Homeಮುಖಪುಟಶುಭಕರನ್ ಸಿಂಗ್ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಯುವ ರೈತನ ಸಾವಿಗೆ ಕಾರಣ ಬಯಲು

ಶುಭಕರನ್ ಸಿಂಗ್ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಯುವ ರೈತನ ಸಾವಿಗೆ ಕಾರಣ ಬಯಲು

- Advertisement -
- Advertisement -

ದೆಹಲಿ ಚಲೋ ಪ್ರತಿಭಟನೆಯ ವೇಳೆ ಖಾನುರಿ ಗಡಿಯಲ್ಲಿ ರೈತರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ 22 ವರ್ಷದ ಯುವ ರೈತ ಶುಭಕರನ್ ಸಿಂಗ್ ಮೃತಪಟ್ಟಿದ್ದ. ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್‌ ಕಾರಣ ಎಂದು ರೈತರು ಆರೋಪಿಸಿದ್ದರು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅಸಲಿಯತ್ತು ಬಯಲಾಗಿದೆ.

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಶುಭಕರನ್ ಸಿಂಗ್ ತಲೆಯ ಹಿಂಭಾಗಕ್ಕೆ ಉಂಟಾದ ಬಂದೂಕಿನ ಗಾಯದಿಂದ ಮೃತಪಟ್ಟಿದ್ದಾರೆ ಎಂಬುವುದನ್ನು ಬಹಿರಂಗಪಡಿಸಿದೆ.

ಪಟಿಯಾಲ ಆಸ್ಪತ್ರೆ ನೀಡಿದ ವೈದ್ಯಕೀಯ ವರದಿಗಳ ಆಯ್ದ ಭಾಗಗಳನ್ನು ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ಉಲ್ಲೇಖಿಸಿದ್ದು, ಶುಭಕರನ್ ಸಿಂಗ್ ಅವರ ತಲೆಬುರುಡೆಯಲ್ಲಿ ಕಂಡುಬಂದ ಇದೇ ರೀತಿಯ ಲೋಹದ ಗುಂಡುಗಳು ಘರ್ಷಣೆಯ ಸಮಯದಲ್ಲಿ ಗಾಯಗೊಂಡ ಇತರ ಪ್ರತಿಭಟನಾಕಾರರ ದೇಹದಲ್ಲಿಯೂ ಕಂಡು ಬಂದಿದೆ. ಶುಭಕರನ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಮೊದಲು CT ಸ್ಕ್ಯಾನ್ ನಡೆಸಲಾಯಿತು, ಲೋಹದ ಗುಂಡುಗಳು ಅವನ ತಲೆಬುರುಡೆಯ ಹಿಂಭಾಗಕ್ಕೆ ಚುಚ್ಚಲ್ಪಟ್ಟಿದೆ ಎಂದು ಹೇಳಿದೆ.

ಸಿಟಿ ಸ್ಕ್ಯಾನ್ ಮತ್ತು ಶವಪರೀಕ್ಷೆ ನಡೆಸಿದ ವೈದ್ಯರು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದಾರೆ. ಆದರೆ ವರದಿಗಳನ್ನು ಪಟಿಯಾಲಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಲೋಹದ ಗುಂಡುಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಮತ್ತು ಯಾವ ಬಂದೂಕನ್ನು ಬಳಸಲಾಗಿದೆ ಎಂಬುವುದನ್ನು ಪರಿಶೀಲಿಸಲು ಬ್ಯಾಲಿಸ್ಟಿಕ್ ತಜ್ಞರಿಗೆ ಅದನ್ನು ಕಳುಹಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಆದರೆ ಪೊಲೀಸರು ಈ ಬಗೆಗಿನ ವರದಿಯನ್ನು ನಿರಾಕರಿಸಿದ್ದಾರೆ. ಹರಿಯಾಣದ ಗರ್ಹಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುರೇಶ್ ಕುಮಾರ್ ‘ನಮಗೆ ಯಾವುದೇ ಮರಣೋತ್ತರ ಪರೀಕ್ಷೆಯ ವರದಿ ಬಂದಿಲ್ಲ’ ಎಂದು ಹೇಳಿ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ನಾವು ಬೆಳವಣಿಗೆಯ ಬಗ್ಗೆ ತಿಳಿದಿದ್ದೇವೆ ಆದರೆ ಔಪಚಾರಿಕ ವರದಿಯನ್ನು ಸ್ವೀಕರಿಸಿಲ್ಲ. ನಾವು ವಿಷಯವನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೆಸರು ಹೇಳಲಿಚ್ಛಿಸದ ಹರ್ಯಾಣದ ಇನ್ನೊಬ್ಬ ಪೋಲೀಸ್ ಅಧಿಕಾರಿ ಹೇಳಿದ್ದಾರೆ.

ಪಟಿಯಾಲದ ಪತ್ರಾನ್ ಪೊಲೀಸ್ ಠಾಣೆಯು ಈ ವಿಷಯದಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಶುಭಕರನ್ ಸಿಂಗ್ ಅವರ ಕುಟುಂಬವು ಫೆಬ್ರವರಿ 28ರ ಬುಧವಾರದಂದು ಅವರ ಮೃತದೇಹದ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡಿದೆ. ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಶುಭಕರನ್ ಸಿಂಗ್ ಅವರ ಮೃತದೇಹವನ್ನು ಫೆಬ್ರವರಿ 21ರಂದು ರಾಜೀಂದ್ರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದರು. ಗುರುವಾರ ಶುಭಕರನ್ ತಂದೆಯ ದೂರಿನ ಮೇರೆಗೆ ಪಂಜಾಬ್ ಪೊಲೀಸರು ದಾಖಲಿಸಿದ ಎಫ್‌ಐಆರ್‌ನ ಪ್ರಕಾರ, ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆ) ಮತ್ತು 114ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶುಭಕರನ್ ಸಿಂಗ್ ಸಾವಿನ ಬೆನಲ್ಲಿ ಮುಖ್ಯಮಂತ್ರಿಗಳು ಅವರ ಕುಟುಂಬಕ್ಕೆ 1 ಕೋಟಿ ಪರಿಹಾರ ಮತ್ತು ಕುಟುಂಬದ ಬೇಡಿಕೆಯಂತೆ ಅವರ ಸಹೋದರಿಗೆ ಪೊಲೀಸ್ ಕಾನ್ಸ್‌ಟೇಬಲ್ ಉದ್ಯೋಗವನ್ನು ಘೋಷಿಸಿದ್ದಾರೆ. ನಾವು ಅವರ ಕುಟುಂಬಕ್ಕೆ ಬೆಂಬಲ ನೀಡುತ್ತೇವೆ ಮತ್ತು ಅವರಿಗೆ ಬೇಕಿದ್ದ ಎಲ್ಲಾ ಸಹಕಾರವನ್ನು ನೀಡುತ್ತೇವೆ ಎಂದು ಇನ್ಸ್‌ಪೆಕ್ಟರ್ ಜನರಲ್ ಸುಖಚೈನ್ ಸಿಂಗ್ ಗಿಲ್ ಗುರುವಾರ ಹೇಳಿದ್ದಾರೆ.

ಇದನ್ನು ಓದಿ: ಹಿಮಾಚಲ ಪ್ರದೇಶ ರಾಜಕೀಯ ಬಿಕ್ಕಟ್ಟು: ಅನರ್ಹತೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಕಾಂಗ್ರೆಸ್ ಬಂಡಾಯ ಶಾಸಕರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...