Homeಮುಖಪುಟಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

ಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

- Advertisement -
- Advertisement -

ಮುಂಬೈ-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹಿರಿಯ ಅಧಿಕಾರಿ ಮತ್ತು ಮೂವರು ಮುಸ್ಲಿಂ ಪ್ರಯಾಣಿಕರನ್ನು ಹತ್ಯೆ ಮಾಡಿದ್ದ ಆರ್ ಪಿಎಫ್ ಪೇದೆ ಚೇತನ್ ಸಿಂಗ್  ಚೌದರಿ ಈ  ಹಿಂದೆಯೂ ಮುಸ್ಲಿಂ ಆಟೋ ಚಾಲಕನಿಗೆ ಹಲ್ಲೆ ನಡೆಸಿ ದುರ್ವರ್ತನೆ ತೋರಿದ್ದ ಎನ್ನುವುದು ಪೊಲೀಸ್ ತನಿಖೆಯ ಹಂತದಲ್ಲಿ ಬಯಲಾಗಿದೆ.ಈ ವೇಳೆ ಆತನ ಮೇಲಾಧಿಕಾರಿ ಆತನಿಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಉಜ್ಜೈನಿಯ 45 ವರ್ಷದ ವಹೀದ್ ಖಾನ್ ಎಂಬ ಆಟೋ ಡ್ರೈವರ್ ನನ್ನ ಮೇಲೆ 2017ರಲ್ಲಿ ಚೇತನ್ ಸಿಂಗ್  ಚೌದರಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದ ಎಂದು ಹೇಳಿದ್ದಾರೆ.

ಇವರು ನನಗೆ ಕಿರುಕುಳ ನೀಡುತ್ತಿದ್ದರು ಮತ್ತು ಒಂದು ದಿನ ನನ್ನನ್ನು ಬಂಧಿಸಿ  ನನ್ನನ್ನು ಭಯೋತ್ಪಾದಕ ಎಂದು ಕರೆದರು. ಇದರಿಂದಾಗಿ ನನ್ನ ಕುಟುಂಬ ಅವನಿಗೆ ಹೆದರುತ್ತಿತ್ತು.ನನ್ನನ್ನು  ಚೌದರಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತಾನೆ ಎಂಬ ಭಯ ಅವರಿಗೆ ಇತ್ತು. ನನಗೆ ಜೀವ ಭಯ ಇದ್ದ ಕಾರಣ ಆತನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೆ ಎಂದು ಖಾನ್  ಹೇಳಿದ್ದಾರೆ.

ಫೆಬ್ರವರಿ 18, 2017ರಂದು ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂಎಲ್ ಮೀನಾ ಎಂಬವರು ಕನ್ನಡಕ ಬಿಟ್ಟು ಬಂದ ಕಾರಣ ಖಾನ್ ಅವರಿಗೆ ಕರೆ ಮಾಡಿ ಕನ್ನಡಕ ತರುವಂತೆ ಕೇಳಿದ್ದರು.  ಅದರಂತೆ ಖಾನ್ ಕನ್ನಡಕವನ್ನು ನೀಡಲು ಹೋದಾಗ, ಚೌಧರಿ ಅವರನ್ನು ಹಿಡಿದು ಪ್ಲಾಟ್‌ಫಾರ್ಮ್ ಟಿಕೆಟ್ ತೆಗೆದುಕೊಂಡು ಹೋಗಲಿಲ್ಲ ಎಂಬ ಆರೋಪದಲ್ಲಿ 270 ರೂಪಾಯಿ ದಂಡ ವಿಧಿಸಲು ಪ್ರಯತ್ನಿಸಿದರು. ಬಳಿಕ ಸ್ಥಳೀಯ ಎಸ್‌ಎಚ್‌ಒ ಮಧ್ಯಪ್ರವೇಶಿಸಿದ ನಂತರ ಅವರು ಅಲ್ಲಿಂದ ತೆರಳಿದ್ದರು.

ಫೆಬ್ರವರಿ 19 ರಂದು, ಚೌಧರಿ ಅವರು ಮತ್ತೆ ರೈಲ್ವೆ ನಿಲ್ದಾಣದ ಸರಕುಗಳ ಗೋದಾಮಿನ ಬಳಿ ಖಾನ್ ಅವರನ್ನು ಹಿಡಿದರು ಮತ್ತು ಅವರನ್ನು ಮತ್ತೆ ನಿಂದಿಸಿದರು ಮತ್ತು “ನಿಮ್ಮನ್ನು ಈಗ ಯಾರು ರಕ್ಷಿಸುತ್ತಾರೆಂದು ನೋಡೋಣ” ಎಂದಿದ್ದಾರೆ  ಎಂದು ಹೇಳಿದ್ದಾರೆ.

ಚೌಧರಿ ಅವರನ್ನು ಈ ಬಗ್ಗೆ ಆರ್‌ಪಿಎಫ್ ಪ್ರಶ್ನಿಸಿದಾಗ,  ನನ್ನ ಮೇಲೆ ಮಾನಸಿಕ ಒತ್ತಡವನ್ನು ಸೃಷ್ಟಿಸಲು ಸುಳ್ಳು ದೂರು ದಾಖಲಿಸಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.

ನಾನು ನನ್ನ ವೈಯಕ್ತಿಕ ಕೆಲಸಕ್ಕಾಗಿ ವಾಹಿದ್ ಖಾನ್ ಅವರ ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದಿಲ್ಲ, ಅಥವಾ ನಾನು ಅವನನ್ನು ಮೊದಲು ತಿಳಿದಿರಲಿಲ್ಲ, ಅಥವಾ ನಾನು ಅವನನ್ನು ಯಾವುದೇ ರೀತಿಯಲ್ಲಿ ನಿಂದಿಸಿಲ್ಲ ಅಥವಾ ಬೆದರಿಕೆ ಹಾಕಿಲ್ಲ ಎಂದು ಕಾನ್‌ಸ್ಟೆಬಲ್ ಹೇಳಿದರು.

ಫೆಬ್ರವರಿ 18 ರಂದು ಸಂಜೆ 5:30 ರ ಸುಮಾರಿಗೆ ಪ್ಲಾಟ್‌ಫಾರ್ಮ್ ನಂಬರ್ 1 ರಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಿಂತಿರುವುದನ್ನು ಕಂಡಿದ್ದೇನೆ ಎಂದು ಚೌಧರಿ ಹೇಳಿದರು. ನಾನು ಏನು ಮಾಡುತ್ತಿದ್ದೀರಿ ಎಂದು ನಾನು ಅವರನ್ನು ಕೇಳಿದಾಗ, ಆಟೋ ಚಾಲಕನಾಗಿದ್ದ ಆ ವ್ಯಕ್ತಿ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟುಮಾಡುವಂತೆ ಕೂಗಲು ಪ್ರಾರಂಭಿಸಿದರು.ಹಾಗಾಗಿ ಆತನನ್ನು ಠಾಣೆಗೆ ಕರೆತಂದಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಬ್-ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಯಾದವ್, ಚೌಧರಿ, ಖಾನ್ ಅವರನ್ನು ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಚೌದರಿ ಯುನಿಫಾರ್ಮ್ ನಲ್ಲಿ ಇರಲಿಲ್ಲ. ಒಂದು ವೇಳೆ ಖಾನ್ ಕೆಟ್ಟದಾಗಿ ವರ್ತಿಸಿದರೆ ಆತನ ಮೆಲೆ ಕಾನೂನಿನ ಪ್ರಕರ ದೂರು ನೀಡಬೇಕೆಂದು  ಸೂಚಿಸಿದ್ದೆ ಎಂದು ಹೇಳಿದ್ದಾರೆ. ಇದಲ್ಲದೆ ಕರ್ತವ್ಯದ ಸಮಯದಲ್ಲಿ ಯುನಿಫಾರ್ಮ್ ಧರಿಸಬೇಕು ಮತ್ತು ಯಾರ ಜೊತೆಯು ಕಾನೂನು ಬಾಹಿರವಾಗಿ ವರ್ತಿಸಬಾರದು ಎಂದು ಹೇಳಿರುವುದಾಗಿ  ಅವರು ತಿಳಿಸಿದ್ದಾರೆ.

ಇದನ್ನು ಓದಿ: ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೆಲವರು NCP ತೊರೆದರು: ಶರದ್ ಪವಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...