Homeಮುಖಪುಟಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

ಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

- Advertisement -
- Advertisement -

2012 ರಲ್ಲಿ ಕೂಡಂಕುಳಂ ಪರಮಾಣು ಸ್ಥಾವರದ ವಿರುದ್ಧದ ಪ್ರತಿಭಟನೆಗಳ ಕುರಿತು ಚಲನಚಿತ್ರವನ್ನು ನಿರ್ಮಿಸಿದ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದು ಭಾರತ ಪ್ರವೇಶಿಸದಂತೆ ಬಂಧಿಲಾಗಿದ್ದು, ನಂತರ ಅವರನ್ನು ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಸೆಪ್ಟೆಂಬರ್ 10 ರಂದು ನಡೆದಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

73 ವರ್ಷದ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ತಮ್ಮ ಮಕ್ಕಳಾದ ನಕೀಟಾ ಬ್ರಾಡ್‌ಬರಿ (21) ಮತ್ತು ಒಮರ್ ಬ್ರಾಡ್‌ಬರಿ (14) ಅವರೊಂದಿಗೆ ಎರಡು ವಾರಗಳ ಭಾರತ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಈ ಅವರ ಮಕ್ಕಳಿಗೆ ಭಾರತ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಬ್ರಾಡ್ಬರಿ ಅವರನ್ನು 24 ಗಂಟೆಗಳ ಕಾಲ ಬಂಧಿಸಿ ಗಡಿಪಾರು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಚಲನಚಿತ್ರ ನಿರ್ಮಾಪಕಿ ಮತ್ತು ಹೋರಾಟಗಾರ್ತಿಯು ಆಗಿರುವ ಅವರ ಪತ್ನಿ ಟ್ರೀನಾ ಐದು ತಿಂಗಳ ಹಿಂದೆ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ. ಬ್ರಾಡ್‌ಬರಿ ಅವರು ಭಾರತಕ್ಕೆ ಬಂದಿಳಿದ ಕೂಡಲೇ ಅವರನ್ನು ಬಂಧಿಸಿ 24 ಗಂಟೆಗಳ ಕಾಲ ಶೌಚಾಲಯಕ್ಕೆ ತೆರಳಲು ಕೂಡಾ ಅನುಮತಿ ನೀಡದೆ ಅಶುಚಿಯಾದ ಮತ್ತು “ಅಸಹ್ಯಕರ” ಸ್ಥಳದಲ್ಲಿ ಇರಿಸಲಾಯಿತು ಎಂದು ಆರೋಪಿಸಿದ್ದಾರೆ.

ಇದನ್ನೂಓದಿ: ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಅಷ್ಟೆ ಅಲ್ಲದೆ, ಅವರಿಗೆ ಆಸ್ಟ್ರೇಲಿಯನ್ ರಾಯಭಾರ ಕಚೇರಿಯೊಂದಿಗೆ ಸಂಪರ್ಕಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ, ಬ್ರಾಡ್‌ಬರಿ ಅವರಿಗೆ ಔಷಧಿಗಳನ್ನು ಕೂಡಾ ನಿರಾಕರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಅವರ ಮಕ್ಕಳು ಉಳಿಸಿಕೊಂಡು, ಅವರನ್ನು ಭಾರತದಿಂದ ಗಡೀಪಾರು ಮಾಡಲಾಯಿತು ಎಂದು ಅದು ಹೇಳಿದೆ.

ಅವರ ಪ್ರಸ್ತುತ ಭೇಟಿಯ ಉದ್ದೇಶ, ಅವರ 2012 ರ ಭಾರತ ಭೇಟಿಯ ಕಾರಣ ಮತ್ತು ದೇಶದಲ್ಲಿ ಅವರ ಸಂಪರ್ಕಗಳನ್ನು ವಿವರಿಸಲು ಕೇಳಲಾಯಿತು ಎಂದು ಬ್ರಾಡ್ಬರಿ ಅವರು ಹೇಳಿದ್ದಾರೆ. ತನ್ನ ಫೋನ್ ಅನ್ನು ಅನ್ಲಾಕ್ ಮಾಡಲು ಮತ್ತು ಭಾರತದಲ್ಲಿನ ತನ್ನ ಸಹಚರರ ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಳ್ಳಲು ಅಧಿಕಾರಿಗಳು ಒತ್ತಾಯಿಸಿದರಾದರೂ, ತಾನು ಅದನ್ನು “ನಿರಾಕರಿಸಿದೆ” ಅವರು ಹೇಳಿದ್ದಾರೆ.

ಈ ಹಿಂದೆ ಬ್ರಾಡ್ಬರಿ ಅವರು ತನ್ನ ಪತ್ನಿ ಮತ್ತು ಮೂರು ವರ್ಷದ ಮಗನೊಂದಿಗೆ ಅಕ್ಟೋಬರ್ 2012 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಅವರು ಪ್ರವಾಸಿ ವೀಸಾದಲ್ಲಿ ಮುಂಬೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಸದಸ್ಯರಾಗಿ ಆಗಮಿಸಿದ್ದರು. ಈ ಚಿತ್ರೋತ್ಸವದ ನಂತರ, ಬ್ರಾಡ್ಬರಿ ತನ್ನ ಕುಟುಂಬದೊಂದಿಗೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಇಡಿಂತಕರೈ ಎಂಬ ಕರಾವಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ ಈ ಗ್ರಾಮವು ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ವಿರುದ್ಧದ ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು.

ಜಪಾನ್‌ನಲ್ಲಿ 2011 ರ ಫುಕುಶಿಮಾ ಪರಮಾಣು ದುರಂತದ ನಂತರ ಅಣು ಸ್ಥಾವರದಲ್ಲಿ ಸಂಭವಿಸುವ ಯಾವುದೇ ಅಪಘಾತದ ವ್ಯಾಪ್ತಿ ಮತ್ತು ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತಿರುನಲ್ವೇಲಿ ಜಿಲ್ಲೆಯಾದ್ಯಂತ ಹರಡಿದ್ದವು.

ಇದನ್ನೂಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ಅಲ್ಲದೆ ಬ್ರಾಡ್ಬರಿ ಅವರ ಭೇಟಿಗೆ ಒಂದು ತಿಂಗಳ ಮೊದಲು, ಇಡಿಂತಕರೈನ ಸ್ಥಾವರದಲ್ಲಿ ಯುರೇನಿಯಂ ಇಂಧನ ತುಂಬಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದರಿಂದ ಪೊಲೀಸರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದ್ದರು. ಈ ವೇಳೆ ಸುಮಾರು 66 ಜನರನ್ನು, ಅದರಲ್ಲೂ ಹೆಚ್ಚಾಗಿ ಮಹಿಳೆಯರನ್ನು ಬಂಧಿಸಲಾಗಿತ್ತು. ಹಲವರ ವಿರುದ್ಧ ದೇಶದ್ರೋಹದ ಆರೋಪ ಕೂಡಾ ಮಾಡಲಾಗಿತ್ತು.

ಇಂತಹ ಸಮಯದಲ್ಲಿ ಬ್ರಾಡ್ಬರಿ ಎರಡು ವಾರಗಳ ಕಾಲ ಗ್ರಾಮದಲ್ಲಿ ಉಳಿದುಕೊಂಡರು ಮತ್ತು ಪ್ರತಿಭಟನೆಗಳು ಮತ್ತು ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಪ್ರಧಾನವಾಗಿ ಅವಲಂಬಿಸಿರುವ ಗ್ರಾಮಸ್ಥರ ದೈನಂದಿನ ಜೀವನವನ್ನು ದಾಖಲಿಸಿದ್ದರು.

ಅದೇ ವೇಳೆ ಅವರನ್ನು ಕೂಡಂಕುಳಂ ಸ್ಥಳಕ್ಕೆ ಭೇಟಿ ನೀಡದಂತೆ ತಡೆಯಲಾಗಿತ್ತು ಮತ್ತು ಕಿರುಕುಳ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದರ ನಂತರ ಅವರು ‘ಡಾಕ್ಯುಮೆಂಟಿಂಗ್ ಡಿಸೆಂಟ್: ಡೇವಿಡ್ ಬ್ರಾಡ್‌ಬರಿಸ್ ಅಕೌಂಟ್ ಆಫ್ ಹರಾಸ್‌ಮೆಂಟ್ ಇನ್ ಕೂಡಂಕುಳಂ’ ಎಂಬ ಶೀರ್ಷಿಕೆಯ ಲೇಖನವನ್ನು ಬರೆದಿದ್ದರು. ಕೂಡಂಕುಳಂನಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಧಾರವನ್ನು ಅವರು, “ತಮ್ಮ ಸ್ವಂತ ಜನರು ಮತ್ತು ಜಗತ್ತಿನ ಬಗ್ಗೆ ಬೇಜವಾಬ್ದಾರಿಯ ನಡೆ” ಎಂದು ಹೇಳಿದ್ದರು.ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ

ತಮ್ಮ ಬಂಧನ ಮತ್ತು ಗಡೀಪಾರು ಕೂಡಂಕುಳಂ ಪರಮಾಣು ಸ್ಥಾವರದ ತಮ್ಮ ಚಲನಚಿತ್ರದ ಕಾರಣಕ್ಕೆ ನಡೆದಿದೆ ಎಂದು ಬ್ರಾಡ್ಬರಿ ಅವರು ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...