Homeಮುಖಪುಟ2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

ಪ್ರಸಕ್ತ ವರ್ಷದಲ್ಲಿ ಅಪ್ರಾಪ್ತ ವಯಸ್ಕರ ಆತ್ಮಹತ್ಯೆಯ ಅಂಕಿ ಅಂಶವನ್ನು ಸರ್ಕಾರ ಒದಗಿಸಿಲ್ಲ

- Advertisement -
- Advertisement -

ಒಕ್ಕೂಟ ಸರ್ಕಾರವು ಮಂಗಳವಾರ ಸಂಸತ್ತಿಗೆ ಒದಗಿಸಿದ ಮಾಹಿತಿಯ ಪ್ರಕಾರ, 2020 ರಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ 11,396 ಮಕ್ಕಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ಸರ್ಕಾರ ನೀಡಿದ ಈ ಅಂಕಿ ಅಂಶದ ಪ್ರಕಾರ, ದೇಶದಲ್ಲಿ ಸರಾಸರಿ ದಿನವೊಂದಕ್ಕೆ 31 ಮಕ್ಕಳು ತಮ್ಮ ಪ್ರಾಣವನ್ನು ಕಳೆದ ವರ್ಷ ಕಳೆದುಕೊಂಡಿದ್ದಾರೆ.

“ಕಳೆದ ಮೂರು ವರ್ಷಗಳ ಲಭ್ಯವಿರುವ ಮಾಹಿತಿಯ ಪ್ರಕಾರ, 2018 ರಲ್ಲಿ 9431, 2019 ರಲ್ಲಿ 9613 ಮತ್ತು 2020 ರಲ್ಲಿ 11396 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಪ್ರಸಕ್ತ ವರ್ಷದಲ್ಲಿ ಅಪ್ರಾಪ್ತ ವಯಸ್ಕರ ಆತ್ಮಹತ್ಯೆಯ ಅಂಕಿ ಅಂಶವನ್ನು ಸರ್ಕಾರ ಒದಗಿಸಿಲ್ಲ.

ಕೊರೊನಾ ಮತ್ತು ಬೇರೆ ಸಮಯದಲ್ಲಿ ಮಾನಸಿಕ ಆರೋಗ್ಯ ಹಾಗೂ ಭಾವನಾತ್ಮಕ ಯೋಗಕ್ಷೇಮಕ್ಕಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬಗಳಿಗೆ ಮಾನಸಿಕ ಬೆಂಬಲವನ್ನು ಒದಗಿಸಲು ಶಿಕ್ಷಣ ಸಚಿವಾಲಯವು ‘ಮನೋದರ್ಪಣ’ ಎಂಬ ಪೂರ್ವಭಾವಿ ಉಪಕ್ರಮವನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದ ಟಿ.ಆರ್. ಪರಿವೇಂದರ್ ಅವರು, ಕಳೆದ ಮೂರು ವರ್ಷಗಳಲ್ಲಿ ಮಕ್ಕಳ ಆತ್ಮಹತ್ಯೆ ಪ್ರಕರಣಗಳಲ್ಲಿ ಏನಾದರೂ ಏರಿಕೆಯಾಗಿದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ:‘ದೊಡ್ಡ ತಪ್ಪಾಗಿದೆ’ – ಅಫ್ಘಾನ್‌ನ 7 ಮಕ್ಕಳು ಸೇರಿದಂತೆ 10 ನಾಗರಿಕರನ್ನು ಕೊಂದ ಬಗ್ಗೆ ತಪ್ಪೊಪ್ಪಿಕೊಂಡ ಅಮೆರಿಕಾ

ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ನಲ್ಲಿ ‘ಮನೋದರ್ಪಣ’ ವೆಬ್‌ಪುಟವನ್ನು ರಚಿಸಲಾಗಿದೆ ಎಂದು ಸಚಿವ ಅಜಯ್‌ ಮಿಶ್ರಾ ಮಾಹಿತಿ ನೀಡಿದ್ದಾರೆ. ಇದರಲ್ಲಿ ಸಲಹೆ, ಪ್ರಾಯೋಗಿಕ ಸಲಹೆಗಳು, ಪೋಸ್ಟರ್‌ಗಳು, ವೀಡಿಯೊಗಳು, ಮನೋಸಾಮಾಜಿಕ ಬೆಂಬಲ, FAQ ಗಳು ಮತ್ತು ಆನ್‌ಲೈನ್ ಪ್ರಶ್ನೆ ವ್ಯವಸ್ಥೆ, ಮಾಡಬೇಕಾದ ಮತ್ತು ಮಾಡಬಾರದಂತಹ ವಿಚಾರಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 2020 ರ ಏಪ್ರಿಲ್‌ನಲ್ಲಿ ‘ಶಾಲಾ ಮಕ್ಕಳಿಗಾಗಿ NCERT ಕೌನ್ಸೆಲಿಂಗ್ ಸೇವೆಗಳನ್ನು’ ಪ್ರಾರಂಭಿಸಿದ್ದು, ಇದು ದೇಶಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ತಮ್ಮ ಕಾಳಜಿಗಳನ್ನು ಹಂಚಿಕೊಳ್ಳಲು ಸಹಾಯ ಮಾಡುತ್ತದೆ. ದೇಶದ ವಿವಿಧ ಪ್ರದೇಶಗಳಲ್ಲಿ ಸುಮಾರು 270 ಸಲಹೆಗಾರರಿಂದ ಈ ಸೇವೆಯನ್ನು ಉಚಿತವಾಗಿ ಒದಗಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)

ಇದನ್ನೂ ಓದಿ:ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...