Homeಮುಖಪುಟ2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

ಪ್ರಸಕ್ತ ವರ್ಷದಲ್ಲಿ ಅಪ್ರಾಪ್ತ ವಯಸ್ಕರ ಆತ್ಮಹತ್ಯೆಯ ಅಂಕಿ ಅಂಶವನ್ನು ಸರ್ಕಾರ ಒದಗಿಸಿಲ್ಲ

- Advertisement -
- Advertisement -

ಒಕ್ಕೂಟ ಸರ್ಕಾರವು ಮಂಗಳವಾರ ಸಂಸತ್ತಿಗೆ ಒದಗಿಸಿದ ಮಾಹಿತಿಯ ಪ್ರಕಾರ, 2020 ರಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ 11,396 ಮಕ್ಕಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ಸರ್ಕಾರ ನೀಡಿದ ಈ ಅಂಕಿ ಅಂಶದ ಪ್ರಕಾರ, ದೇಶದಲ್ಲಿ ಸರಾಸರಿ ದಿನವೊಂದಕ್ಕೆ 31 ಮಕ್ಕಳು ತಮ್ಮ ಪ್ರಾಣವನ್ನು ಕಳೆದ ವರ್ಷ ಕಳೆದುಕೊಂಡಿದ್ದಾರೆ.

“ಕಳೆದ ಮೂರು ವರ್ಷಗಳ ಲಭ್ಯವಿರುವ ಮಾಹಿತಿಯ ಪ್ರಕಾರ, 2018 ರಲ್ಲಿ 9431, 2019 ರಲ್ಲಿ 9613 ಮತ್ತು 2020 ರಲ್ಲಿ 11396 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಪ್ರಸಕ್ತ ವರ್ಷದಲ್ಲಿ ಅಪ್ರಾಪ್ತ ವಯಸ್ಕರ ಆತ್ಮಹತ್ಯೆಯ ಅಂಕಿ ಅಂಶವನ್ನು ಸರ್ಕಾರ ಒದಗಿಸಿಲ್ಲ.

ಕೊರೊನಾ ಮತ್ತು ಬೇರೆ ಸಮಯದಲ್ಲಿ ಮಾನಸಿಕ ಆರೋಗ್ಯ ಹಾಗೂ ಭಾವನಾತ್ಮಕ ಯೋಗಕ್ಷೇಮಕ್ಕಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬಗಳಿಗೆ ಮಾನಸಿಕ ಬೆಂಬಲವನ್ನು ಒದಗಿಸಲು ಶಿಕ್ಷಣ ಸಚಿವಾಲಯವು ‘ಮನೋದರ್ಪಣ’ ಎಂಬ ಪೂರ್ವಭಾವಿ ಉಪಕ್ರಮವನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದ ಟಿ.ಆರ್. ಪರಿವೇಂದರ್ ಅವರು, ಕಳೆದ ಮೂರು ವರ್ಷಗಳಲ್ಲಿ ಮಕ್ಕಳ ಆತ್ಮಹತ್ಯೆ ಪ್ರಕರಣಗಳಲ್ಲಿ ಏನಾದರೂ ಏರಿಕೆಯಾಗಿದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ:‘ದೊಡ್ಡ ತಪ್ಪಾಗಿದೆ’ – ಅಫ್ಘಾನ್‌ನ 7 ಮಕ್ಕಳು ಸೇರಿದಂತೆ 10 ನಾಗರಿಕರನ್ನು ಕೊಂದ ಬಗ್ಗೆ ತಪ್ಪೊಪ್ಪಿಕೊಂಡ ಅಮೆರಿಕಾ

ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ನಲ್ಲಿ ‘ಮನೋದರ್ಪಣ’ ವೆಬ್‌ಪುಟವನ್ನು ರಚಿಸಲಾಗಿದೆ ಎಂದು ಸಚಿವ ಅಜಯ್‌ ಮಿಶ್ರಾ ಮಾಹಿತಿ ನೀಡಿದ್ದಾರೆ. ಇದರಲ್ಲಿ ಸಲಹೆ, ಪ್ರಾಯೋಗಿಕ ಸಲಹೆಗಳು, ಪೋಸ್ಟರ್‌ಗಳು, ವೀಡಿಯೊಗಳು, ಮನೋಸಾಮಾಜಿಕ ಬೆಂಬಲ, FAQ ಗಳು ಮತ್ತು ಆನ್‌ಲೈನ್ ಪ್ರಶ್ನೆ ವ್ಯವಸ್ಥೆ, ಮಾಡಬೇಕಾದ ಮತ್ತು ಮಾಡಬಾರದಂತಹ ವಿಚಾರಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 2020 ರ ಏಪ್ರಿಲ್‌ನಲ್ಲಿ ‘ಶಾಲಾ ಮಕ್ಕಳಿಗಾಗಿ NCERT ಕೌನ್ಸೆಲಿಂಗ್ ಸೇವೆಗಳನ್ನು’ ಪ್ರಾರಂಭಿಸಿದ್ದು, ಇದು ದೇಶಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ತಮ್ಮ ಕಾಳಜಿಗಳನ್ನು ಹಂಚಿಕೊಳ್ಳಲು ಸಹಾಯ ಮಾಡುತ್ತದೆ. ದೇಶದ ವಿವಿಧ ಪ್ರದೇಶಗಳಲ್ಲಿ ಸುಮಾರು 270 ಸಲಹೆಗಾರರಿಂದ ಈ ಸೇವೆಯನ್ನು ಉಚಿತವಾಗಿ ಒದಗಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)

ಇದನ್ನೂ ಓದಿ:ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...