿತ ಘಟನೆಯೇ’ ಎಂದು ಪ್ರಶ್ನಿಸಿದೆ.

ಒಬ್ರಿಯಾನ್ ಮೌನ ಪ್ರತಿಭಟನೆ:

ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ನಿನ್ನೆ ಟೀಕಿಸಿದ್ದರು.

ಕಣ್ತಪ್ಪಿನಿಂದ ಪಾರ್ಥಿಬನ್ ಹೆಸರು ಸೇರ್ಪಡೆ!

ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಗುರುವಾರ ನಡೆದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಂಡ 14 ಪ್ರತಿಪಕ್ಷಗಳ ಸಂಸದರಲ್ಲಿ ಡಿಎಂಕೆ ನಾಯಕ ಎಸ್‌ಆರ್ ಪಾರ್ಥಿಬನ್ ಅವರ ಹೆಸರೂ ಸೇರಿದೆ. ಪಾರ್ಥಿಬನ್ ಅವರ ಹೆಸರು ಕಣ್ತಪ್ಪಿನಿಂದ ಸೇರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ’13 ಜನ ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಅಮಾನತುಗೊಂಡ ಸಂಸದರ ಪೈಕಿ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಇರಲಿಲ್ಲ (ಅವರು ಚೆನ್ನೈನಲ್ಲಿದ್ದಾರೆ) ಎಂದು ಉಳಿದ ಸಂಸದರು ದೂರಿದ್ದರು. ‘ಒಬ್ಬ ಸಂಸದರ ಹೆಸರನ್ನು ಕಣ್ತಪ್ಪಿನಿಂದ ಗುರುತಿಸಲಾಗಿದೆ. ತಪ್ಪಾಗಿ ನಮೂದಿಸಿರುವ ಸಂಸದರ ಹೆಸರನ್ನು ತೆಗೆದುಹಾಕುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿದ್ದು, ಸಭಾಧ್ಯಕ್ಷರು ಮನವಿ ಸ್ವೀಕರಿಸಿದರು’ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಅಮಿತ್ ಶಾ ಉತ್ತರಕ್ಕೆ ಸಂಸದರ ಆಗ್ರಹ:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದರು. ಆಗ ಸದನದಲ್ಲಿ ತೀವ್ರ ಗದ್ದಲ ಉಂಟಾಗಿದೆ.

ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...