Homeಮುಖಪುಟಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

ಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

- Advertisement -
- Advertisement -

ಮುಂಬೈ-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹಿರಿಯ ಅಧಿಕಾರಿ ಮತ್ತು ಮೂವರು ಮುಸ್ಲಿಂ ಪ್ರಯಾಣಿಕರನ್ನು ಹತ್ಯೆ ಮಾಡಿದ್ದ ಆರ್ ಪಿಎಫ್ ಪೇದೆ ಚೇತನ್ ಸಿಂಗ್  ಚೌದರಿ ಈ  ಹಿಂದೆಯೂ ಮುಸ್ಲಿಂ ಆಟೋ ಚಾಲಕನಿಗೆ ಹಲ್ಲೆ ನಡೆಸಿ ದುರ್ವರ್ತನೆ ತೋರಿದ್ದ ಎನ್ನುವುದು ಪೊಲೀಸ್ ತನಿಖೆಯ ಹಂತದಲ್ಲಿ ಬಯಲಾಗಿದೆ.ಈ ವೇಳೆ ಆತನ ಮೇಲಾಧಿಕಾರಿ ಆತನಿಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಉಜ್ಜೈನಿಯ 45 ವರ್ಷದ ವಹೀದ್ ಖಾನ್ ಎಂಬ ಆಟೋ ಡ್ರೈವರ್ ನನ್ನ ಮೇಲೆ 2017ರಲ್ಲಿ ಚೇತನ್ ಸಿಂಗ್  ಚೌದರಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದ ಎಂದು ಹೇಳಿದ್ದಾರೆ.

ಇವರು ನನಗೆ ಕಿರುಕುಳ ನೀಡುತ್ತಿದ್ದರು ಮತ್ತು ಒಂದು ದಿನ ನನ್ನನ್ನು ಬಂಧಿಸಿ  ನನ್ನನ್ನು ಭಯೋತ್ಪಾದಕ ಎಂದು ಕರೆದರು. ಇದರಿಂದಾಗಿ ನನ್ನ ಕುಟುಂಬ ಅವನಿಗೆ ಹೆದರುತ್ತಿತ್ತು.ನನ್ನನ್ನು  ಚೌದರಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತಾನೆ ಎಂಬ ಭಯ ಅವರಿಗೆ ಇತ್ತು. ನನಗೆ ಜೀವ ಭಯ ಇದ್ದ ಕಾರಣ ಆತನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೆ ಎಂದು ಖಾನ್  ಹೇಳಿದ್ದಾರೆ.

ಫೆಬ್ರವರಿ 18, 2017ರಂದು ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂಎಲ್ ಮೀನಾ ಎಂಬವರು ಕನ್ನಡಕ ಬಿಟ್ಟು ಬಂದ ಕಾರಣ ಖಾನ್ ಅವರಿಗೆ ಕರೆ ಮಾಡಿ ಕನ್ನಡಕ ತರುವಂತೆ ಕೇಳಿದ್ದರು.  ಅದರಂತೆ ಖಾನ್ ಕನ್ನಡಕವನ್ನು ನೀಡಲು ಹೋದಾಗ, ಚೌಧರಿ ಅವರನ್ನು ಹಿಡಿದು ಪ್ಲಾಟ್‌ಫಾರ್ಮ್ ಟಿಕೆಟ್ ತೆಗೆದುಕೊಂಡು ಹೋಗಲಿಲ್ಲ ಎಂಬ ಆರೋಪದಲ್ಲಿ 270 ರೂಪಾಯಿ ದಂಡ ವಿಧಿಸಲು ಪ್ರಯತ್ನಿಸಿದರು. ಬಳಿಕ ಸ್ಥಳೀಯ ಎಸ್‌ಎಚ್‌ಒ ಮಧ್ಯಪ್ರವೇಶಿಸಿದ ನಂತರ ಅವರು ಅಲ್ಲಿಂದ ತೆರಳಿದ್ದರು.

ಫೆಬ್ರವರಿ 19 ರಂದು, ಚೌಧರಿ ಅವರು ಮತ್ತೆ ರೈಲ್ವೆ ನಿಲ್ದಾಣದ ಸರಕುಗಳ ಗೋದಾಮಿನ ಬಳಿ ಖಾನ್ ಅವರನ್ನು ಹಿಡಿದರು ಮತ್ತು ಅವರನ್ನು ಮತ್ತೆ ನಿಂದಿಸಿದರು ಮತ್ತು “ನಿಮ್ಮನ್ನು ಈಗ ಯಾರು ರಕ್ಷಿಸುತ್ತಾರೆಂದು ನೋಡೋಣ” ಎಂದಿದ್ದಾರೆ  ಎಂದು ಹೇಳಿದ್ದಾರೆ.

ಚೌಧರಿ ಅವರನ್ನು ಈ ಬಗ್ಗೆ ಆರ್‌ಪಿಎಫ್ ಪ್ರಶ್ನಿಸಿದಾಗ,  ನನ್ನ ಮೇಲೆ ಮಾನಸಿಕ ಒತ್ತಡವನ್ನು ಸೃಷ್ಟಿಸಲು ಸುಳ್ಳು ದೂರು ದಾಖಲಿಸಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.

ನಾನು ನನ್ನ ವೈಯಕ್ತಿಕ ಕೆಲಸಕ್ಕಾಗಿ ವಾಹಿದ್ ಖಾನ್ ಅವರ ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದಿಲ್ಲ, ಅಥವಾ ನಾನು ಅವನನ್ನು ಮೊದಲು ತಿಳಿದಿರಲಿಲ್ಲ, ಅಥವಾ ನಾನು ಅವನನ್ನು ಯಾವುದೇ ರೀತಿಯಲ್ಲಿ ನಿಂದಿಸಿಲ್ಲ ಅಥವಾ ಬೆದರಿಕೆ ಹಾಕಿಲ್ಲ ಎಂದು ಕಾನ್‌ಸ್ಟೆಬಲ್ ಹೇಳಿದರು.

ಫೆಬ್ರವರಿ 18 ರಂದು ಸಂಜೆ 5:30 ರ ಸುಮಾರಿಗೆ ಪ್ಲಾಟ್‌ಫಾರ್ಮ್ ನಂಬರ್ 1 ರಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಿಂತಿರುವುದನ್ನು ಕಂಡಿದ್ದೇನೆ ಎಂದು ಚೌಧರಿ ಹೇಳಿದರು. ನಾನು ಏನು ಮಾಡುತ್ತಿದ್ದೀರಿ ಎಂದು ನಾನು ಅವರನ್ನು ಕೇಳಿದಾಗ, ಆಟೋ ಚಾಲಕನಾಗಿದ್ದ ಆ ವ್ಯಕ್ತಿ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟುಮಾಡುವಂತೆ ಕೂಗಲು ಪ್ರಾರಂಭಿಸಿದರು.ಹಾಗಾಗಿ ಆತನನ್ನು ಠಾಣೆಗೆ ಕರೆತಂದಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಬ್-ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಯಾದವ್, ಚೌಧರಿ, ಖಾನ್ ಅವರನ್ನು ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಚೌದರಿ ಯುನಿಫಾರ್ಮ್ ನಲ್ಲಿ ಇರಲಿಲ್ಲ. ಒಂದು ವೇಳೆ ಖಾನ್ ಕೆಟ್ಟದಾಗಿ ವರ್ತಿಸಿದರೆ ಆತನ ಮೆಲೆ ಕಾನೂನಿನ ಪ್ರಕರ ದೂರು ನೀಡಬೇಕೆಂದು  ಸೂಚಿಸಿದ್ದೆ ಎಂದು ಹೇಳಿದ್ದಾರೆ. ಇದಲ್ಲದೆ ಕರ್ತವ್ಯದ ಸಮಯದಲ್ಲಿ ಯುನಿಫಾರ್ಮ್ ಧರಿಸಬೇಕು ಮತ್ತು ಯಾರ ಜೊತೆಯು ಕಾನೂನು ಬಾಹಿರವಾಗಿ ವರ್ತಿಸಬಾರದು ಎಂದು ಹೇಳಿರುವುದಾಗಿ  ಅವರು ತಿಳಿಸಿದ್ದಾರೆ.

ಇದನ್ನು ಓದಿ: ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೆಲವರು NCP ತೊರೆದರು: ಶರದ್ ಪವಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...