Homeಕರ್ನಾಟಕಎಚ್ಚೆತ್ತ ಜೆಡಿಎಸ್ ನಾಯಕರು: ಹೋಬಳಿ ಕೇಂದ್ರಗಳಲ್ಲಿ ಸಮಾವೇಶದ ಮೂಲಕ ಮತಯಾಚನೆ!

ಎಚ್ಚೆತ್ತ ಜೆಡಿಎಸ್ ನಾಯಕರು: ಹೋಬಳಿ ಕೇಂದ್ರಗಳಲ್ಲಿ ಸಮಾವೇಶದ ಮೂಲಕ ಮತಯಾಚನೆ!

ಹೋಬಳಿ ಕೇಂದ್ರಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜೆಡಿಎಸ್ ಸಾಧನೆಗಳನ್ನು, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಲೋಪಗಳನ್ನು ಜನರಿಗೆ ಮುಟ್ಟಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

- Advertisement -
- Advertisement -

ಜೆಡಿಎಸ್ ನಾಯಕರು ಕೊಡವಿಕೊಂಡು ಎದ್ದು ನಿಂತಿದ್ದಾರೆ. ಕಳೆದ ಎರಡು ದಿನಗಳಿಂದ ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು ಶಿರಾ ಉಪಚುನಾವಣೆಯ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರವಾಗಿ ಬಿರುಸಿನ ಮತಯಾಚನೆ ಮಾಡುತ್ತಿದ್ದಾರೆ. ಹೋಬಳಿ ಕೇಂದ್ರಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜೆಡಿಎಸ್ ಸಾಧನೆಗಳನ್ನು, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಲೋಪಗಳನ್ನು ಜನರಿಗೆ ಮುಟ್ಟಿಸುವ ಕೆಲಸದಲ್ಲಿ ಜೆಡಿಎಸ್ ನಾಯಕರು ನಿರತರಾಗಿದ್ದಾರೆ. ಜೆಡಿಎಸ್ ಸಮಾವೇಶಗಳಲ್ಲಿ ಸಾವಿರಾರು ಮಂದಿ ಸೇರುತ್ತಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಪೈಪೋಟಿ ನೀಡುತ್ತ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಾಗುತ್ತಿದೆ.

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರು ಅಕ್ಟೋಬರ್ 22ರಂದು ಶಿರಾ ತಾಲೂಕಿನ ಬರಗೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಕೆಲವರಿಂದ ಜೆಡಿಎಸ್ ಮುಗಿಸುವ ಮಾತುಗಳನ್ನು ಕೇಳುತ್ತಿದ್ದೇನೆ. ಕೆ.ಆರ್.ಪೇಟೆಯಲ್ಲಿ ಆದ ಗತಿಯೇ ಇಲ್ಲೂ ಆಗುತ್ತದೆ ಎಂಬ ಮಾತುಗಳನ್ನು ಹೇಳುತ್ತಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ. ಅಂತಹ ಆಟ ಶಿರಾ ಕ್ಷೇತ್ರದಲ್ಲಿ ನಡೆಯುವುದಿಲ್ಲ ಎಂಬುದು ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಪಕ್ಷದ ಸಂಘಟನೆಗೆ ಹೋರಾಡುತ್ತೇನೆ. ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವವರು ಯುದ್ದಕ್ಕೆ ಬರಲಿ. ನಾನೂ ನೋಡಿಯೇ ಬಿಡುತ್ತೇನೆ. ಯಾವುದೇ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯಲಿ. ನಾನು ಅವರೊಂದಿಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ ಕಾರ್ಯಕರ್ತರನ್ನು ಹುರಿದುಂಬಿಸಿದರು. ನನ್ನ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ ಖುಷಿ ಇದೆ. ಸಾವಿರಾರು ಕೋಟಿ ಸಾಲ ಮನ್ನ ಮಾಡುವ ಮೂಲಕ ರೈತರಿಗೆ ಅನುಕೂಲ ಮಾಡಿದ್ದೇನೆ. ಈ ಯೋಜನೆಯಲ್ಲಿ ಶಿರಾ ತಾಲೂಕಿನ ರೈತರೂ ಕೂಡ ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದರು.

ಜೆಡಿಎಸ್ ನಲ್ಲಿ ಬೆಳೆದು ನಂತರ ಬೇರೆ ಪಕ್ಷಗಳಿಗೆ ಹೋಗುವವರೂ ಇದ್ದಾರೆ. ಅಂಥವರ ಬಗ್ಗೆ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು ಎಂದರು. ಶಾಸಕ ದಿವಂಗತ ಬಿ.ಸತ್ಯನಾರಾಯಣ ಸಜ್ಜನರು. ಅವರ ಪತ್ನಿ ಅಮ್ಮಾಜಮ್ಮ ಕಣಕ್ಕೆ ಇಳಿದಿದ್ದಾರೆ. ಕಾರ್ಯಕರ್ತರು ಅವರನ್ನು ಗೆಲ್ಲಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಮನವಿ ಮಾಡಿದರು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...