Homeಮುಖಪುಟಶುಭಕರನ್ ಸಿಂಗ್ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಯುವ ರೈತನ ಸಾವಿಗೆ ಕಾರಣ ಬಯಲು

ಶುಭಕರನ್ ಸಿಂಗ್ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಯುವ ರೈತನ ಸಾವಿಗೆ ಕಾರಣ ಬಯಲು

- Advertisement -
- Advertisement -

ದೆಹಲಿ ಚಲೋ ಪ್ರತಿಭಟನೆಯ ವೇಳೆ ಖಾನುರಿ ಗಡಿಯಲ್ಲಿ ರೈತರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ 22 ವರ್ಷದ ಯುವ ರೈತ ಶುಭಕರನ್ ಸಿಂಗ್ ಮೃತಪಟ್ಟಿದ್ದ. ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್‌ ಕಾರಣ ಎಂದು ರೈತರು ಆರೋಪಿಸಿದ್ದರು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅಸಲಿಯತ್ತು ಬಯಲಾಗಿದೆ.

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಶುಭಕರನ್ ಸಿಂಗ್ ತಲೆಯ ಹಿಂಭಾಗಕ್ಕೆ ಉಂಟಾದ ಬಂದೂಕಿನ ಗಾಯದಿಂದ ಮೃತಪಟ್ಟಿದ್ದಾರೆ ಎಂಬುವುದನ್ನು ಬಹಿರಂಗಪಡಿಸಿದೆ.

ಪಟಿಯಾಲ ಆಸ್ಪತ್ರೆ ನೀಡಿದ ವೈದ್ಯಕೀಯ ವರದಿಗಳ ಆಯ್ದ ಭಾಗಗಳನ್ನು ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ಉಲ್ಲೇಖಿಸಿದ್ದು, ಶುಭಕರನ್ ಸಿಂಗ್ ಅವರ ತಲೆಬುರುಡೆಯಲ್ಲಿ ಕಂಡುಬಂದ ಇದೇ ರೀತಿಯ ಲೋಹದ ಗುಂಡುಗಳು ಘರ್ಷಣೆಯ ಸಮಯದಲ್ಲಿ ಗಾಯಗೊಂಡ ಇತರ ಪ್ರತಿಭಟನಾಕಾರರ ದೇಹದಲ್ಲಿಯೂ ಕಂಡು ಬಂದಿದೆ. ಶುಭಕರನ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಮೊದಲು CT ಸ್ಕ್ಯಾನ್ ನಡೆಸಲಾಯಿತು, ಲೋಹದ ಗುಂಡುಗಳು ಅವನ ತಲೆಬುರುಡೆಯ ಹಿಂಭಾಗಕ್ಕೆ ಚುಚ್ಚಲ್ಪಟ್ಟಿದೆ ಎಂದು ಹೇಳಿದೆ.

ಸಿಟಿ ಸ್ಕ್ಯಾನ್ ಮತ್ತು ಶವಪರೀಕ್ಷೆ ನಡೆಸಿದ ವೈದ್ಯರು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದಾರೆ. ಆದರೆ ವರದಿಗಳನ್ನು ಪಟಿಯಾಲಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಲೋಹದ ಗುಂಡುಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಮತ್ತು ಯಾವ ಬಂದೂಕನ್ನು ಬಳಸಲಾಗಿದೆ ಎಂಬುವುದನ್ನು ಪರಿಶೀಲಿಸಲು ಬ್ಯಾಲಿಸ್ಟಿಕ್ ತಜ್ಞರಿಗೆ ಅದನ್ನು ಕಳುಹಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಆದರೆ ಪೊಲೀಸರು ಈ ಬಗೆಗಿನ ವರದಿಯನ್ನು ನಿರಾಕರಿಸಿದ್ದಾರೆ. ಹರಿಯಾಣದ ಗರ್ಹಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುರೇಶ್ ಕುಮಾರ್ ‘ನಮಗೆ ಯಾವುದೇ ಮರಣೋತ್ತರ ಪರೀಕ್ಷೆಯ ವರದಿ ಬಂದಿಲ್ಲ’ ಎಂದು ಹೇಳಿ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ನಾವು ಬೆಳವಣಿಗೆಯ ಬಗ್ಗೆ ತಿಳಿದಿದ್ದೇವೆ ಆದರೆ ಔಪಚಾರಿಕ ವರದಿಯನ್ನು ಸ್ವೀಕರಿಸಿಲ್ಲ. ನಾವು ವಿಷಯವನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೆಸರು ಹೇಳಲಿಚ್ಛಿಸದ ಹರ್ಯಾಣದ ಇನ್ನೊಬ್ಬ ಪೋಲೀಸ್ ಅಧಿಕಾರಿ ಹೇಳಿದ್ದಾರೆ.

ಪಟಿಯಾಲದ ಪತ್ರಾನ್ ಪೊಲೀಸ್ ಠಾಣೆಯು ಈ ವಿಷಯದಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಶುಭಕರನ್ ಸಿಂಗ್ ಅವರ ಕುಟುಂಬವು ಫೆಬ್ರವರಿ 28ರ ಬುಧವಾರದಂದು ಅವರ ಮೃತದೇಹದ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡಿದೆ. ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಶುಭಕರನ್ ಸಿಂಗ್ ಅವರ ಮೃತದೇಹವನ್ನು ಫೆಬ್ರವರಿ 21ರಂದು ರಾಜೀಂದ್ರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದರು. ಗುರುವಾರ ಶುಭಕರನ್ ತಂದೆಯ ದೂರಿನ ಮೇರೆಗೆ ಪಂಜಾಬ್ ಪೊಲೀಸರು ದಾಖಲಿಸಿದ ಎಫ್‌ಐಆರ್‌ನ ಪ್ರಕಾರ, ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆ) ಮತ್ತು 114ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶುಭಕರನ್ ಸಿಂಗ್ ಸಾವಿನ ಬೆನಲ್ಲಿ ಮುಖ್ಯಮಂತ್ರಿಗಳು ಅವರ ಕುಟುಂಬಕ್ಕೆ 1 ಕೋಟಿ ಪರಿಹಾರ ಮತ್ತು ಕುಟುಂಬದ ಬೇಡಿಕೆಯಂತೆ ಅವರ ಸಹೋದರಿಗೆ ಪೊಲೀಸ್ ಕಾನ್ಸ್‌ಟೇಬಲ್ ಉದ್ಯೋಗವನ್ನು ಘೋಷಿಸಿದ್ದಾರೆ. ನಾವು ಅವರ ಕುಟುಂಬಕ್ಕೆ ಬೆಂಬಲ ನೀಡುತ್ತೇವೆ ಮತ್ತು ಅವರಿಗೆ ಬೇಕಿದ್ದ ಎಲ್ಲಾ ಸಹಕಾರವನ್ನು ನೀಡುತ್ತೇವೆ ಎಂದು ಇನ್ಸ್‌ಪೆಕ್ಟರ್ ಜನರಲ್ ಸುಖಚೈನ್ ಸಿಂಗ್ ಗಿಲ್ ಗುರುವಾರ ಹೇಳಿದ್ದಾರೆ.

ಇದನ್ನು ಓದಿ: ಹಿಮಾಚಲ ಪ್ರದೇಶ ರಾಜಕೀಯ ಬಿಕ್ಕಟ್ಟು: ಅನರ್ಹತೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಕಾಂಗ್ರೆಸ್ ಬಂಡಾಯ ಶಾಸಕರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...