Homeಮುಖಪುಟಮತ್ತೆ ಮುನ್ನೆಲೆಗೆ ಬಂದ 'Avalkoppam': ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

- Advertisement -
- Advertisement -

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ ಹಮ್ಮಿಕೊಂಡಿದ್ದ ‘ಅವಳ್‌ಕೊಪ್ಪಂ’ (ಅವಳ ಜೊತೆ) ಎಂಬ ಪ್ರತಿರೋಧ ಮತ್ತು ಸಂತ್ರಸ್ತೆಯ ಜೊತೆಗಿನ ಒಗಟ್ಟಿನ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ.

ಭಾನುವಾರ (ಡಿಸೆಂಬರ್ 14) ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಕೆ) ಪ್ರತಿಭಟನೆ ನಡೆದಿದೆ. ಈ ವೇಳೆ ಮಾತನಾಡಿರುವ ಮಲಯಾಳಂ ನಟಿ ರೀಮಾ ಕಲ್ಲಿಂಗಲ್ ‘ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಚಲನಚಿತ್ರ ನಿರ್ಮಾಪಕ ದಿವಂಗತ ಬಾಲಚಂದ್ರಕುಮಾರ್ ಅವರ ಪತ್ನಿ ಹಿರಿಯ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ಮತ್ತು ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

‘ಅವಳ್‌ಕೊಪ್ಪಂ’ ಇಂದು ಎಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ ಎಂದು ನಾನು ನಂಬುತ್ತೇನೆ” ಎಂದು ರೀಮಾ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ತೀರ್ಪು ಯಾವುದೇ ರೀತಿಯ ಆಶ್ವಾಸನೆ ನೀಡುವುದಿಲ್ಲ. ಈ ದೀರ್ಘ ಹೋರಾಟದಲ್ಲಿ ಸಂತ್ರಸ್ತೆಯ ಜೊತೆಗೆ, ಆಕೆಯ ಪರವಾಗಿ ನಿಂತವರ ಬಗೆಗಿನ ಆತಂಕಕ್ಕಿಂತ ಹೆಚ್ಚಾಗಿ, ಈ ತೀರ್ಪು ಮುಂದಿನ ಪೀಳಿಗೆಗೆ ಕಳುಹಿಸುವ ಸಂದೇಶದ ಬಗ್ಗೆ ನನಗೆ ಆತಂಕವಿದೆ. ಯುವಜನರು ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ತೀರ್ಪು ಅತ್ಯಂತ ಕೆಟ್ಟ ಉದಾಹರಣೆಯನ್ನು ಕೊಡುತ್ತದೆ. ನಮ್ಮ ಸುತ್ತಲೂ ನಡೆಯುತ್ತಿರುವ ಸಂಗತಿಗಳ ಬಗ್ಗೆ ನಾವು ಬಹಳ ದೃಢವಾದ ಸಂದೇಶವನ್ನು ಕಳುಹಿಸಬೇಕಾಗಿದೆ” ಎಂದು ಪ್ರತಿಭಟನೆಯ ನಂತರ ಸುದ್ದಿ ಮಾಧ್ಯಮ ಒನ್‌ಮನೋರಮ ಜೊತೆ ಮಾತನಾಡುವಾಗ ರೀಮಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯಲಕ್ಷ್ಮಿ, “ಸಮಾಜವು ಸಂತ್ರಸ್ತೆಯ ಜೊತೆ ದೃಢವಾಗಿ ನಿಲ್ಲಬೇಕಾದ ಸಮಯ ಇದು” ಎಂದು ಹೇಳಿದ್ದಾರೆ. ನಟ ದಿಲೀಪ್ ಅವರನ್ನು ಉಲ್ಲೇಖಿಸಿ, “ತೀರ್ಪಿನ ನಂತರ ಅಪರಾಧಕ್ಕೆ ಸಂಚು ರೂಪಿಸಿದವರು ಅವರೇ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದಾರೆ. ದಿಲೀಪ್ ಖುಲಾಸೆಯಾದ ನಂತರ, ಕೇವಲ ಸಂತೋಷವನ್ನು ವ್ಯಕ್ತಪಡಿಸುವ ಅಥವಾ ‘ಸತ್ಯ ಗೆದ್ದಿದೆ’ ಎಂದು ಹೇಳುವ ಬದಲು, ಅವರು ಒಬ್ಬರು ಮಹಿಳೆಯ ಹೆಸರನ್ನು ಹೇಳಿದ್ದಾರೆ. ಸಂತ್ರಸ್ತೆ ಪಿತೂರಿಯ ಬಗ್ಗೆ ಮಾತನಾಡುವಾಗ ದಿಲೀಪ್ ಹೆಸರನ್ನು ಎಂದಿಗೂ ಹೇಳಿರಲಿಲ್ಲ. ಹೀಗಿರುವಾಗ ಅವರು ತನ್ನನ್ನು ಗುರಿಯಾಗಿಸಿಕೊಂಡಿದ್ದಾರೆಂದು ಭಾವಿಸುವುದು ಏಕೆ? ಏಕೆಂದರೆ ಅದನ್ನು ಮಾಡಿದವರು ಅವರೇ” ಎಂದಿದ್ದಾರೆ.

ಡಿಸೆಂಬರ್ 8ರಂದು ತೀರ್ಪು ಪ್ರಕಟಿಸಿದ್ದ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದಿಲೀಪ್ ಅವರನ್ನು ಖುಲಾಸೆಗೊಳಿಸಿತ್ತು. ಈ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು”ಎಂದು ಹೇಳಿದ್ದರು.

ಭಾನುವಾರ ಪ್ರತಿಭಟನೆಯ ಬಳಿಕ ಮಾತನಾಡಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್, “ಅಪರಾಧದಲ್ಲಿ ಪಿತೂರಿ ನಡೆಸಿದವರನ್ನು ಗುರುತಿಸಿ ವಿಚಾರಣೆಗೆ ಒಳಪಡಿಸುವಲ್ಲಿ ವಿಫಲವಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ಅಪರಾಧವನ್ನು ಯೋಜಿಸಿದವರನ್ನು ಗುರುತಿಸಲು ಮತ್ತು ಅವರನ್ನು ಕಾನೂನಿನ ಮುಂದೆ ತರಲು ಅಸಮರ್ಥವಾಗಿರುವುದು ನಾವು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಪಿತೂರಿಗಾರರನ್ನು ನ್ಯಾಯಾಂಗದ ಮುಂದೆ ತರುವುದನ್ನು ಖಚಿತಪಡಿಸಿಕೊಳ್ಳುವುದು ಕೇರಳದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಕೇರಳದ ಇತರ ಭಾಗಗಳಲ್ಲೂ ನ್ಯಾಯಾಲಯದ ತೀರ್ಪಿಗೆ ಅಸಮಾಧಾನ ವ್ಯಕ್ತವಾಗಿದೆ. ಡಿಸೆಂಬರ್ 13ರಂದು, ತಿರುವನಂತಪುರದಿಂದ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಗುಂಪೊಂದು ಪ್ರಯಾಣದ ಸಮಯದಲ್ಲಿ ದಿಲೀಪ್ ಅವರ ಸಿನಿಮಾ ಹಾಕಿದ್ದನ್ನು ವಿರೋಧಿಸಿತ್ತು. ಅವರ ಆಕ್ಷೇಪಣೆಯ ನಂತರ ಬಸ್ ಸಿಬ್ಬಂದಿ ಸಿನಿಮಾ ನಿಲ್ಲಿಸಿದ್ದರು.

ಎರ್ನಾಕುಲಂನ ದೇವಾಲಯದ ಕಾರ್ಯಕ್ರಮದಲ್ಲಿ ದಿಲೀಪ್ ಭಾಗವಹಿಸುವ ಪ್ರಸ್ತಾಪದ ಬಗ್ಗೆ ಮತ್ತೊಂದು ವಿವಾದ ಭುಗಿಲೆದ್ದಿತು. ಶಿವ ದೇವಾಲಯದಲ್ಲಿ ಮುಂದೆ ನಡೆಯಲಿರುವ ಉತ್ಸವದ ಕೂಪನ್‌ಗಳ ವಿತರಣೆಯನ್ನು ಉದ್ಘಾಟಿಸಲು ದಿಲೀಪ್ ಅವರನ್ನು ಆಹ್ವಾನಿಸಲಾಗಿತ್ತು. ಪ್ರತಿಭಟನೆಗಳ ನಂತರ, ಕೊಚ್ಚಿನ್ ದೇವಸ್ವಂ ಮಂಡಳಿಯ ಅಡಿಯಲ್ಲಿ ಬರುವ ದೇವಾಲಯವು ಆಹ್ವಾನವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿತು.

ಡಿಸೆಂಬರ್ 8ರಂದು ನ್ಯಾಯಾಲಯ ತೀರ್ಪು ಪ್ರಕಟಿಸುವ ಸ್ವಲ್ಪ ಮುಂಚೆ ‘ವುಮೆನ್‌ ಇನ್ ಸಿನಿಮಾ ಕಲೆಕ್ಟಿವ್ (ಡಬ್ಲ್ಯುಸಿಸಿ)’ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಎಂದು ಪೋಸ್ಟ್ ಹಾಕಿತ್ತು. ಈ ಮೂಲಕ ತೀರ್ಪು ಏನೇ ಬಂದರೂ ಸಂತ್ರಸ್ತೆಯ ಜೊತೆಗಿದ್ದೇವೆ ಎಂದಿತ್ತು.

ತೀರ್ಪು ಪ್ರಕಟಗೊಂಡ ಬಳಿಕ ಅನೇಕ ನಟ, ನಟಿಯರು ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಅನೇಕ ಸಾಮಾನ್ಯ ಜನರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್‌ ಮೂಲಕ ಸಂತ್ರಸ್ತೆ ನಟಿಗೆ ಬೆಂಬಲ ಮತ್ತು ನ್ಯಾಯಾಲಯದ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬ ವಿಪಕ್ಷಗಳ ಆರೋಪ ತಿರಸ್ಕರಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಯು ಪಕ್ಷಪಾತದಿಂದ ಕೂಡಿದೆ ಅಥವಾ ಸರ್ಕಾರದ ಒತ್ತಡದಲ್ಲಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ...

ಆರ್‌ಎಸ್‌ಎಸ್ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಸದ/ಶಾಸಕರ...

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...