Homeಮುಖಪುಟಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

ಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

- Advertisement -
- Advertisement -

ಮುಂಬೈ-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹಿರಿಯ ಅಧಿಕಾರಿ ಮತ್ತು ಮೂವರು ಮುಸ್ಲಿಂ ಪ್ರಯಾಣಿಕರನ್ನು ಹತ್ಯೆ ಮಾಡಿದ್ದ ಆರ್ ಪಿಎಫ್ ಪೇದೆ ಚೇತನ್ ಸಿಂಗ್  ಚೌದರಿ ಈ  ಹಿಂದೆಯೂ ಮುಸ್ಲಿಂ ಆಟೋ ಚಾಲಕನಿಗೆ ಹಲ್ಲೆ ನಡೆಸಿ ದುರ್ವರ್ತನೆ ತೋರಿದ್ದ ಎನ್ನುವುದು ಪೊಲೀಸ್ ತನಿಖೆಯ ಹಂತದಲ್ಲಿ ಬಯಲಾಗಿದೆ.ಈ ವೇಳೆ ಆತನ ಮೇಲಾಧಿಕಾರಿ ಆತನಿಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಉಜ್ಜೈನಿಯ 45 ವರ್ಷದ ವಹೀದ್ ಖಾನ್ ಎಂಬ ಆಟೋ ಡ್ರೈವರ್ ನನ್ನ ಮೇಲೆ 2017ರಲ್ಲಿ ಚೇತನ್ ಸಿಂಗ್  ಚೌದರಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದ ಎಂದು ಹೇಳಿದ್ದಾರೆ.

ಇವರು ನನಗೆ ಕಿರುಕುಳ ನೀಡುತ್ತಿದ್ದರು ಮತ್ತು ಒಂದು ದಿನ ನನ್ನನ್ನು ಬಂಧಿಸಿ  ನನ್ನನ್ನು ಭಯೋತ್ಪಾದಕ ಎಂದು ಕರೆದರು. ಇದರಿಂದಾಗಿ ನನ್ನ ಕುಟುಂಬ ಅವನಿಗೆ ಹೆದರುತ್ತಿತ್ತು.ನನ್ನನ್ನು  ಚೌದರಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತಾನೆ ಎಂಬ ಭಯ ಅವರಿಗೆ ಇತ್ತು. ನನಗೆ ಜೀವ ಭಯ ಇದ್ದ ಕಾರಣ ಆತನ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೆ ಎಂದು ಖಾನ್  ಹೇಳಿದ್ದಾರೆ.

ಫೆಬ್ರವರಿ 18, 2017ರಂದು ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂಎಲ್ ಮೀನಾ ಎಂಬವರು ಕನ್ನಡಕ ಬಿಟ್ಟು ಬಂದ ಕಾರಣ ಖಾನ್ ಅವರಿಗೆ ಕರೆ ಮಾಡಿ ಕನ್ನಡಕ ತರುವಂತೆ ಕೇಳಿದ್ದರು.  ಅದರಂತೆ ಖಾನ್ ಕನ್ನಡಕವನ್ನು ನೀಡಲು ಹೋದಾಗ, ಚೌಧರಿ ಅವರನ್ನು ಹಿಡಿದು ಪ್ಲಾಟ್‌ಫಾರ್ಮ್ ಟಿಕೆಟ್ ತೆಗೆದುಕೊಂಡು ಹೋಗಲಿಲ್ಲ ಎಂಬ ಆರೋಪದಲ್ಲಿ 270 ರೂಪಾಯಿ ದಂಡ ವಿಧಿಸಲು ಪ್ರಯತ್ನಿಸಿದರು. ಬಳಿಕ ಸ್ಥಳೀಯ ಎಸ್‌ಎಚ್‌ಒ ಮಧ್ಯಪ್ರವೇಶಿಸಿದ ನಂತರ ಅವರು ಅಲ್ಲಿಂದ ತೆರಳಿದ್ದರು.

ಫೆಬ್ರವರಿ 19 ರಂದು, ಚೌಧರಿ ಅವರು ಮತ್ತೆ ರೈಲ್ವೆ ನಿಲ್ದಾಣದ ಸರಕುಗಳ ಗೋದಾಮಿನ ಬಳಿ ಖಾನ್ ಅವರನ್ನು ಹಿಡಿದರು ಮತ್ತು ಅವರನ್ನು ಮತ್ತೆ ನಿಂದಿಸಿದರು ಮತ್ತು “ನಿಮ್ಮನ್ನು ಈಗ ಯಾರು ರಕ್ಷಿಸುತ್ತಾರೆಂದು ನೋಡೋಣ” ಎಂದಿದ್ದಾರೆ  ಎಂದು ಹೇಳಿದ್ದಾರೆ.

ಚೌಧರಿ ಅವರನ್ನು ಈ ಬಗ್ಗೆ ಆರ್‌ಪಿಎಫ್ ಪ್ರಶ್ನಿಸಿದಾಗ,  ನನ್ನ ಮೇಲೆ ಮಾನಸಿಕ ಒತ್ತಡವನ್ನು ಸೃಷ್ಟಿಸಲು ಸುಳ್ಳು ದೂರು ದಾಖಲಿಸಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.

ನಾನು ನನ್ನ ವೈಯಕ್ತಿಕ ಕೆಲಸಕ್ಕಾಗಿ ವಾಹಿದ್ ಖಾನ್ ಅವರ ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದಿಲ್ಲ, ಅಥವಾ ನಾನು ಅವನನ್ನು ಮೊದಲು ತಿಳಿದಿರಲಿಲ್ಲ, ಅಥವಾ ನಾನು ಅವನನ್ನು ಯಾವುದೇ ರೀತಿಯಲ್ಲಿ ನಿಂದಿಸಿಲ್ಲ ಅಥವಾ ಬೆದರಿಕೆ ಹಾಕಿಲ್ಲ ಎಂದು ಕಾನ್‌ಸ್ಟೆಬಲ್ ಹೇಳಿದರು.

ಫೆಬ್ರವರಿ 18 ರಂದು ಸಂಜೆ 5:30 ರ ಸುಮಾರಿಗೆ ಪ್ಲಾಟ್‌ಫಾರ್ಮ್ ನಂಬರ್ 1 ರಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಿಂತಿರುವುದನ್ನು ಕಂಡಿದ್ದೇನೆ ಎಂದು ಚೌಧರಿ ಹೇಳಿದರು. ನಾನು ಏನು ಮಾಡುತ್ತಿದ್ದೀರಿ ಎಂದು ನಾನು ಅವರನ್ನು ಕೇಳಿದಾಗ, ಆಟೋ ಚಾಲಕನಾಗಿದ್ದ ಆ ವ್ಯಕ್ತಿ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟುಮಾಡುವಂತೆ ಕೂಗಲು ಪ್ರಾರಂಭಿಸಿದರು.ಹಾಗಾಗಿ ಆತನನ್ನು ಠಾಣೆಗೆ ಕರೆತಂದಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಬ್-ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಯಾದವ್, ಚೌಧರಿ, ಖಾನ್ ಅವರನ್ನು ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಚೌದರಿ ಯುನಿಫಾರ್ಮ್ ನಲ್ಲಿ ಇರಲಿಲ್ಲ. ಒಂದು ವೇಳೆ ಖಾನ್ ಕೆಟ್ಟದಾಗಿ ವರ್ತಿಸಿದರೆ ಆತನ ಮೆಲೆ ಕಾನೂನಿನ ಪ್ರಕರ ದೂರು ನೀಡಬೇಕೆಂದು  ಸೂಚಿಸಿದ್ದೆ ಎಂದು ಹೇಳಿದ್ದಾರೆ. ಇದಲ್ಲದೆ ಕರ್ತವ್ಯದ ಸಮಯದಲ್ಲಿ ಯುನಿಫಾರ್ಮ್ ಧರಿಸಬೇಕು ಮತ್ತು ಯಾರ ಜೊತೆಯು ಕಾನೂನು ಬಾಹಿರವಾಗಿ ವರ್ತಿಸಬಾರದು ಎಂದು ಹೇಳಿರುವುದಾಗಿ  ಅವರು ತಿಳಿಸಿದ್ದಾರೆ.

ಇದನ್ನು ಓದಿ: ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೆಲವರು NCP ತೊರೆದರು: ಶರದ್ ಪವಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...