Homeಮುಖಪುಟಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

ಫ್ಯಾಸಿಸ್ಟರ ನಿರಂಕುಶ ವರ್ತನೆ ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ; ಸಂಸದರ ಅಮಾನತು ಆದೇಶಕ್ಕೆ ಉದಯನಿಧಿ ಕಿಡಿ

- Advertisement -
- Advertisement -

15 ಜನ ಸಂಸದರ ಅಮಾನತು ಆದೇಶ ವಿರೋಧಿಸಿ ತಮಿಳುನಾಡು ಸಂಸದ ಉದಯನಿಧಿ ಸ್ಟಾಲಿನ್ ಕಿಡಿಕಾರಿದ್ದಾರೆ. ‘ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಡಿಎಂಕೆ ಕನಿಮೊಳಿ ಮತ್ತು ಎಸ್‌ಆರ್‌ ಪಾರ್ಥಿಬನ್ ಸೇರಿದಂತೆ ಪ್ರತಿಪಕ್ಷಗಳ 15 ಸಂಸದರ ಅಮಾನತು ಮಾಡಲಾಗಿದೆ. ಕೇಂದ್ರದ ಈ ನಡೆ ಅತ್ಯಂತ ಖಂಡನೀಯವಾಗಿದೆ. ಫ್ಯಾಸಿಸ್ಟರ ದುರಹಂಕಾರ ಮತ್ತು ನಿರಂಕುಶ ವರ್ತನೆಯು ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸ್ಪಷ್ಟವಾಗುತ್ತಿದೆ. ಸಂಸತ್ತಿನಲ್ಲಿ ಗಂಭೀರ ಭದ್ರತಾ ಲೋಪವನ್ನು ಪ್ರಶ್ನಿಸುವ ಜನಪ್ರತಿನಿಧಿಗಳ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ತತ್ವಗಳ ಮೇಲಿನ ಸ್ಪಷ್ಟ ದಾಳಿಯಾಗಿದೆ. ಕೇಂದ್ರ ಸರ್ಕಾರ ತನ್ನ ಅಸಹಿಷ್ಣು ಧೋರಣೆ ಕೈಬಿಟ್ಟು ಸಂಸದರ ಅಮಾನತು ಹಿಂಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಲೋಪದ ಬಗ್ಗೆ ಮಾತನಾಡಲು ಯಾಕಿಷ್ಟು ಭಯ?

ತನ್ನ ಐದು ಜನ ಸಂಸದರನ್ನು ಅಮಾನತು ಮಾಡಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿ, ‘ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ? ಸಂಸತ್ತಿನ ಮೇಲೆ ದಾಳಿಯಾಗಲು ಸಹಕರಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವುದಿರಲಿ ಕನಿಷ್ಠ ವಿಚಾರಣೆಗೂ ಒಳಪಡಿಸಲಿಲ್ಲ. ಭದ್ರತಾ ಲೋಪವನ್ನು ಚರ್ಚಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್‌ನ 5 ಸಂಸದರನ್ನು ಕಲಾಪದಿಂದ ಅಮಾನಾತು ಮಾಡಲಾಗಿದೆ. ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ. ಇದು ಬಿಜೆಪಿ ಪ್ರಾಯೋಜಿತ ಘಟನೆಯೇ’ ಎಂದು ಪ್ರಶ್ನಿಸಿದೆ.

ಒಬ್ರಿಯಾನ್ ಮೌನ ಪ್ರತಿಭಟನೆ:

ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ನಿನ್ನೆ ಟೀಕಿಸಿದ್ದರು.

ಕಣ್ತಪ್ಪಿನಿಂದ ಪಾರ್ಥಿಬನ್ ಹೆಸರು ಸೇರ್ಪಡೆ!

ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಗುರುವಾರ ನಡೆದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಂಡ 14 ಪ್ರತಿಪಕ್ಷಗಳ ಸಂಸದರಲ್ಲಿ ಡಿಎಂಕೆ ನಾಯಕ ಎಸ್‌ಆರ್ ಪಾರ್ಥಿಬನ್ ಅವರ ಹೆಸರೂ ಸೇರಿದೆ. ಪಾರ್ಥಿಬನ್ ಅವರ ಹೆಸರು ಕಣ್ತಪ್ಪಿನಿಂದ ಸೇರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ’13 ಜನ ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಅಮಾನತುಗೊಂಡ ಸಂಸದರ ಪೈಕಿ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಇರಲಿಲ್ಲ (ಅವರು ಚೆನ್ನೈನಲ್ಲಿದ್ದಾರೆ) ಎಂದು ಉಳಿದ ಸಂಸದರು ದೂರಿದ್ದರು. ‘ಒಬ್ಬ ಸಂಸದರ ಹೆಸರನ್ನು ಕಣ್ತಪ್ಪಿನಿಂದ ಗುರುತಿಸಲಾಗಿದೆ. ತಪ್ಪಾಗಿ ನಮೂದಿಸಿರುವ ಸಂಸದರ ಹೆಸರನ್ನು ತೆಗೆದುಹಾಕುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿದ್ದು, ಸಭಾಧ್ಯಕ್ಷರು ಮನವಿ ಸ್ವೀಕರಿಸಿದರು’ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಅಮಿತ್ ಶಾ ಉತ್ತರಕ್ಕೆ ಸಂಸದರ ಆಗ್ರಹ:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದರು. ಆಗ ಸದನದಲ್ಲಿ ತೀವ್ರ ಗದ್ದಲ ಉಂಟಾಗಿದೆ.

ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...