Homeಮುಖಪುಟಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

ಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

- Advertisement -
- Advertisement -

15 ಜನ ಸಂಸದರ ಅಮಾನತು ಆದೇಶ ವಿರೋಧಿಸಿ ತಮಿಳುನಾಡು ಸಂಸದ ಉದಯನಿಧಿ ಸ್ಟಾಲಿನ್ ಕಿಡಿಕಾರಿದ್ದಾರೆ. ‘ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಡಿಎಂಕೆ ಕನಿಮೊಳಿ ಮತ್ತು ಎಸ್‌ಆರ್‌ ಪಾರ್ಥಿಬನ್ ಸೇರಿದಂತೆ ಪ್ರತಿಪಕ್ಷಗಳ 15 ಸಂಸದರ ಅಮಾನತು ಮಾಡಲಾಗಿದೆ. ಕೇಂದ್ರದ ಈ ನಡೆ ಅತ್ಯಂತ ಖಂಡನೀಯವಾಗಿದೆ. ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ. ಸಂಸತ್ತಿನಲ್ಲಿ ಗಂಭೀರ ಭದ್ರತಾ ಲೋಪವನ್ನು ಪ್ರಶ್ನಿಸುವ ಜನಪ್ರತಿನಿಧಿಗಳ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ತತ್ವಗಳ ಮೇಲಿನ ಸ್ಪಷ್ಟ ದಾಳಿಯಾಗಿದೆ. ಕೇಂದ್ರ ಸರ್ಕಾರ ತನ್ನ ಅಸಹಿಷ್ಣು ಧೋರಣೆ ಕೈಬಿಟ್ಟು ಸಂಸದರ ಅಮಾನತು ಹಿಂಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಲೋಪದ ಬಗ್ಗೆ ಮಾತನಾಡಲು ಯಾಕಿಷ್ಟು ಭಯ?

ತನ್ನ ಐದು ಜನ ಸಂಸದರನ್ನು ಅಮಾನತು ಮಾಡಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿ, ‘ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ? ಸಂಸತ್ತಿನ ಮೇಲೆ ದಾಳಿಯಾಗಲು ಸಹಕರಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವುದಿರಲಿ ಕನಿಷ್ಠ ವಿಚಾರಣೆಗೂ ಒಳಪಡಿಸಲಿಲ್ಲ. ಭದ್ರತಾ ಲೋಪವನ್ನು ಚರ್ಚಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್‌ನ 5 ಸಂಸದರನ್ನು ಕಲಾಪದಿಂದ ಅಮಾನಾತು ಮಾಡಲಾಗಿದೆ. ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ. ಇದು ಬಿಜೆಪಿ ಪ್ರಾಯೋಜಿತ ಘಟನೆಯೇ’ ಎಂದು ಪ್ರಶ್ನಿಸಿದೆ.

ಒಬ್ರಿಯಾನ್ ಮೌನ ಪ್ರತಿಭಟನೆ:

ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ನಿನ್ನೆ ಟೀಕಿಸಿದ್ದರು.

ಕಣ್ತಪ್ಪಿನಿಂದ ಪಾರ್ಥಿಬನ್ ಹೆಸರು ಸೇರ್ಪಡೆ!

ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಗುರುವಾರ ನಡೆದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಂಡ 14 ಪ್ರತಿಪಕ್ಷಗಳ ಸಂಸದರಲ್ಲಿ ಡಿಎಂಕೆ ನಾಯಕ ಎಸ್‌ಆರ್ ಪಾರ್ಥಿಬನ್ ಅವರ ಹೆಸರೂ ಸೇರಿದೆ. ಪಾರ್ಥಿಬನ್ ಅವರ ಹೆಸರು ಕಣ್ತಪ್ಪಿನಿಂದ ಸೇರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ’13 ಜನ ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಅಮಾನತುಗೊಂಡ ಸಂಸದರ ಪೈಕಿ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಇರಲಿಲ್ಲ (ಅವರು ಚೆನ್ನೈನಲ್ಲಿದ್ದಾರೆ) ಎಂದು ಉಳಿದ ಸಂಸದರು ದೂರಿದ್ದರು. ‘ಒಬ್ಬ ಸಂಸದರ ಹೆಸರನ್ನು ಕಣ್ತಪ್ಪಿನಿಂದ ಗುರುತಿಸಲಾಗಿದೆ. ತಪ್ಪಾಗಿ ನಮೂದಿಸಿರುವ ಸಂಸದರ ಹೆಸರನ್ನು ತೆಗೆದುಹಾಕುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿದ್ದು, ಸಭಾಧ್ಯಕ್ಷರು ಮನವಿ ಸ್ವೀಕರಿಸಿದರು’ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಅಮಿತ್ ಶಾ ಉತ್ತರಕ್ಕೆ ಸಂಸದರ ಆಗ್ರಹ:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದರು. ಆಗ ಸದನದಲ್ಲಿ ತೀವ್ರ ಗದ್ದಲ ಉಂಟಾಗಿದೆ.

ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...