Homeಮುಖಪುಟಅವನಿ-ಶೇರ್‌ನಿ; ಸಿನಿಮಾ ಮೂಲಕ ವನ್ಯಜೀವಿ-ಮನುಷ್ಯ ಸಂಘರ್ಷದ ಹಲವು ಆಯಾಮಗಳು

ಅವನಿ-ಶೇರ್‌ನಿ; ಸಿನಿಮಾ ಮೂಲಕ ವನ್ಯಜೀವಿ-ಮನುಷ್ಯ ಸಂಘರ್ಷದ ಹಲವು ಆಯಾಮಗಳು

- Advertisement -
- Advertisement -

ಚಳಿಗಾಲದ ಮಂಜಿನ ತೆಳು ಹೊದಿಕೆಯನ್ನು ಬೇಧಿಸಿ ಬರುತ್ತಿರುವ ಮುಂಜಾವಿನ ಹೊಂಗಿರಣಗಳು, ಸುತ್ತಲೂ ಹಬ್ಬಿದ ವನರಾಶಿ, ಅದಕ್ಕೆ ಹೊಂದಿಕೊಂಡೇ ಇರುವಂತಹ ಹೊಲಗದ್ದೆಗಳಲ್ಲಿ ಕಟಾವಿಗೆ ಸಿದ್ಧವಾಗಿ ತೊನೆಯುತ್ತಿರುವ ಪೈರು. ಈ ದೃಶ್ಯವು ಪ್ರಕೃತಿ ಆರಾಧಕರಿಗೆ ಸ್ವರ್ಗ ಸದೃಶವಾಗಿ ಕಾಣಿಸಿದರೆ, ಕಾಡಂಚಿನ ಹಳ್ಳಿಗರಿಗೆ ಬೆಳೆದ ಪೈರು ಕಾಡುಪ್ರಾಣಿಗಳಿಗೆ ಸಿಕ್ಕು ಹಾಳಾಗುವುದೋ ಅಥವಾ ಅವರ ಕೈಗೆ ಹತ್ತುವುದೋ ಎಂಬ ಚಿಂತೆ ಮೂಡಿಸುತ್ತದೆ. ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತರಿಗೆ ಇದು ಆವಾಸದ ಛಿದ್ರೀಕರಣದಂತೆ ತೋರಬಹುದು ಮತ್ತು ಗಣಿಗಾರಿಕೆ ಹಾಗು ಅರಣ್ಯದ ಮೇಲೆ ಅವಲಂಬಿತವಾದ ಮತ್ತಿತರ ಕೈಗಾರಿಕೆಗಳ ವಾರಸುದಾರರಿಗೆ ಇದು ಮುಂದಿನ ಯೋಜನಾ ಪ್ರದೇಶದ ವಿಸ್ತರಣೆಯ ಅವಕಾಶದಂತೆ ಕಾಣಬಹುದು. ಭಾರತದ ಅರಣ್ಯ ಮತ್ತು ವನ್ಯಜೀವಿಗಳು ಇಷ್ಟೆಲ್ಲ ವಿರೋಧಾಭಾಸಗಳ ನಡುವೆ ಸಿಲುಕಿಕೊಂಡು ತಮ್ಮ ಮುಂದಿನ ದಿನಗಳನ್ನು ಎದುರು ನೋಡುತ್ತಿವೆ ಎಂದು ನಾವು ಕಲ್ಪಿಸಿಕೊಂಡರೆ ಅದು ಖಂಡಿತ ಉತ್ಪ್ರೇಕ್ಷೆಯಲ್ಲ. ಇಷ್ಟೆಲ್ಲಾ ವಿಷಯಗಳನ್ನು ಹೇಳಲು ಕಾರಣ ಇತ್ತೀಚಿಗೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ಶೇರ್‌ನಿ ಎಂಬ ಚಿತ್ರವೇ ಕಾರಣ. ಒಟ್ಟಾರೆಯಾಗಿ ವನ್ಯಜೀವಿ ಸಂರಕ್ಷಣೆಯ ಸವಾಲುಗಳ ಕುರಿತು ಕೊಂಚವಾದರೂ ಬೆಳಕು ಚೆಲ್ಲಲು ಈ ಚಿತ್ರ ಯಶಸ್ವಿಯಾಗಿದೆ ಎಂದರೆ ತಪ್ಪಲ್ಲ.

ಮೊದಲು ಜಾಹೀರಾತಿನಲ್ಲಿ ಈ ಚಿತ್ರದ ಹೆಸರು ಕೇಳಿದಾಗ ಇದು ದುರುಳರನ್ನು ಮಟ್ಟಹಾಕುವ ಚಿತ್ರದ ನಾಯಕಿಗೆ ಅನ್ವರ್ಥಕವಾಗಿ ’ಶೇರ್‌ನಿ’ ಎಂದು ಹೆಸರಿಸಲಾಗಿದೆಯೇ ಎಂಬ ಸಂದೇಹ ಮೂಡಿತ್ತು. ಆದರೆ ಕೆಲ ಸ್ನೇಹಿತರ ಕಿರು ವಿಮರ್ಶೆ ಮತ್ತು ಶಿಫಾರಸ್ಸಿನ ಅನ್ವಯ ಈ ಚಿತ್ರವನ್ನು ನೋಡಿದ ಮೇಲೆ ಇದು ಒಬ್ಬ ಅರಣ್ಯ ಅಧಿಕಾರಿಯ ದೃಷ್ಟಿಕೋನದಲ್ಲಿ ಮಧ್ಯ ಭಾರತದಲ್ಲಿ ಹೆಚ್ಚು ಚಾಲ್ತಿಯಲ್ಲಿರುವ ಮಾನವ ಮತ್ತು ಹುಲಿ ಸಂಘರ್ಷದ ಕತೆ ಎಂದು ತಿಳಿಯಿತು. ಚಿತ್ರಕಥೆ ಸುಮಾರು ಎರಡು ಮೂರು ವರ್ಷದ ಹಿಂದೆ ಬದುಕಿದ್ದ ಅವನಿ ಎಂಬ ಹೆಣ್ಣು ಹುಲಿಯ ಕಥೆಯ ಮೇಲೆ ಆಧಾರಿತವಾಗಿದೆ. ಅವನಿ ಹುಲಿಯ ಪ್ರಸಂಗವು ಮಾನವ ವನ್ಯಜೀವಿ ಸಂಘರ್ಷವನ್ನು ಆಯಾ ಹಿನ್ನೆಲೆಯ ಜನರು ತಮ್ಮ ದೃಷ್ಟಿಕೋನಕ್ಕೆ ತಕ್ಕಂತೆ ಹೇಗೆ ನೋಡುತ್ತಾರೆ ಎಂಬುದನ್ನು ವಿಶದವಾಗಿ ಬಿಡಿಸಿಟ್ಟಿತ್ತು.

ನಗರದ ಹಿನ್ನೆಲೆಯ ಜನ ಹುಲಿಯ ಹತ್ಯೆಯನ್ನು ತುಂಬಾ ಭಾವನಾತ್ಮಕವಾಗಿ ಪರಿಗಣಿಸಿ ಸರಣಿ ಪ್ರತಿಭಟನೆ, ಪ್ರದರ್ಶನ ಮಾಡಿ ತಮ್ಮ ಸಿಟ್ಟನ್ನು ತೋರ್ಪಡಿಸಿದರು. ಆದರೆ ಹುಲಿಯಿಂದ ತೊಂದರೆಗೆ ಈಡಾಗಿ ಜನ-ಜಾನುವಾರುಗಳನ್ನು ಕಳೆದುಕೊಂಡ ಹಳ್ಳಿಗರು ಸಮಾಧಾನದ ನಿಟ್ಟುಸಿರುಬಿಟ್ಟರು. ಆದರೆ ಒಂದಂತೂ ಸತ್ಯ, ಯಾವುದೇ ಹುಲಿಯು ನರಭಕ್ಷಕನಾಗಿ ಪರಿವರ್ತನೆಯಾದರೆ ಅದರ ಭವಿಷ್ಯ ಅಲ್ಲಿಯೇ ಮುಗಿದಂತೆ. ಒಂದೋ ಅದು ಗುಂಡಿಗೆ ಬಲಿಯಾಗಬೇಕು ಇಲ್ಲವೇ ಜೀವನಪರ್ಯಂತ ಪ್ರಾಣಿ ಸಂಗ್ರಹಾಲಯದಲ್ಲಿ ಬಂಧಿಯಾಗಬೇಕು. ಇಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬ ವಿಮರ್ಶೆ ಮಾಡುವ ಮೊದಲು, ಕಾಡಂಚಿನ ಜನರ ಸುರಕ್ಷತೆಯೇ ಮೊದಲ ಆದ್ಯತೆ ಎಂಬುದನ್ನು ನಾವು ಪರಿಗಣಿಸಲೇಬೇಕು. ಭಾರತದಲ್ಲಿ ವನ್ಯಜೀವಿ ಸಂರಕ್ಷಣೆ ಎಂಬ ತಂತಿಯ ಮೇಲಿನ ನಡಿಗೆಗೆ ಜನರ ಬೆಂಬಲ ಬೇಕೇಬೇಕು ಮತ್ತು ಮಾನವ ವನ್ಯಜೀವಿ ಸಂಘರ್ಷದ ಬಿಸಿಯನ್ನು ಅನುಭವಿಸುವ ಜನರ ಹಿತಾಸಕ್ತಿಯನ್ನು ಪರಿಗಣಿಸುವುಧು ಅತೀಮುಖ್ಯ.

ಇನ್ನು ಚಿತ್ರದ ವಿಷಯಕ್ಕೆ ಬರುವುದಾದರೆ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಬಂದಂತಹ ಚಿತ್ರಗಳಲ್ಲಿ ಈ ಚಿತ್ರ ಸತ್ಯಕ್ಕೆ ಅತ್ಯಂತ ಹತ್ತಿರವಾದದ್ದು. ಚಿತ್ರದ ನಿರ್ದೇಶಕರು ಮೂಲಭೂತ ವಿಷಯಗಳ ಕುರಿತು ಸಾಕಷ್ಟು ಹೋಂವರ್ಕ್ ಮಾಡಿದ್ದಾರೆ ಎಂದೆನಿಸುತ್ತದೆ. ಅವರು ಕಥೆ ಹೇಳಲು ಆರಿಸಿಕೊಂಡ ಪ್ರದೇಶ ಅದಕ್ಕೆ ಸಾಕ್ಷಿ. ಮಧ್ಯಭಾರತದ ಹಳ್ಳಿಗಳು ಮತ್ತು ಮಾನವ ವನ್ಯಜೀವಿ ಸಂಘರ್ಷ ನೈಜವಾಗಿಯೇ ಮೂಡಿಬಂದಿವೆ. ವನ್ಯಜೀವಿ ಸಂಘರ್ಷದ ಕಷ್ಟ ಅನುಭವಿಸುವ ಹಳ್ಳಿಗರು, ಅವರ ತಕ್ಷಣದ ಆಕ್ರೋಶಕ್ಕೆ ತುತ್ತಾಗುವ ಅರಣ್ಯ ಇಲಾಖೆಯ ಕೆಳ ಹಂತದ ನೌಕರರು ಮತ್ತು ಈ ಘಟನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಸ್ಥಳೀಯ ನಾಯಕರು ಇವೆಲ್ಲವುಗಳೂ ವಸ್ತುಸ್ಥಿತಿಗಳೆ ಆಗಿವೆ. ಅಷ್ಟೇ ಅಲ್ಲದೆ ಪ್ರಸ್ತುತ ಅರಣ್ಯಗಳಿಗೆ ಒದಗಿದೆ ತೊಂದರೆಗಳಾದ ಆವಾಸದ ಛಿದ್ರೀಕರಣ, ಅರಣ್ಯದ ನಡುವೆ ಗಣಿಗಾರಿಕೆ ಮತ್ತು ಹೆದ್ದಾರಿಗಳ ಕುರಿತು ನಿರ್ದೇಶಕರು ಸೂಚ್ಯವಾಗಿ ಹೇಳಿದ್ದಾರೆ.

ಬಹುಶಃ ನಿಜವಾದ ಅರಣ್ಯ ಇಲಾಖೆಯ ನೌಕರರೇ ಇದರಲ್ಲಿ ನಟಿಸಿದ್ದಾರೋ ಏನೋ! ಹೊಸ ಪೀಳಿಗೆಯ ಸುಶಿಕ್ಷಿತ ಸಿಬ್ಬಂದಿಯನ್ನು ನಾವಿಲ್ಲಿ ನೋಡಬಹುದು ಮತ್ತು ಇತ್ತೀಚಿಗೆ ಅರಣ್ಯ ಇಲಾಖೆಯಲ್ಲಿ ಹೆಚ್ಚುತ್ತಿರುವ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಸಿನಿಮಾ ಶಕ್ತವಾಗಿ ಹಿಡಿದಿಟ್ಟಿದೆ. ಅಷ್ಟೇ ಅಲ್ಲದೆ ವನ್ಯಜೀವಿ ಸಂರಕ್ಷಣೆಯಲ್ಲಿ ಸ್ಥಳೀಯ ಆಸಕ್ತ ಸಂಸ್ಥೆಗಳ ಪಾಲ್ಗೊಳ್ಳುವಿಕೆ, ಇಲಾಖೆಯ ಮನಸೋ ಇಚ್ಛೆ ಗಿಡ ನೆಡುವ ಯೋಜನೆಗಳು, ಇವೆಲ್ಲ ನಿರ್ದೇಶಕರಿಗೆ ವಿಷಯದ ಕುರಿತು ಇರುವ ಜ್ಞಾನವನ್ನು ತೋರಿಸುತ್ತದೆ.

ಆದರೆ ಇಲ್ಲಿ ಅವನಿ ಹುಲಿಯ ಪ್ರಕರಣದಲ್ಲಿ ಆದಂತೆಯೇ ಚಿತ್ರಕಥೆಯನ್ನೂ ಭಾವನಾತ್ಮಕ ಹಿನ್ನೆಲೆಯಲ್ಲಿಯೇ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಬಹುಶಃ ಅದು ಅವರ ಉದ್ದೇಶವೂ ಆಗಿರಬಹುದು ಇಲ್ಲವೇ ಒಂದು ಚಿತ್ರವನ್ನು ನಿರ್ಮಿಸಲು ಇರಬಹುದಾದ ಸೃಜನಶೀಲತೆಯ ಕಟ್ಟಳೆಗಳೂ ಇರಬಹುದು. ಅಷ್ಟೇ ಡಾಕ್ಯುಮೆಂಟರಿ ರೀತಿಯ ವಿಷಯದ ಒಂದು ಕತೆಯನ್ನು ಹೆಚ್ಚು ಜನರಿಗೆ ತಲುಪಿಸುವ ಬಗೆಯೂ ಅದು ಇರಬಹುದು!

ಒಟ್ಟಾರೆ ವನ್ಯಜೀವಿ ಸಂರಕ್ಷಣೆಯ ದೃಷ್ಟಿಕೋನದಿಂದ ನೋಡಬೇಕಾದರೆ ಒಂದು ಹುಲಿಯ ಉಳಿವಿಗಿಂತ ಒಂದು ಪ್ರದೇಶದಲ್ಲಿ ಹುಲಿಯ ಆವಾಸವನ್ನು ಬಹುಕಾಲದವರೆಗೆ ಹೇಗೆ ಉಳಿಸಬೇಕು ಮತ್ತು ಹುಲಿ ಮತ್ತಿತರ ವನ್ಯಜೀವಿಗಳು ತಮ್ಮ ನೈಸರ್ಗಿಕ ಆವಾಸದಲ್ಲಿ ತಮ್ಮ ಸಂತತಿಯನ್ನು ಮುಂದುವರೆಸಿಕೊಂಡು ಹೋಗಲು ಹೇಗೆ ಅನುವು ಮಾಡಿಕೊಡುತ್ತೇವೆ ಎಂಬ ಚರ್ಚೆ ಹೆಚ್ಚು ಮುಖ್ಯವಾಗುತ್ತದೆ. ಚಿತ್ರದ ಕೊನೆಯಲ್ಲಿ ಹುಲಿ ಮರಿಗಳ ಉಳಿವು ಹೊಸ ಭರವಸೆಯನ್ನು ತಂದುಕೊಟ್ಟಂತೆ ಕಂಡರೂ ಅವು ತಮ್ಮ ಬದುಕನ್ನು ಹೇಗೆ ಕಟ್ಟಿಕೊಳ್ಳಬಹುದು ಎಂದು ಕೇಳಿಕೊಂಡರೆ ಉತ್ತರ ಬಹುತೇಕ ನಿರಾಶಾದಾಯಕವಾಗಿಯೇ ಇರುತ್ತದೆ. ಚಿತ್ರದ ನಾಯಕಿ ಅನುಭವಿಸುವ ಹತಾಶೆ, ಮೇಲಧಿಕಾರಿಗಳ ಅಸಹಕಾರ ಕೆಲಮಟ್ಟಿಗೆ ನಿಜವೇ ಆದರೂ ಮಾನವ ವನ್ಯಜೀವಿ ಸಂಘರ್ಷ, ಅದರ ಸುತ್ತ ಹುಟ್ಟಿಕೊಳ್ಳುವ ರಾಜಕೀಯ ಮತ್ತು ನಿಜವಾದ ಸಂತ್ರಸ್ತರ ಮತ್ತು ಕೆಳ ಹಂತದ ಸಿಬ್ಬಂದಿಯ ಕಷ್ಟ ಕಾರ್ಪಣ್ಯ, ನೋವು ಇವೆಲ್ಲವೂ ಒಂದೇ ದಿನದಲ್ಲಿ ಮುಗಿಯುವ ಸಮಸ್ಯೆಗಳಂತೂ ಅಲ್ಲವೇ ಅಲ್ಲ. ನಾಯಕನಟಿಯ ದೃಷ್ಟಿಯಿಂದ ಒಂದು ಹುಲಿಯ ಉಳಿವನ್ನು ಅತಿಮುಖ್ಯ ವಿಚಾರವೆಂಬಂತೆ ತೋರಿಸಿದ್ದರೂ ಅದರ ಸುತ್ತ ಹರಡಿಕೊಂಡಿರುವ ವಿಚಾರಗಳು ಇನ್ನೂ ಗಹನ ಮತ್ತು ಸಂಕೀರ್ಣ.

ಕೆಲವು ಕುಂದುಕೊರತೆಗಳ ಹೊರತಾಗಿಯೂ ’ಶೇರ್‌ನಿ’ ಉತ್ತಮ ಪ್ರಯತ್ನವೇ ಆಗಿದೆ. ವನ್ಯಜೀವಿಗಳ ಮತ್ತು ಅವುಗಳ ಸಂರಕ್ಷಣೆಯ ಕುರಿತು ಜನಸಾಮಾನ್ಯರಿಗೆ ಇರುವ ತಿಳಿವು ತುಂಬಾ ಸೀಮಿತವಾದದ್ದು. ಕಾಡಂಚಿನ ಜನರ, ಅರಣ್ಯ ಇಲಾಖೆಯ ತಳಮಟ್ಟದ ನೌಕರರ ಸವಾಲುಗಳು ಮತ್ತು ಬವಣೆಗಳು ಸಾಮಾನ್ಯರಿಗೆ ಅಪರಿಚಿತವೇ. ಅದನ್ನು ಸ್ವಲ್ಪವಾದರೂ ಮನದಟ್ಟು ಮಾಡಿದ್ದು ಈ ಚಿತ್ರದ ಹೆಗ್ಗಳಿಕೆ. ಜನಸಾಮಾನ್ಯರನ್ನು ಅರಣ್ಯದ ಸಮಸ್ಯೆಗಳ ಬಗ್ಗೆ ಚಿಂತನೆಗೆ ಹಚ್ಚುವಂತಾದರೇ ಈ ಸಿನಿಮಾ ಸಾರ್ಥಕವೇ!

ಹಾಗೇಯೇ ಕುತೂಹಲಕ್ಕಾಗಿ ಈ ಚಿತ್ರದ ಕುರಿತು ಜನರ ಅಭಿಪ್ರಾಯ ಏನು ಎಂದು ತಿಳಿಯಲು ಒಮ್ಮೆ ಜಾಲತಾಣವನ್ನು ಇಣುಕಿದಾಗ ’ಇದೊಂದು ತುಂಬಾ ನಿಧಾನವಾಗಿ ಸಾಗುವ ಚಿತ್ರ, ನೀರಸವಾದದ್ದು, ಡಾಕ್ಯುಮೆಂಟರಿ ಶೈಲಿಯಲ್ಲಿದೆ’ ಎಂಬಿತ್ಯಾದಿ ಕಮೆಂಟುಗಳೇ ಇದ್ದವು. ಆದರೆ ಖ್ಯಾತ ನಿರ್ದೇಶಕ ಗೊದಾರ್ದ್ ಒಂದು ಸಿನಿಮಾ ಅತ್ಯುತ್ತಮವಾಗುವುದು ಅದು ಡಾಕ್ಯುಮೆಂಟರಿಗೆ ಹತ್ತಿರವಾದಾಗ ಎನ್ನುತ್ತಾನೆ! ಆ ನಿಟ್ಟಿನಲ್ಲಿ, ಅರಣ್ಯದ ಕುರಿತು ಸ್ವಲ್ಪವಾದರೂ ಆಸಕ್ತಿಯಿದ್ದರೆ ಈ ಚಿತ್ರ ನಿಮಗೆ ಖಂಡಿತ ನಿರಾಸೆಯನ್ನಂತೂ ಮಾಡುವುದಿಲ್ಲ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...