Homeಮುಖಪುಟಮತ್ತೆ ಮುನ್ನೆಲೆಗೆ ಬಂದ 'Avalkoppam': ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

- Advertisement -
- Advertisement -

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ ಹಮ್ಮಿಕೊಂಡಿದ್ದ ‘ಅವಳ್‌ಕೊಪ್ಪಂ’ (ಅವಳ ಜೊತೆ) ಎಂಬ ಪ್ರತಿರೋಧ ಮತ್ತು ಸಂತ್ರಸ್ತೆಯ ಜೊತೆಗಿನ ಒಗಟ್ಟಿನ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ.

ಭಾನುವಾರ (ಡಿಸೆಂಬರ್ 14) ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಕೆ) ಪ್ರತಿಭಟನೆ ನಡೆದಿದೆ. ಈ ವೇಳೆ ಮಾತನಾಡಿರುವ ಮಲಯಾಳಂ ನಟಿ ರೀಮಾ ಕಲ್ಲಿಂಗಲ್ ‘ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಚಲನಚಿತ್ರ ನಿರ್ಮಾಪಕ ದಿವಂಗತ ಬಾಲಚಂದ್ರಕುಮಾರ್ ಅವರ ಪತ್ನಿ ಹಿರಿಯ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ಮತ್ತು ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

‘ಅವಳ್‌ಕೊಪ್ಪಂ’ ಇಂದು ಎಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ ಎಂದು ನಾನು ನಂಬುತ್ತೇನೆ” ಎಂದು ರೀಮಾ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ತೀರ್ಪು ಯಾವುದೇ ರೀತಿಯ ಆಶ್ವಾಸನೆ ನೀಡುವುದಿಲ್ಲ. ಈ ದೀರ್ಘ ಹೋರಾಟದಲ್ಲಿ ಸಂತ್ರಸ್ತೆಯ ಜೊತೆಗೆ, ಆಕೆಯ ಪರವಾಗಿ ನಿಂತವರ ಬಗೆಗಿನ ಆತಂಕಕ್ಕಿಂತ ಹೆಚ್ಚಾಗಿ, ಈ ತೀರ್ಪು ಮುಂದಿನ ಪೀಳಿಗೆಗೆ ಕಳುಹಿಸುವ ಸಂದೇಶದ ಬಗ್ಗೆ ನನಗೆ ಆತಂಕವಿದೆ. ಯುವಜನರು ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ತೀರ್ಪು ಅತ್ಯಂತ ಕೆಟ್ಟ ಉದಾಹರಣೆಯನ್ನು ಕೊಡುತ್ತದೆ. ನಮ್ಮ ಸುತ್ತಲೂ ನಡೆಯುತ್ತಿರುವ ಸಂಗತಿಗಳ ಬಗ್ಗೆ ನಾವು ಬಹಳ ದೃಢವಾದ ಸಂದೇಶವನ್ನು ಕಳುಹಿಸಬೇಕಾಗಿದೆ” ಎಂದು ಪ್ರತಿಭಟನೆಯ ನಂತರ ಸುದ್ದಿ ಮಾಧ್ಯಮ ಒನ್‌ಮನೋರಮ ಜೊತೆ ಮಾತನಾಡುವಾಗ ರೀಮಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯಲಕ್ಷ್ಮಿ, “ಸಮಾಜವು ಸಂತ್ರಸ್ತೆಯ ಜೊತೆ ದೃಢವಾಗಿ ನಿಲ್ಲಬೇಕಾದ ಸಮಯ ಇದು” ಎಂದು ಹೇಳಿದ್ದಾರೆ. ನಟ ದಿಲೀಪ್ ಅವರನ್ನು ಉಲ್ಲೇಖಿಸಿ, “ತೀರ್ಪಿನ ನಂತರ ಅಪರಾಧಕ್ಕೆ ಸಂಚು ರೂಪಿಸಿದವರು ಅವರೇ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದಾರೆ. ದಿಲೀಪ್ ಖುಲಾಸೆಯಾದ ನಂತರ, ಕೇವಲ ಸಂತೋಷವನ್ನು ವ್ಯಕ್ತಪಡಿಸುವ ಅಥವಾ ‘ಸತ್ಯ ಗೆದ್ದಿದೆ’ ಎಂದು ಹೇಳುವ ಬದಲು, ಅವರು ಒಬ್ಬರು ಮಹಿಳೆಯ ಹೆಸರನ್ನು ಹೇಳಿದ್ದಾರೆ. ಸಂತ್ರಸ್ತೆ ಪಿತೂರಿಯ ಬಗ್ಗೆ ಮಾತನಾಡುವಾಗ ದಿಲೀಪ್ ಹೆಸರನ್ನು ಎಂದಿಗೂ ಹೇಳಿರಲಿಲ್ಲ. ಹೀಗಿರುವಾಗ ಅವರು ತನ್ನನ್ನು ಗುರಿಯಾಗಿಸಿಕೊಂಡಿದ್ದಾರೆಂದು ಭಾವಿಸುವುದು ಏಕೆ? ಏಕೆಂದರೆ ಅದನ್ನು ಮಾಡಿದವರು ಅವರೇ” ಎಂದಿದ್ದಾರೆ.

ಡಿಸೆಂಬರ್ 8ರಂದು ತೀರ್ಪು ಪ್ರಕಟಿಸಿದ್ದ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದಿಲೀಪ್ ಅವರನ್ನು ಖುಲಾಸೆಗೊಳಿಸಿತ್ತು. ಈ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು”ಎಂದು ಹೇಳಿದ್ದರು.

ಭಾನುವಾರ ಪ್ರತಿಭಟನೆಯ ಬಳಿಕ ಮಾತನಾಡಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್, “ಅಪರಾಧದಲ್ಲಿ ಪಿತೂರಿ ನಡೆಸಿದವರನ್ನು ಗುರುತಿಸಿ ವಿಚಾರಣೆಗೆ ಒಳಪಡಿಸುವಲ್ಲಿ ವಿಫಲವಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ಅಪರಾಧವನ್ನು ಯೋಜಿಸಿದವರನ್ನು ಗುರುತಿಸಲು ಮತ್ತು ಅವರನ್ನು ಕಾನೂನಿನ ಮುಂದೆ ತರಲು ಅಸಮರ್ಥವಾಗಿರುವುದು ನಾವು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಪಿತೂರಿಗಾರರನ್ನು ನ್ಯಾಯಾಂಗದ ಮುಂದೆ ತರುವುದನ್ನು ಖಚಿತಪಡಿಸಿಕೊಳ್ಳುವುದು ಕೇರಳದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಕೇರಳದ ಇತರ ಭಾಗಗಳಲ್ಲೂ ನ್ಯಾಯಾಲಯದ ತೀರ್ಪಿಗೆ ಅಸಮಾಧಾನ ವ್ಯಕ್ತವಾಗಿದೆ. ಡಿಸೆಂಬರ್ 13ರಂದು, ತಿರುವನಂತಪುರದಿಂದ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಗುಂಪೊಂದು ಪ್ರಯಾಣದ ಸಮಯದಲ್ಲಿ ದಿಲೀಪ್ ಅವರ ಸಿನಿಮಾ ಹಾಕಿದ್ದನ್ನು ವಿರೋಧಿಸಿತ್ತು. ಅವರ ಆಕ್ಷೇಪಣೆಯ ನಂತರ ಬಸ್ ಸಿಬ್ಬಂದಿ ಸಿನಿಮಾ ನಿಲ್ಲಿಸಿದ್ದರು.

ಎರ್ನಾಕುಲಂನ ದೇವಾಲಯದ ಕಾರ್ಯಕ್ರಮದಲ್ಲಿ ದಿಲೀಪ್ ಭಾಗವಹಿಸುವ ಪ್ರಸ್ತಾಪದ ಬಗ್ಗೆ ಮತ್ತೊಂದು ವಿವಾದ ಭುಗಿಲೆದ್ದಿತು. ಶಿವ ದೇವಾಲಯದಲ್ಲಿ ಮುಂದೆ ನಡೆಯಲಿರುವ ಉತ್ಸವದ ಕೂಪನ್‌ಗಳ ವಿತರಣೆಯನ್ನು ಉದ್ಘಾಟಿಸಲು ದಿಲೀಪ್ ಅವರನ್ನು ಆಹ್ವಾನಿಸಲಾಗಿತ್ತು. ಪ್ರತಿಭಟನೆಗಳ ನಂತರ, ಕೊಚ್ಚಿನ್ ದೇವಸ್ವಂ ಮಂಡಳಿಯ ಅಡಿಯಲ್ಲಿ ಬರುವ ದೇವಾಲಯವು ಆಹ್ವಾನವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿತು.

ಡಿಸೆಂಬರ್ 8ರಂದು ನ್ಯಾಯಾಲಯ ತೀರ್ಪು ಪ್ರಕಟಿಸುವ ಸ್ವಲ್ಪ ಮುಂಚೆ ‘ವುಮೆನ್‌ ಇನ್ ಸಿನಿಮಾ ಕಲೆಕ್ಟಿವ್ (ಡಬ್ಲ್ಯುಸಿಸಿ)’ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಎಂದು ಪೋಸ್ಟ್ ಹಾಕಿತ್ತು. ಈ ಮೂಲಕ ತೀರ್ಪು ಏನೇ ಬಂದರೂ ಸಂತ್ರಸ್ತೆಯ ಜೊತೆಗಿದ್ದೇವೆ ಎಂದಿತ್ತು.

ತೀರ್ಪು ಪ್ರಕಟಗೊಂಡ ಬಳಿಕ ಅನೇಕ ನಟ, ನಟಿಯರು ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಅನೇಕ ಸಾಮಾನ್ಯ ಜನರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್‌ ಮೂಲಕ ಸಂತ್ರಸ್ತೆ ನಟಿಗೆ ಬೆಂಬಲ ಮತ್ತು ನ್ಯಾಯಾಲಯದ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...