Homeಮುಖಪುಟಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

ಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

- Advertisement -
- Advertisement -

ಮುಂಬೈ-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹಿರಿಯ ಅಧಿಕಾರಿ ಮತ್ತು ಮೂವರು ಮುಸ್ಲಿಂ ಪ್ರಯಾಣಿಕರನ್ನು ಹತ್ಯೆ ಮಾಡಿದ್ದ ಆರ್ ಪಿಎಫ್ ಪೇದೆ ಚೇತನ್ ಸಿಂಗ್  ಚೌದರಿ ಈ  ಹಿಂದೆಯೂ ಮುಸ್ಲಿಂ ಆಟೋ ಚಾಲಕನಿಗೆ ಹಲ್ಲೆ ನಡೆಸಿ ದುರ್ವರ್ತನೆ ತೋರಿದ್ದ ಎನ್ನುವುದು ಪೊಲೀಸ್ ತನಿಖೆಯ ಹಂತದಲ್ಲಿ ಬಯಲಾಗಿದೆ.ಈ ವೇಳೆ ಆತನ ಮೇಲಾಧಿಕಾರಿ ಆತನಿಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಉಜ್ಜೈನಿಯ 45 ವರ್ಷದ ವಹೀದ್ ಖಾನ್ ಎಂಬ ಆಟೋ ಡ್ರೈವರ್ ನನ್ನ ಮೇಲೆ 2017ರಲ್ಲಿ ಚೇತನ್ ಸಿಂಗ್  ಚೌದರಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದ ಎಂದು ಹೇಳಿದ್ದಾರೆ.

ಇವರು ನನಗೆ ಕಿರುಕುಳ ನೀಡುತ್ತಿದ್ದರು ಮತ್ತು ಒಂದು ದಿನ ನನ್ನನ್ನು ಬಂಧಿಸಿ  ನನ್ನನ್ನು ಭಯೋತ್ಪಾದಕ ಎಂದು ಕರೆದರು. ಇದರಿಂದಾಗಿ ನನ್ನ ಕುಟುಂಬ ಅವನಿಗೆ ಹೆದರುತ್ತಿತ್ತು.ನನ್ನನ್ನು  ಚೌದರಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತಾನೆ ಎಂಬ ಭಯ ಅವರಿಗೆ ಇತ್ತು. ನನಗೆ ಜೀವ ಭಯ ಇದ್ದ ಕಾರಣ ಆತನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೆ ಎಂದು ಖಾನ್  ಹೇಳಿದ್ದಾರೆ.

ಫೆಬ್ರವರಿ 18, 2017ರಂದು ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂಎಲ್ ಮೀನಾ ಎಂಬವರು ಕನ್ನಡಕ ಬಿಟ್ಟು ಬಂದ ಕಾರಣ ಖಾನ್ ಅವರಿಗೆ ಕರೆ ಮಾಡಿ ಕನ್ನಡಕ ತರುವಂತೆ ಕೇಳಿದ್ದರು.  ಅದರಂತೆ ಖಾನ್ ಕನ್ನಡಕವನ್ನು ನೀಡಲು ಹೋದಾಗ, ಚೌಧರಿ ಅವರನ್ನು ಹಿಡಿದು ಪ್ಲಾಟ್‌ಫಾರ್ಮ್ ಟಿಕೆಟ್ ತೆಗೆದುಕೊಂಡು ಹೋಗಲಿಲ್ಲ ಎಂಬ ಆರೋಪದಲ್ಲಿ 270 ರೂಪಾಯಿ ದಂಡ ವಿಧಿಸಲು ಪ್ರಯತ್ನಿಸಿದರು. ಬಳಿಕ ಸ್ಥಳೀಯ ಎಸ್‌ಎಚ್‌ಒ ಮಧ್ಯಪ್ರವೇಶಿಸಿದ ನಂತರ ಅವರು ಅಲ್ಲಿಂದ ತೆರಳಿದ್ದರು.

ಫೆಬ್ರವರಿ 19 ರಂದು, ಚೌಧರಿ ಅವರು ಮತ್ತೆ ರೈಲ್ವೆ ನಿಲ್ದಾಣದ ಸರಕುಗಳ ಗೋದಾಮಿನ ಬಳಿ ಖಾನ್ ಅವರನ್ನು ಹಿಡಿದರು ಮತ್ತು ಅವರನ್ನು ಮತ್ತೆ ನಿಂದಿಸಿದರು ಮತ್ತು “ನಿಮ್ಮನ್ನು ಈಗ ಯಾರು ರಕ್ಷಿಸುತ್ತಾರೆಂದು ನೋಡೋಣ” ಎಂದಿದ್ದಾರೆ  ಎಂದು ಹೇಳಿದ್ದಾರೆ.

ಚೌಧರಿ ಅವರನ್ನು ಈ ಬಗ್ಗೆ ಆರ್‌ಪಿಎಫ್ ಪ್ರಶ್ನಿಸಿದಾಗ,  ನನ್ನ ಮೇಲೆ ಮಾನಸಿಕ ಒತ್ತಡವನ್ನು ಸೃಷ್ಟಿಸಲು ಸುಳ್ಳು ದೂರು ದಾಖಲಿಸಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.

ನಾನು ನನ್ನ ವೈಯಕ್ತಿಕ ಕೆಲಸಕ್ಕಾಗಿ ವಾಹಿದ್ ಖಾನ್ ಅವರ ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದಿಲ್ಲ, ಅಥವಾ ನಾನು ಅವನನ್ನು ಮೊದಲು ತಿಳಿದಿರಲಿಲ್ಲ, ಅಥವಾ ನಾನು ಅವನನ್ನು ಯಾವುದೇ ರೀತಿಯಲ್ಲಿ ನಿಂದಿಸಿಲ್ಲ ಅಥವಾ ಬೆದರಿಕೆ ಹಾಕಿಲ್ಲ ಎಂದು ಕಾನ್‌ಸ್ಟೆಬಲ್ ಹೇಳಿದರು.

ಫೆಬ್ರವರಿ 18 ರಂದು ಸಂಜೆ 5:30 ರ ಸುಮಾರಿಗೆ ಪ್ಲಾಟ್‌ಫಾರ್ಮ್ ನಂಬರ್ 1 ರಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಿಂತಿರುವುದನ್ನು ಕಂಡಿದ್ದೇನೆ ಎಂದು ಚೌಧರಿ ಹೇಳಿದರು. ನಾನು ಏನು ಮಾಡುತ್ತಿದ್ದೀರಿ ಎಂದು ನಾನು ಅವರನ್ನು ಕೇಳಿದಾಗ, ಆಟೋ ಚಾಲಕನಾಗಿದ್ದ ಆ ವ್ಯಕ್ತಿ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟುಮಾಡುವಂತೆ ಕೂಗಲು ಪ್ರಾರಂಭಿಸಿದರು.ಹಾಗಾಗಿ ಆತನನ್ನು ಠಾಣೆಗೆ ಕರೆತಂದಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಬ್-ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಯಾದವ್, ಚೌಧರಿ, ಖಾನ್ ಅವರನ್ನು ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಚೌದರಿ ಯುನಿಫಾರ್ಮ್ ನಲ್ಲಿ ಇರಲಿಲ್ಲ. ಒಂದು ವೇಳೆ ಖಾನ್ ಕೆಟ್ಟದಾಗಿ ವರ್ತಿಸಿದರೆ ಆತನ ಮೆಲೆ ಕಾನೂನಿನ ಪ್ರಕರ ದೂರು ನೀಡಬೇಕೆಂದು  ಸೂಚಿಸಿದ್ದೆ ಎಂದು ಹೇಳಿದ್ದಾರೆ. ಇದಲ್ಲದೆ ಕರ್ತವ್ಯದ ಸಮಯದಲ್ಲಿ ಯುನಿಫಾರ್ಮ್ ಧರಿಸಬೇಕು ಮತ್ತು ಯಾರ ಜೊತೆಯು ಕಾನೂನು ಬಾಹಿರವಾಗಿ ವರ್ತಿಸಬಾರದು ಎಂದು ಹೇಳಿರುವುದಾಗಿ  ಅವರು ತಿಳಿಸಿದ್ದಾರೆ.

ಇದನ್ನು ಓದಿ: ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೆಲವರು NCP ತೊರೆದರು: ಶರದ್ ಪವಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...