Homeಮುಖಪುಟಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

ಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

- Advertisement -
- Advertisement -

ಮುಂಬೈ-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹಿರಿಯ ಅಧಿಕಾರಿ ಮತ್ತು ಮೂವರು ಮುಸ್ಲಿಂ ಪ್ರಯಾಣಿಕರನ್ನು ಹತ್ಯೆ ಮಾಡಿದ್ದ ಆರ್ ಪಿಎಫ್ ಪೇದೆ ಚೇತನ್ ಸಿಂಗ್  ಚೌದರಿ ಈ  ಹಿಂದೆಯೂ ಮುಸ್ಲಿಂ ಆಟೋ ಚಾಲಕನಿಗೆ ಹಲ್ಲೆ ನಡೆಸಿ ದುರ್ವರ್ತನೆ ತೋರಿದ್ದ ಎನ್ನುವುದು ಪೊಲೀಸ್ ತನಿಖೆಯ ಹಂತದಲ್ಲಿ ಬಯಲಾಗಿದೆ.ಈ ವೇಳೆ ಆತನ ಮೇಲಾಧಿಕಾರಿ ಆತನಿಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಉಜ್ಜೈನಿಯ 45 ವರ್ಷದ ವಹೀದ್ ಖಾನ್ ಎಂಬ ಆಟೋ ಡ್ರೈವರ್ ನನ್ನ ಮೇಲೆ 2017ರಲ್ಲಿ ಚೇತನ್ ಸಿಂಗ್  ಚೌದರಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದ ಎಂದು ಹೇಳಿದ್ದಾರೆ.

ಇವರು ನನಗೆ ಕಿರುಕುಳ ನೀಡುತ್ತಿದ್ದರು ಮತ್ತು ಒಂದು ದಿನ ನನ್ನನ್ನು ಬಂಧಿಸಿ  ನನ್ನನ್ನು ಭಯೋತ್ಪಾದಕ ಎಂದು ಕರೆದರು. ಇದರಿಂದಾಗಿ ನನ್ನ ಕುಟುಂಬ ಅವನಿಗೆ ಹೆದರುತ್ತಿತ್ತು.ನನ್ನನ್ನು  ಚೌದರಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತಾನೆ ಎಂಬ ಭಯ ಅವರಿಗೆ ಇತ್ತು. ನನಗೆ ಜೀವ ಭಯ ಇದ್ದ ಕಾರಣ ಆತನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೆ ಎಂದು ಖಾನ್  ಹೇಳಿದ್ದಾರೆ.

ಫೆಬ್ರವರಿ 18, 2017ರಂದು ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂಎಲ್ ಮೀನಾ ಎಂಬವರು ಕನ್ನಡಕ ಬಿಟ್ಟು ಬಂದ ಕಾರಣ ಖಾನ್ ಅವರಿಗೆ ಕರೆ ಮಾಡಿ ಕನ್ನಡಕ ತರುವಂತೆ ಕೇಳಿದ್ದರು.  ಅದರಂತೆ ಖಾನ್ ಕನ್ನಡಕವನ್ನು ನೀಡಲು ಹೋದಾಗ, ಚೌಧರಿ ಅವರನ್ನು ಹಿಡಿದು ಪ್ಲಾಟ್‌ಫಾರ್ಮ್ ಟಿಕೆಟ್ ತೆಗೆದುಕೊಂಡು ಹೋಗಲಿಲ್ಲ ಎಂಬ ಆರೋಪದಲ್ಲಿ 270 ರೂಪಾಯಿ ದಂಡ ವಿಧಿಸಲು ಪ್ರಯತ್ನಿಸಿದರು. ಬಳಿಕ ಸ್ಥಳೀಯ ಎಸ್‌ಎಚ್‌ಒ ಮಧ್ಯಪ್ರವೇಶಿಸಿದ ನಂತರ ಅವರು ಅಲ್ಲಿಂದ ತೆರಳಿದ್ದರು.

ಫೆಬ್ರವರಿ 19 ರಂದು, ಚೌಧರಿ ಅವರು ಮತ್ತೆ ರೈಲ್ವೆ ನಿಲ್ದಾಣದ ಸರಕುಗಳ ಗೋದಾಮಿನ ಬಳಿ ಖಾನ್ ಅವರನ್ನು ಹಿಡಿದರು ಮತ್ತು ಅವರನ್ನು ಮತ್ತೆ ನಿಂದಿಸಿದರು ಮತ್ತು “ನಿಮ್ಮನ್ನು ಈಗ ಯಾರು ರಕ್ಷಿಸುತ್ತಾರೆಂದು ನೋಡೋಣ” ಎಂದಿದ್ದಾರೆ  ಎಂದು ಹೇಳಿದ್ದಾರೆ.

ಚೌಧರಿ ಅವರನ್ನು ಈ ಬಗ್ಗೆ ಆರ್‌ಪಿಎಫ್ ಪ್ರಶ್ನಿಸಿದಾಗ,  ನನ್ನ ಮೇಲೆ ಮಾನಸಿಕ ಒತ್ತಡವನ್ನು ಸೃಷ್ಟಿಸಲು ಸುಳ್ಳು ದೂರು ದಾಖಲಿಸಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.

ನಾನು ನನ್ನ ವೈಯಕ್ತಿಕ ಕೆಲಸಕ್ಕಾಗಿ ವಾಹಿದ್ ಖಾನ್ ಅವರ ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದಿಲ್ಲ, ಅಥವಾ ನಾನು ಅವನನ್ನು ಮೊದಲು ತಿಳಿದಿರಲಿಲ್ಲ, ಅಥವಾ ನಾನು ಅವನನ್ನು ಯಾವುದೇ ರೀತಿಯಲ್ಲಿ ನಿಂದಿಸಿಲ್ಲ ಅಥವಾ ಬೆದರಿಕೆ ಹಾಕಿಲ್ಲ ಎಂದು ಕಾನ್‌ಸ್ಟೆಬಲ್ ಹೇಳಿದರು.

ಫೆಬ್ರವರಿ 18 ರಂದು ಸಂಜೆ 5:30 ರ ಸುಮಾರಿಗೆ ಪ್ಲಾಟ್‌ಫಾರ್ಮ್ ನಂಬರ್ 1 ರಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಿಂತಿರುವುದನ್ನು ಕಂಡಿದ್ದೇನೆ ಎಂದು ಚೌಧರಿ ಹೇಳಿದರು. ನಾನು ಏನು ಮಾಡುತ್ತಿದ್ದೀರಿ ಎಂದು ನಾನು ಅವರನ್ನು ಕೇಳಿದಾಗ, ಆಟೋ ಚಾಲಕನಾಗಿದ್ದ ಆ ವ್ಯಕ್ತಿ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟುಮಾಡುವಂತೆ ಕೂಗಲು ಪ್ರಾರಂಭಿಸಿದರು.ಹಾಗಾಗಿ ಆತನನ್ನು ಠಾಣೆಗೆ ಕರೆತಂದಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಬ್-ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಯಾದವ್, ಚೌಧರಿ, ಖಾನ್ ಅವರನ್ನು ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಚೌದರಿ ಯುನಿಫಾರ್ಮ್ ನಲ್ಲಿ ಇರಲಿಲ್ಲ. ಒಂದು ವೇಳೆ ಖಾನ್ ಕೆಟ್ಟದಾಗಿ ವರ್ತಿಸಿದರೆ ಆತನ ಮೆಲೆ ಕಾನೂನಿನ ಪ್ರಕರ ದೂರು ನೀಡಬೇಕೆಂದು  ಸೂಚಿಸಿದ್ದೆ ಎಂದು ಹೇಳಿದ್ದಾರೆ. ಇದಲ್ಲದೆ ಕರ್ತವ್ಯದ ಸಮಯದಲ್ಲಿ ಯುನಿಫಾರ್ಮ್ ಧರಿಸಬೇಕು ಮತ್ತು ಯಾರ ಜೊತೆಯು ಕಾನೂನು ಬಾಹಿರವಾಗಿ ವರ್ತಿಸಬಾರದು ಎಂದು ಹೇಳಿರುವುದಾಗಿ  ಅವರು ತಿಳಿಸಿದ್ದಾರೆ.

ಇದನ್ನು ಓದಿ: ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೆಲವರು NCP ತೊರೆದರು: ಶರದ್ ಪವಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...