Homeಮುಖಪುಟಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

ಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

- Advertisement -
- Advertisement -

2012 ರಲ್ಲಿ ಕೂಡಂಕುಳಂ ಪರಮಾಣು ಸ್ಥಾವರದ ವಿರುದ್ಧದ ಪ್ರತಿಭಟನೆಗಳ ಕುರಿತು ಚಲನಚಿತ್ರವನ್ನು ನಿರ್ಮಿಸಿದ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದು ಭಾರತ ಪ್ರವೇಶಿಸದಂತೆ ಬಂಧಿಲಾಗಿದ್ದು, ನಂತರ ಅವರನ್ನು ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಸೆಪ್ಟೆಂಬರ್ 10 ರಂದು ನಡೆದಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

73 ವರ್ಷದ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ತಮ್ಮ ಮಕ್ಕಳಾದ ನಕೀಟಾ ಬ್ರಾಡ್‌ಬರಿ (21) ಮತ್ತು ಒಮರ್ ಬ್ರಾಡ್‌ಬರಿ (14) ಅವರೊಂದಿಗೆ ಎರಡು ವಾರಗಳ ಭಾರತ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಈ ಅವರ ಮಕ್ಕಳಿಗೆ ಭಾರತ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಬ್ರಾಡ್ಬರಿ ಅವರನ್ನು 24 ಗಂಟೆಗಳ ಕಾಲ ಬಂಧಿಸಿ ಗಡಿಪಾರು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಚಲನಚಿತ್ರ ನಿರ್ಮಾಪಕಿ ಮತ್ತು ಹೋರಾಟಗಾರ್ತಿಯು ಆಗಿರುವ ಅವರ ಪತ್ನಿ ಟ್ರೀನಾ ಐದು ತಿಂಗಳ ಹಿಂದೆ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ. ಬ್ರಾಡ್‌ಬರಿ ಅವರು ಭಾರತಕ್ಕೆ ಬಂದಿಳಿದ ಕೂಡಲೇ ಅವರನ್ನು ಬಂಧಿಸಿ 24 ಗಂಟೆಗಳ ಕಾಲ ಶೌಚಾಲಯಕ್ಕೆ ತೆರಳಲು ಕೂಡಾ ಅನುಮತಿ ನೀಡದೆ ಅಶುಚಿಯಾದ ಮತ್ತು “ಅಸಹ್ಯಕರ” ಸ್ಥಳದಲ್ಲಿ ಇರಿಸಲಾಯಿತು ಎಂದು ಆರೋಪಿಸಿದ್ದಾರೆ.

ಇದನ್ನೂಓದಿ: ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಅಷ್ಟೆ ಅಲ್ಲದೆ, ಅವರಿಗೆ ಆಸ್ಟ್ರೇಲಿಯನ್ ರಾಯಭಾರ ಕಚೇರಿಯೊಂದಿಗೆ ಸಂಪರ್ಕಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ, ಬ್ರಾಡ್‌ಬರಿ ಅವರಿಗೆ ಔಷಧಿಗಳನ್ನು ಕೂಡಾ ನಿರಾಕರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಅವರ ಮಕ್ಕಳು ಉಳಿಸಿಕೊಂಡು, ಅವರನ್ನು ಭಾರತದಿಂದ ಗಡೀಪಾರು ಮಾಡಲಾಯಿತು ಎಂದು ಅದು ಹೇಳಿದೆ.

ಅವರ ಪ್ರಸ್ತುತ ಭೇಟಿಯ ಉದ್ದೇಶ, ಅವರ 2012 ರ ಭಾರತ ಭೇಟಿಯ ಕಾರಣ ಮತ್ತು ದೇಶದಲ್ಲಿ ಅವರ ಸಂಪರ್ಕಗಳನ್ನು ವಿವರಿಸಲು ಕೇಳಲಾಯಿತು ಎಂದು ಬ್ರಾಡ್ಬರಿ ಅವರು ಹೇಳಿದ್ದಾರೆ. ತನ್ನ ಫೋನ್ ಅನ್ನು ಅನ್ಲಾಕ್ ಮಾಡಲು ಮತ್ತು ಭಾರತದಲ್ಲಿನ ತನ್ನ ಸಹಚರರ ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಳ್ಳಲು ಅಧಿಕಾರಿಗಳು ಒತ್ತಾಯಿಸಿದರಾದರೂ, ತಾನು ಅದನ್ನು “ನಿರಾಕರಿಸಿದೆ” ಅವರು ಹೇಳಿದ್ದಾರೆ.

ಈ ಹಿಂದೆ ಬ್ರಾಡ್ಬರಿ ಅವರು ತನ್ನ ಪತ್ನಿ ಮತ್ತು ಮೂರು ವರ್ಷದ ಮಗನೊಂದಿಗೆ ಅಕ್ಟೋಬರ್ 2012 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಅವರು ಪ್ರವಾಸಿ ವೀಸಾದಲ್ಲಿ ಮುಂಬೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಸದಸ್ಯರಾಗಿ ಆಗಮಿಸಿದ್ದರು. ಈ ಚಿತ್ರೋತ್ಸವದ ನಂತರ, ಬ್ರಾಡ್ಬರಿ ತನ್ನ ಕುಟುಂಬದೊಂದಿಗೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಇಡಿಂತಕರೈ ಎಂಬ ಕರಾವಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ ಈ ಗ್ರಾಮವು ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ವಿರುದ್ಧದ ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು.

ಜಪಾನ್‌ನಲ್ಲಿ 2011 ರ ಫುಕುಶಿಮಾ ಪರಮಾಣು ದುರಂತದ ನಂತರ ಅಣು ಸ್ಥಾವರದಲ್ಲಿ ಸಂಭವಿಸುವ ಯಾವುದೇ ಅಪಘಾತದ ವ್ಯಾಪ್ತಿ ಮತ್ತು ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತಿರುನಲ್ವೇಲಿ ಜಿಲ್ಲೆಯಾದ್ಯಂತ ಹರಡಿದ್ದವು.

ಇದನ್ನೂಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ಅಲ್ಲದೆ ಬ್ರಾಡ್ಬರಿ ಅವರ ಭೇಟಿಗೆ ಒಂದು ತಿಂಗಳ ಮೊದಲು, ಇಡಿಂತಕರೈನ ಸ್ಥಾವರದಲ್ಲಿ ಯುರೇನಿಯಂ ಇಂಧನ ತುಂಬಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದರಿಂದ ಪೊಲೀಸರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದ್ದರು. ಈ ವೇಳೆ ಸುಮಾರು 66 ಜನರನ್ನು, ಅದರಲ್ಲೂ ಹೆಚ್ಚಾಗಿ ಮಹಿಳೆಯರನ್ನು ಬಂಧಿಸಲಾಗಿತ್ತು. ಹಲವರ ವಿರುದ್ಧ ದೇಶದ್ರೋಹದ ಆರೋಪ ಕೂಡಾ ಮಾಡಲಾಗಿತ್ತು.

ಇಂತಹ ಸಮಯದಲ್ಲಿ ಬ್ರಾಡ್ಬರಿ ಎರಡು ವಾರಗಳ ಕಾಲ ಗ್ರಾಮದಲ್ಲಿ ಉಳಿದುಕೊಂಡರು ಮತ್ತು ಪ್ರತಿಭಟನೆಗಳು ಮತ್ತು ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಪ್ರಧಾನವಾಗಿ ಅವಲಂಬಿಸಿರುವ ಗ್ರಾಮಸ್ಥರ ದೈನಂದಿನ ಜೀವನವನ್ನು ದಾಖಲಿಸಿದ್ದರು.

ಅದೇ ವೇಳೆ ಅವರನ್ನು ಕೂಡಂಕುಳಂ ಸ್ಥಳಕ್ಕೆ ಭೇಟಿ ನೀಡದಂತೆ ತಡೆಯಲಾಗಿತ್ತು ಮತ್ತು ಕಿರುಕುಳ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದರ ನಂತರ ಅವರು ‘ಡಾಕ್ಯುಮೆಂಟಿಂಗ್ ಡಿಸೆಂಟ್: ಡೇವಿಡ್ ಬ್ರಾಡ್‌ಬರಿಸ್ ಅಕೌಂಟ್ ಆಫ್ ಹರಾಸ್‌ಮೆಂಟ್ ಇನ್ ಕೂಡಂಕುಳಂ’ ಎಂಬ ಶೀರ್ಷಿಕೆಯ ಲೇಖನವನ್ನು ಬರೆದಿದ್ದರು. ಕೂಡಂಕುಳಂನಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಧಾರವನ್ನು ಅವರು, “ತಮ್ಮ ಸ್ವಂತ ಜನರು ಮತ್ತು ಜಗತ್ತಿನ ಬಗ್ಗೆ ಬೇಜವಾಬ್ದಾರಿಯ ನಡೆ” ಎಂದು ಹೇಳಿದ್ದರು.ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ

ತಮ್ಮ ಬಂಧನ ಮತ್ತು ಗಡೀಪಾರು ಕೂಡಂಕುಳಂ ಪರಮಾಣು ಸ್ಥಾವರದ ತಮ್ಮ ಚಲನಚಿತ್ರದ ಕಾರಣಕ್ಕೆ ನಡೆದಿದೆ ಎಂದು ಬ್ರಾಡ್ಬರಿ ಅವರು ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...